AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೂಟ್ ಸೆಲೆಕ್ಟ್​’ ಮೂಲಕ ನೇರವಾಗಿ ರಿಲೀಸ್​ ಆಗಲಿದೆ ‘ಡಿಯರ್​ ವಿಕ್ರಮ್​’; ಗಮನ ಸೆಳೆದ ಟ್ರೇಲರ್​

Sathish Ninasam | Shraddha Srinath: ಪ್ರೇಕ್ಷಕರ ಮನದಲ್ಲಿ ‘ಡಿಯರ್​ ವಿಕ್ರಮ್​’ ಸಿನಿಮಾದ ಬಗ್ಗೆ ಕುತೂಹಲ ಮೂಡಿಸುವಲ್ಲಿ ಈ ಟ್ರೇಲರ್​ ಯಶಸ್ವಿ ಆಗಿದೆ. ಜೂನ್​ 30ರಂದು ‘ವೂಟ್​ ಸೆಲೆಕ್ಟ್’​ ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್​ ಆರಂಭಿಸಲಿದೆ.​

‘ವೂಟ್ ಸೆಲೆಕ್ಟ್​’ ಮೂಲಕ ನೇರವಾಗಿ ರಿಲೀಸ್​ ಆಗಲಿದೆ ‘ಡಿಯರ್​ ವಿಕ್ರಮ್​’; ಗಮನ ಸೆಳೆದ ಟ್ರೇಲರ್​
‘ಡಿಯರ್ ವಿಕ್ರಮ್’ ಸಿನಿಮಾದ ಸುದ್ದಿಗೋಷ್ಠಿ
TV9 Web
| Edited By: |

Updated on: Jun 25, 2022 | 7:15 AM

Share

ನಟ ಸತೀಶ್​ ನೀನಾಸಂ (Sathish Ninasam) ಅವರು ಮೊದಲಿನಿಂದಲೂ ಭಿನ್ನವಾದ ಕಥಾಹಂದರಗಳ ಸಿನಿಮಾ ಒಪ್ಪಿಕೊಳ್ಳುತ್ತಲೇ ಬರುತ್ತಿದ್ದಾರೆ. ಅದೇ ಪ್ರಕಾರಕ್ಕೆ ಸೇರುವ ಚಿತ್ರ ‘ಡಿಯರ್​ ವಿಕ್ರಮ್​’. ಈ ಮೊದಲು ‘ಗೋದ್ರಾ’ ಎಂದಿದ್ದ ಈ ಸಿನಿಮಾದ ಶೀರ್ಷಿಕೆಯನ್ನು ಇತ್ತೀಚೆಗೆ ‘ಡಿಯರ್​ ವಿಕ್ರಮ್​’ (Dear Vikram) ಎಂದು ಬದಲಾಯಿಸಲಾಯಿತು. ಇನ್ನೇನು ಕೆಲವೇ ದಿನಗಳಲ್ಲಿ ಈ ಸಿನಿಮಾವನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳಬಹುದು. ಆದರೆ ಚಿತ್ರಮಂದಿರದಲ್ಲಿ ಅಲ್ಲ. ಬದಲಿಗೆ, ನೇರವಾಗಿ ಒಟಿಟಿ ಮೂಲಕ ರಿಲೀಸ್​ ಮಾಡಲು ನಿರ್ಧರಿಸಲಾಗಿದೆ. ಜೂನ್​ 30ರಿಂದ ಈ ಸಿನಿಮಾ ‘ವೂಟ್​ ಸೆಲೆಕ್ಟ್​’ನಲ್ಲಿ (Voot Select) ವೀಕ್ಷಣೆಗೆ ಲಭ್ಯವಾಗಲಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ಸಿನಿಮಾಗೆ ಶ್ರದ್ಧಾ ಶ್ರೀನಾಥ್​ ನಾಯಕಿ.

ಒಂದಷ್ಟು ದಿನಗಳ ಹಿಂದೆ ‘ಡಿಯರ್ ವಿಕ್ರಮ್​’ ಸಿನಿಮಾ ಟೀಸರ್​ ಮೂಲಕ ಗಮನ ಸೆಳೆದಿತ್ತು. ಈಗ ಟ್ರೇಲರ್ ಕೂಡ ಅನಾವರಣ ಆಗಿದ್ದು, ಚಿತ್ರದ ಬಗ್ಗೆ ಇನ್ನಷ್ಟು ವಿವರಗಳು ತೆರೆದುಕೊಂಡಿವೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸುವಲ್ಲಿ ಈ ಟ್ರೇಲರ್​ ಯಶಸ್ವಿ ಆಗಿದೆ. ಇದು ಮಾಮೂಲಿ ನಾಯಕ-ನಾಯಕಿ ನಡುವಿನ ಲವ್​ ಸ್ಟೋರಿ ಅಲ್ಲ. ಕೇವಲ ವಿಲನ್​ ಜೊತೆಗಿನ ನಾಯಕನ ಹೊಡಿಬಡಿ ಕಹಾನಿ ಅಲ್ಲ. ಸಮಾಜದ ಕೆಲವು ಗಂಭೀರ ವಿಚಾರಗಳ ಕುರಿತಾದ ಸಿನಿಮಾ ಎಂಬುದು ಟ್ರೇಲರ್​ನಿಂದ ತಿಳಿದುಬಂದಿದೆ.

ಇದನ್ನು ಕ್ರಾಂತಿಕಾರಿಯೊಬ್ಬನ ಪ್ರೇಮಕತೆಯನ್ನು ಒಳಗೊಂಡ ಸಿನಿಮಾ ಎನ್ನಬಹುದು. ಸತೀಶ್​ ನೀನಾಸಂ ಅವರ ವೃತ್ತಿಜೀವನದಲ್ಲಿ ನೇರವಾಗಿ ಒಟಿಟಿಯಲ್ಲಿ ತೆರೆಕಾಣುತ್ತಿರುವ ಮೊದಲ ಸಿನಿಮಾ ಇದು. ಜೇಕಬ್ ವರ್ಗೀಸ್ ಜೊತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ಕೆ.ಎಸ್. ನಂದೀಶ್ ಅವರು ‘ಡಿಯರ್ ವಿಕ್ರಮ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಹಾಸನ, ಭಟ್ಕಳ, ಕರ್ನೂಲ್ ಹಾಗೂ ಮಲೇಷ್ಯಾದಲ್ಲಿ ಚಿತ್ರೀಕರಣ ಮಾಡಲಾಗಿದೆ.

ಇದನ್ನೂ ಓದಿ
Image
Bhool Bhulaiyaa 2: ಒಟಿಟಿಗೆ ಬರ್ತಿದೆ ‘ಭೂಲ್​ ಭುಲಯ್ಯ 2’; ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ಗೆ ಸಿಹಿ ಸುದ್ದಿ​ ನೀಡಿದ ನೆಟ್​ಫ್ಲಿಕ್ಸ್​
Image
ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ 200 ಕೋಟಿ ರೂಪಾಯಿ ಲಾಭ ಮಾಡಿದ ‘ವಿಕ್ರಮ್​’ ಸಿನಿಮಾ
Image
‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

ಸತೀಶ್​ ನೀನಾಸಂ ಮತ್ತು ಶ್ರದ್ಧಾ ಶ್ರೀನಾಥ್​ ಮಾತ್ರವಲ್ಲದೇ ವಸಿಷ್ಠ ಸಿಂಹ, ಸೋನು ಗೌಡ, ಅಚ್ಯುತ್ ಕುಮಾರ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇವರೆಲ್ಲರ ನಟನೆಯಿಂದಾಗಿ ಸಿನಿಮಾದ ಪಾತ್ರವರ್ಗ ಬಲವಾಗಿದೆ. ‘ವಾಸ್ತವವನ್ನು ಬಣ್ಣದ ಕನ್ನಡಕದೊಳಗಿನಿಂದ ಮಾತ್ರ ನೋಡಿ ಬೆಳೆದ ಹುಡುಗಿಯ ಪಾತ್ರ ನನ್ನದು. ಇಂಥ ಡಿಫರೆಂಟ್​ ಪಾತ್ರವನ್ನು ಮರೆಯಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ ಶ್ರದ್ಧಾ ಶ್ರೀನಾಥ್​.

ಇದನ್ನೂ ಓದಿ: ಕೆಲವೊಮ್ಮೆ ರೈತರ ಪರವಾಗಿ ನಿಂತರೂ ವಿಲನ್​ ಆಗುತ್ತೇವೆ; ಸತೀಶ್​ ನೀನಾಸಂ ನೇರ ಮಾತು

ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?