ಹುಡುಗರು ಜಾನ್ವಿನ ​ನೋಡಿದಾಕ್ಷಣ ಮೊದಲು ಗಮನಿಸೋದೇನು? ಮುಚ್ಚುಮರೆ ಇಲ್ಲದೆ ಉತ್ತರಿಸಿದ ನಟಿ  

ಪ್ರಶ್ನೆ ವಿವಾದಾತ್ಮಕವಾಗಿ ಕಂಡರೆ ಸೆಲೆಬ್ರಿಟಿಗಳು ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಆದರೆ, ಜಾನ್ವಿ ಆ ರೀತಿ ಮಾಡಿಲ್ಲ. ಮುಚ್ಚುಮರೆ ಇಲ್ಲದೆ ಉತ್ತರ ನೀಡಿದ್ದಾರೆ.

ಹುಡುಗರು ಜಾನ್ವಿನ ​ನೋಡಿದಾಕ್ಷಣ ಮೊದಲು ಗಮನಿಸೋದೇನು? ಮುಚ್ಚುಮರೆ ಇಲ್ಲದೆ ಉತ್ತರಿಸಿದ ನಟಿ  
ಜಾನ್ವಿ ಕಪೂರ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 05, 2024 | 3:08 PM

ನಟಿ ಜಾನ್ವಿ ಕಪೂರ್ ಹಾಗೂ ಅವರ ಸಹೋದರಿ ಖುಷಿ ಕಪೂರ್ (Kushi kapoor) ಅವರು ‘ಕಾಫಿ ವಿತ್ ಕರಣ್ ಸೀಸನ್ 8’ರ ಅತಿಥಿ ಆಗಿ ಆಗಮಿಸಿದ್ದರು. ಈ ವೇಳೆ ಅವರು ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ವೃತ್ತಿ ಬದುಕು, ಮುಂಬರುವ ಸಿನಿಮಾಗಳ ಕುರಿತು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದರ ಜೊತೆ ಅವರು ಹೇಳಿದ ಒಂದು ಮಾತು ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

‘ಕಾಫಿ ವಿತ್ ಕರಣ್’ ಹಲವು ವಿವಾದಗಳನ್ನು ಹುಟ್ಟುಹಾಕಿದೆ. ಕರಣ್ ಜೋಹರ್ ಅವರು ನಡೆಸಿಕೊಡೋ ಈ ಶೋನಲ್ಲಿ ಹಲವು ಅಡಲ್ಟ್ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅನೇಕ ಸೆಲೆಬ್ರಿಟಿಗಳು ಇದಕ್ಕೆ ಮುಚ್ಚುಮರೆ ಇಲ್ಲದೆ ಉತ್ತರ ನೀಡುತ್ತಾರೆ. ಕೆಲವು ಸಂದರ್ಭಗಳಲ್ಲಿ ಸೆಲೆಬ್ರಿಟಿಗಳು ಪ್ರಶ್ನೆಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಆದರೆ, ಜಾನ್ವಿ ಆ ರೀತಿ ಮಾಡಿಲ್ಲ. ಮುಚ್ಚುಮರೆ ಇಲ್ಲದೆ ಉತ್ತರ ನೀಡಿದ್ದಾರೆ.

ಕರಣ್ ಜೋಹರ್ ಶೋನಲ್ಲಿ ರ‍್ಯಾಪಿಡ್ ಫೈರ್ ರೌಂಡ್ ಇರುತ್ತದೆ. ‘ಬಾಲಿವುಡ್ ನಟರಿಂದ ಬಂದ ಫ್ಲರ್ಟ್ ಮೆಸೇಜ್ ಬಗ್ಗೆ ಹೇಳಿ’ ಎಂದು ಜಾನ್ವಿ ಕಪೂರ್​ಗೆ ಕೇಳಿದರು ಕರಣ್ ಜೋಹರ್. ‘ನಾನು ನಿಮ್ಮ ಎಲ್ಲ ಸುಂದರ ಅಂಗಗಳನ್ನು ನೋಡಬಹುದೇ’ ಎಂದು ನಟನೋರ್ವ ಪ್ರಶ್ನೆ ಕೇಳಿದ್ದರಂತೆ. ಆದರೆ, ಇದನ್ನು ಕೇಳಿದ್ದು ಯಾರು ಎನ್ನುವ ವಿಚಾರ ರಿವೀಲ್ ಆಗಿಲ್ಲ.

ಈ ವೇಳೆ ಕರಣ್ ಅವರು, ‘ಹುಡುಗರು ನಿಮ್ಮನ್ನು ನೋಡಿದಾಗ ಮೊದಲು ಗಮನಿಸೋದು ಏನು’ ಎಂದು ಕೇಳಿದ್ದಾರೆ. ಇದಕ್ಕೆ ಜಾನ್ವಿ ಕಪೂರ್ ಅವರು ನೇರ ಉತ್ತರ ಕೊಟ್ಟಿದ್ದಾರೆ. ‘ನನ್ನ ಕಣ್ಣುಗಳನ್ನು ನೋಡುತ್ತೇನೆ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ಅವರು ಕಣ್ಣು ಬೇರೆ ಕಡೆ ಇರುತ್ತದೆ’ ಎಂದು ಜಾನ್ವಿ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ದೀಪಿಕಾ-ರಣವೀರ್ ದಂಪತಿಯ ಟ್ರೋಲ್ ಮಾಡಿದವರಿಗೆ ಮಧ್ಯ ಬೆರಳು ತೋರಿಸಿದ ಕರಣ್ ಜೋಹರ್

ಶೋ ಆರಂಭದಲ್ಲೇ ಕರಣ್ ಜೋಹರ್ ಅವರು ಇವರ ಡೇಟಿಂಗ್ ವಿಚಾರ ಬಿಚ್ಚಿಟ್ಟರು. ‘ಜಾನ್ವಿ ಹಾಗೂ ಖುಷಿ ಇಬ್ಬರಿಗೂ ಬಾಯ್​ಫ್ರೆಂಡ್ ಇದ್ದಾರೆ’ ಎಂದಿದ್ದಾರೆ ಕರಣ್. ಜಾನ್ವಿ ಕಪೂರ್ ಅವರು ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಅವರು ಜೊತೆಯಾಗಿದ್ದಾರೆ. ಶೂಟಿಂಗ್ ಮಧ್ಯೆ ಅವರು ಇಂದು (ಜನವರಿ 5) ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಖುಷಿ ಅವರು ‘ದಿ ಆರ್ಚೀಸ್’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು