AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?

Bigg Boss OTT kannada: ‘ಜಿಂಗಲಕಾ ಲಕಾ ಲಕಾ..’ ಈ ವಾಕ್ಯ ಕೇಳಿದ ತಕ್ಷಣ ನೆನಪಿಗೆ ಬರೋದು ಆರ್ಯವರ್ಧನ್ ಹೆಸರು. ಈ ಡೈಲಾಗ್ ಮೂಲಕ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ದೊಡ್ಡ ಸಂಖ್ಯೆಯ ಮಂದಿ ಹಿಂಬಾಲಿಸುತ್ತಾರೆ.

Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 06, 2022 | 6:02 PM

Share

Bigg Boss OTT Kannada Season 1: ‘ಬಿಗ್ ಬಾಸ್ ಒಟಿಟಿ’ಗೆ ಆರ್ಯವರ್ಧನ್​ ಗುರೂಜಿ (Aryavardhan Guruji) ಅವರ ಎಂಟ್ರಿ ಆಗಿದೆ. ಮೊದಲ ಸ್ಪರ್ಧಿಯಾಗಿ ಅವರು ದೊಡ್ಮನೆ ಸೇರಿದ್ದಾರೆ. ಆರ್ಯವರ್ಧನ್ ಅವರು ಸದಾ ಟ್ರೋಲ್ ಆಗುವ ಮೂಲಕವೇ ಹೆಚ್ಚು ಸುದ್ದಿ ಆಗಿದ್ದಾರೆ. ಅವರು ಜ್ಯೋತಿಷ್ಯ ಶಾಸ್ತ್ರವನ್ನೂ ಹೇಳುತ್ತಾರೆ. ಐಪಿಎಲ್ ಸಂದರ್ಭದಲ್ಲಿ ಅವರು ನೀಡುತ್ತಿದ್ದ ಪ್ರಿಡಿಕ್ಷನ್ ಸಾಕಷ್ಟು ಸುದ್ದಿ ಆಗುತ್ತಿತ್ತು. ಈ ವಿಚಾರದಲ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆಗಿದ್ದರು. ಈಗ ಆರ್ಯವರ್ಧನ್ ಅವರು ಬಿಗ್ ಬಾಸ್ ಮನೆ ಸೇರಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

‘ಜಿಂಗಲಕಾ ಲಕಾ ಲಕಾ..’ ಈ ವಾಕ್ಯ ಕೇಳಿದ ತಕ್ಷಣ ನೆನಪಿಗೆ ಬರೋದು ಆರ್ಯವರ್ಧನ್ ಹೆಸರು. ಈ ಡೈಲಾಗ್ ಮೂಲಕ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ದೊಡ್ಡ ಸಂಖ್ಯೆಯ ಮಂದಿ ಹಿಂಬಾಲಿಸುತ್ತಾರೆ. ಈಗ ‘ಬಿಗ್ ಬಾಸ್​ ಒಟಿಟಿ’ ಮೂಲಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಲಿದೆ.

ಇದನ್ನೂ ಓದಿ
Image
‘ಬಿಗ್ ಬಾಸ್’ ಮನೆಯಲ್ಲಿ ಸುದೀಪ್ ಹೋಲುವ ಮೂರ್ತಿ; ಪ್ರತಿ ವಿಚಾರಕ್ಕೂ ವಿವರಣೆ ನೀಡಿದ ಕಿಚ್ಚ
Image
Bigg Boss OTT: ‘ಬಿಗ್ ಬಾಸ್​ ಒಟಿಟಿ’ಗೆ ವಾಸುಕಿ ವೈಭವ್ ಎಂಟ್ರಿ; ಮಾಜಿ ಸ್ಪರ್ಧಿ ಕಂಡು ಫ್ಯಾನ್ಸ್ ಖುಷ್
Image
Bigg Boss OTT Kannada: ಈ ಬಾರಿಯ ‘ಬಿಗ್ ಬಾಸ್ ಒಟಿಟಿ’ ಪ್ರಸಾರ ಎಷ್ಟು ಗಂಟೆಗೆ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಉತ್ತರ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ

ಐಪಿಎಲ್ ಸಂದರ್ಭದಲ್ಲಿ ಖಾಸಗಿ ವಾಹಿನ ನಡೆಸಿಕೊಡುವ ಶೋಗೆ ಅವರು ತೆರಳುತ್ತಿದ್ದರು. ಐಪಿಎಲ್​ನಲ್ಲಿ ಯಾವ ತಂಡ ಗೆಲ್ಲುತ್ತದೆ, ಯಾರು ಹೆಚ್ಚು ರನ್ ಬಾರಿಸುತ್ತಾರೆ, ಯಾರು ಹೆಚ್ಚು ವಿಕೆಟ್ ಪಡೆಯುತ್ತಾರೆ ಎಂಬಿತ್ಯಾದಿ ವಿಚಾರಗಳನ್ನು ಪ್ರಿಡಿಕ್ಟ್ ಮಾಡುತ್ತಿದ್ದರು. ಆಟಗಾರನ ಜರ್ಸಿ ಸಂಖ್ಯೆ ಆಧಾರದ ಮೇಲೂ ಆ ಆಟಗಾರ ಎಷ್ಟು ರನ್ ಹೊಡೆಯುತ್ತಾನೆ ಎಂಬಿತ್ಯಾದಿ ವಿಚಾರಗಳಲ್ಲಿ ಅವರು ಭವಿಷ್ಯ ನುಡಿಯುತ್ತಿದ್ದರು. ಆದರೆ, ಈ ಭವಿಷ್ಯ ತಪ್ಪಾಗಿದ್ದೇ ಹೆಚ್ಚು. ಈ ಕಾರಣದಿಂದ ಅವರು ಸಾಕಷ್ಟು ಟ್ರೋಲ್ ಆಗುತ್ತಿದ್ದರು.

ಇದನ್ನೂ ಓದಿ: Sonu Srinivas Gouda: ‘ಬಿಗ್ ಬಾಸ್ ಒಟಿಟಿ’ ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಎಂಟ್ರಿ

ಸೋಶಿಯಲ್ ಮೀಡಿಯಾದಲ್ಲಿ ಆರ್ಯವರ್ಧನ್ ಗುರೂಜಿ ಅವರ ಹಲವು ಟ್ರೋಲ್​ಗಳು ಕಾಣ ಸಿಗುತ್ತವೆ. ಈಗ ಅವರು ‘ಬಿಗ್ ಬಾಸ್​’ಗೆ ಎಂಟ್ರಿ ಕೊಡುತ್ತಿರುವುದರಿಂದ ಸಹಜವಾಗಿಯೇ ಒಂದಷ್ಟು ಕುತೂಹಲ ಮೂಡಿದೆ. ಅವರು ಯಾವ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಾರೆ ಎಂಬುದು ಸದ್ಯದ ಕುತೂಹಲ.

Published On - 4:01 pm, Sat, 6 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!