AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಿಯೋ ಸಿನಿಮಾ’ದಲ್ಲಿ 24 ಗಂಟೆಯೂ ಬಿಗ್​ ಬಾಸ್​ ಉಚಿತ ಪ್ರಸಾರ; ವೀಕ್ಷಕರಿಗೂ ಬಹುಮಾನ ಗೆಲ್ಲುವ ಅವಕಾಶ

Bigg Boss Kannada on Jio Cinema: ದಿನದ 24 ಗಂಟೆಯೂ ಬಿಗ್​ ಬಾಸ್​ ಮನೆಯೊಳಗೆ ಏನು ನಡೆಯುತ್ತಿದೆ ಎಂಬುದನ್ನು ಪ್ರೇಕ್ಷಕರು ಜಿಯೋ ಸಿನಿಮಾ ಒಟಿಟಿಯಲ್ಲಿ ನೋಡಬಹುದು. ಅದು ಕೂಡ ಉಚಿತವಾಗಿ! ‘ಕಲರ್ಸ್‌ ಕನ್ನಡ’ದಲ್ಲಿ ಪ್ರಸಾರ ಆಗುವ ಸಂಚಿಕೆಯ ಹೊರತಾಗಿಯೂ ಇನ್ನೂ ಅನೇಕ ಮನರಂಜನಾ ಕಂಟೆಂಟ್‌ಗಳು ಜಿಯೋ ಸಿನಿಮಾದಲ್ಲಿ ವೀಕ್ಷಣೆಗೆ ಲಭ್ಯವಾಗಲಿವೆ.

‘ಜಿಯೋ ಸಿನಿಮಾ’ದಲ್ಲಿ 24 ಗಂಟೆಯೂ ಬಿಗ್​ ಬಾಸ್​ ಉಚಿತ ಪ್ರಸಾರ; ವೀಕ್ಷಕರಿಗೂ ಬಹುಮಾನ ಗೆಲ್ಲುವ ಅವಕಾಶ
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Oct 03, 2023 | 5:44 PM

Share

ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಎಂಬ ಖ್ಯಾತಿ ಹೊಂದಿರುವ ‘ಬಿಗ್​ ಬಾಸ್​’ ಮತ್ತೆ ಆರಂಭ ಆಗುತ್ತಿದೆ. ಕನ್ನಡದಲ್ಲಿ 10ನೇ ಸೀಸನ್​ (Bigg Boss Kannada Season 10) ಎಂಬ ಕಾರಣಕ್ಕೆ ವಿಶೇಷ ಆಸಕ್ತಿ ಮೂಡಿದೆ. ಅಕ್ಟೊಬರ್ 8ರಂದು ಈ ರಿಯಾಲಿಟಿ ಶೋ ಆರಂಭ ಆಗಲಿದೆ. ಅಂದು ಸಂಜೆ 6 ಗಂಟೆಗೆ ಅದ್ದೂರಿ ವೇದಿಕೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್​ ಆಗಲಿದೆ. ಅ.9ರಿಂದ ಪ್ರತಿ ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಸಂಚಿಕೆ ಪ್ರಸಾರ ಆಗಲಿದೆ. ಈ ಬಾರಿ ದಿನದ 24 ಗಂಟೆಯೂ ಬಿಗ್​ ಬಾಸ್​ ಮನೆಯೊಳಗೆ ಏನು ನಡೆಯುತ್ತಿದೆ ಎಂಬುದನ್ನು ಪ್ರೇಕ್ಷಕರು ಜಿಯೋ ಸಿನಿಮಾ (Jio Cinema) ಒಟಿಟಿಯಲ್ಲಿ ನೋಡಬಹುದು. ಅದು ಕೂಡ ಉಚಿತವಾಗಿ! ಈ ಸೀಸನ್​ನಲ್ಲೂ ಕಿಚ್ಚ ಸುದೀಪ್​ (Kichcha Sudeep) ಅವರು ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ.

ಟಿವಿಯಲ್ಲಿ ಬಿಗ್​ ಬಾಸ್​ ನೋಡುವುದಕ್ಕೂ ‘ಜಿಯೋ ಸಿನಿಮಾ’ ಮೂಲಕ ವೀಕ್ಷಿಸುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ‘ಕಲರ್ಸ್‌ ಕನ್ನಡ’ ಚಾನೆಲ್​ನಲ್ಲಿ ಪ್ರಸಾರ ಆಗುವ ಪ್ರತಿ ದಿನದ ಸಂಚಿಕೆಯ ಹೊರತಾಗಿಯೂ ಇನ್ನೂ ಅನೇಕ ಎಕ್ಸ್‌ಕ್ಲ್ಯೂಸಿವ್‌ ಹಾಗೂ ಅನ್‌ಸೀನ್‌ ಮನರಂಜನಾ ಕಂಟೆಂಟ್‌ಗಳು ಜಿಯೋ ಸಿನಿಮಾದಲ್ಲಿ ವೀಕ್ಷಣೆಗೆ ಲಭ್ಯವಾಗಲಿವೆ. ಆ ಕಾರಣದಿಂದ ಪ್ರೇಕ್ಷಕರಿಗೆ ಈ ಬಾರಿಯ ಬಿಗ್​ ಬಾಸ್​ ಶೋನಲ್ಲಿ ಮಸ್ತ್​ ಮನರಂಜನೆ ಸಿಗಲಿದೆ.

ಇದನ್ನೂ ಓದಿ: ಟ್ರೋಲ್​ ಆದ ಬಿಗ್​ ಬಾಸ್​ ಸ್ಪರ್ಧಿಗಳ ಬಗ್ಗೆ ಪ್ರಶ್ನೆ: ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್​ ಗರಂ

ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಸಂಬಂಧಿಸಿದ ‘ಅನ್‌ಸೀನ್‌ ಕಥೆಗಳು’, ‘ಬಿಗ್‌ ನ್ಯೂಸ್‌’, ‘ಡೀಪ್ ಆಗಿ ನೋಡಿ’, ‘ಜಿಯೋ ಸಿನಿಮಾ ಫನ್‌ ಫ್ರೈಡೇ’ ಸೇರಿದಂತೆ ಹಲವು ಬಗೆಯಲ್ಲಿ ದೊಡ್ಮನೆ ಒಳಗಿನ ಇಂಟರೆಸ್ಟಿಂಗ್​ ಘಟನೆಗಳನ್ನು ವೀಕ್ಷಕರಿಗೆ ತಲುಪಿಸಲು ಸಕಲ ತಯಾರಿ ನಡೆದಿದೆ. ಬಿಗ್​ ಬಾಸ್​ ಮನೆಯ ಒಳಗೆ ನಡೆಯುವ ಪ್ರತಿಯೊಂದು ನಾಟಕೀಯ ಬೆಳವಣಿಗೆಗಳನ್ನು ಚುಟುಕಾಗಿ ಕಟ್ಟಿಕೊಡುವ ‘ಲೈವ್ ಶಾರ್ಟ್‌’ ಕೂಡ ಈ ಬಾರಿಯ ಪ್ರಮುಖ ಆಕರ್ಷಣೆ ಆಗಿರಲಿದೆ.

ಇಷ್ಟೇ ಅಲ್ಲದೇ ‘ಮೀಮ್‌ ದ ಮೊಮೆಂಟ್‌’, ‘ವಾಚ್‌ ಆಂಡ್ ವಿನ್’, ‘ಹೈಪ್‌ ಚಾಟ್‌’, ‘ವಿಡಿಯೊ ವಿಚಾರ್‍‌’ ಮೂಲಕ ಬಿಗ್‌ಬಾಸ್‌ನ ವೀಕ್ಷಕರಿಗೆ ಸಂವಾದದಲ್ಲಿ ಭಾಗಿ ಆಗುವ ಅವಕಾಶ ಕೂಡ ಸಿಗಲಿದೆ. ಇದೇ ಮೊದಲ ಬಾರಿಗೆ ವೀಕ್ಷಕರಿಗೆ ಬಹುಮಾನ ಗೆಲ್ಲುವ ಚಾನ್ಸ್​ ಸಹ ನೀಡಲಾಗುತ್ತಿದೆ. ಟಿವಿಯಲ್ಲಿ ಬಿಗ್​ ಬಾಸ್​ ಸಂಚಿಕೆ ನೋಡಿ, ಅಲ್ಲಿ ಕೇಳುವ ಪ್ರಶ್ನೆಗಳಿಗೆ ಜಿಯೋ ಸಿನಿಮಾದಲ್ಲಿ ಉತ್ತರಿಸಿದರೆ ಪ್ರತಿ ದಿನ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಬಂಪರ್​ ಅವಕಾಶ ಸಿಗಲಿದೆ. ವೀಕ್ಷಕರು ನಡೆಸುವ ಸಂವಾದದಿಂದ ಸ್ಪರ್ಧಿಗಳ ಭವಿಷ್ಯ ಕೂಡ ನಿರ್ಧಾರ ಆಗಲಿದೆ.

ಇದನ್ನೂ ಓದಿ: ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಸುದ್ದಿಗೋಷ್ಠಿ: ಹೊಸ ಸೀಸನ್​ ಬಗ್ಗೆ ಕಿಚ್ಚ ಸುದೀಪ್​ ಹೇಳೋದೇನು?

ಈ ಬಾರಿಯ ಬಿಗ್​ ಬಾಸ್​ ಮನೆಯನ್ನು ಹೊಸದಾಗಿ ನಿರ್ಮಾಣ ಮಾಡಲಾಗಿದೆ. 12 ಸಾವಿರ ಚದರ ಅಡಿ ಇರುವ ಇದು ಭಾರತದಲ್ಲೇ ಅತಿ ದೊಡ್ಡ ಬಿಗ್​ ಬಾಸ್​ ಮನೆ ಎಂಬ ಖ್ಯಾತಿಗೆ ಒಳಗಾಗುತ್ತಿದೆ. ಈ ಮನೆಯ ವಿಸ್ತಾರಕ್ಕೆ ತಕ್ಕಂತೆಯೇ ಟಾಸ್ಕ್​ಗಳು ಕೂಡ ಭಿನ್ನವಾಗಿ ಮತ್ತು ದೊಡ್ಡದಾಗಿ ಇರಲಿವೆ. ಸ್ಪರ್ಧಿಗಳ ಮೇಲೆ 73 ಕ್ಯಾಮೆರಾ ಕಣ್ಣುಗಳು ಇರಲಿವೆ. ಸಾವಿರಾರು ತಂತ್ರಜ್ಞರು ಬಿಗ್​ ಬಾಸ್​ ತೆರೆಯ ಹಿಂದೆ ಕೆಲಸ ಮಾಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ