AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್​ನಲ್ಲಿ ಸ್ಪರ್ಧಿಗಳ ಸಂಭಾವನೆ ಎಷ್ಟು?; ಶಮಿತಾ ಶೆಟ್ಟಿಗಿಂತಲೂ ಹೆಚ್ಚು ಸಂಭಾವನೆ ಪಡೀತಾರೆ ಈ ನಟಿ

Big Boss OTT: ಹಿಂದಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ಈಗ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ಕರಣ್ ಜೋಹರ್ ನಡೆಸಿಕೊಡುತ್ತಿರುವ ಈ ಕಾರ್ಯಕ್ರಮ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲಿ ಭಾಗಿಯಾಗಿರುವ ಸ್ಪರ್ಧಿಗಳು ಪ್ರತೀ ವಾರ ಎಷ್ಟು ಸಂಭಾವನೆ ಪಡೆಯುತ್ತಾರೆ? ಇಲ್ಲಿದೆ ಮಾಹಿತಿ.

ಬಿಗ್​ಬಾಸ್​ನಲ್ಲಿ ಸ್ಪರ್ಧಿಗಳ ಸಂಭಾವನೆ ಎಷ್ಟು?; ಶಮಿತಾ ಶೆಟ್ಟಿಗಿಂತಲೂ ಹೆಚ್ಚು ಸಂಭಾವನೆ ಪಡೀತಾರೆ ಈ ನಟಿ
ಬಿಗ್​ಬಾಸ್ ಒಟಿಟಿ ಸ್ಪರ್ಧಿಗಳು(ಎಡದಿಂದ- ರಿಧಿಮಾ ಪಂಡಿತ್, ಶಮಿತಾ ಶೆಟ್ಟಿ, ಜೀಶಾನ್ ಖಾನ್)
TV9 Web
| Edited By: |

Updated on: Aug 17, 2021 | 10:26 AM

Share

ಬಿಗ್​ಬಾಸ್ ಒಟಿಟಿ ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿದೆ. ಕರಣ್ ಜೋಹರ್ ನಡೆಸಿಕೊಡ್ಡುತ್ತಿರುವ ಈ ಕಾರ್ಯಕ್ರಮ ವಿವಾದಾತ್ಮಕವಾಗಿ ಗುರುತಿಸಿಕೊಳ್ಳುತ್ತಿದ್ದರೂ, ವೀಕ್ಷಕರ ಮನರಂಜನೆಗೆ ಕೊರತೆಯನ್ನುಂಟು ಮಾಡಿಲ್ಲ. ಇತ್ತೀಚೆಗಷ್ಟೇ ಹಲವು ಕಾರಣದಿಂದ ಸದ್ದು ಮಾಡಿರುವ ನಟಿ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಯೂ ಇದರಲ್ಲಿ ಭಾಗಿಯಾಗಿದ್ದಾರೆ. ಈ ಶೋದಲ್ಲಿ ಈಗಾಗಲೇ ಮೊದಲ ಎಲಿಮೇನಷನ್ ನಡೆದಿದ್ದು, ಉರ್ಫಿ ಜಾವೇದ್ ಮನೆಯಿಂದ ಹೊರಹೋಗಿದ್ದಾರೆ. ಮನೆಯ ಒಳಭಾಗದ ವಿಷಯಗಳೊಂದಿಗೆ, ಈಗ ಕಲಾವಿದರ ಸಂಭಾವನೆಯ ವಿಷಯ ಸಾಕಷ್ಟು ಸದ್ದು ಮಾಡುತ್ತಿದೆ. ಜಾಗರಣ್ ವರದಿ ಮಾಡಿರುವ ಪ್ರಕಾರ, ಬಿಗ್​ಬಾಸ್​ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುತ್ತಿರುವುದು ಶಮಿತಾ ಶೆಟ್ಟಿಯಲ್ಲ. ಮತ್ತೊಬ್ಬರು ನಟಿ. ಆಶ್ಚರ್ಯವಾದರೂ ಇದು ಸತ್ಯ. ನಟಿ ರಿಧಿಮಾ ಪಂಡಿತ್ ಎಲ್ಲರಿಗಿಂತ ಹೆಚ್ಚು ಸಂಭಾವನೆಯನ್ನು ಪಡೆಯುತ್ತಿದ್ದಾರೆ.

ಯಾರ್ಯಾರಿಗೆ ಎಷ್ಟೆಷ್ಟು ಸಂಭಾವನೆ?

ರಿಧಿಮಾ ಪಂಡಿತ್: ‘ಬಹು ಹಮಾರಿ ರಜನಿ ಕಾಂತ್’ ಖ್ಯಾತಿಯ ರಿಧಿಮಾ ಪಂಡಿತ್ ಪ್ರತೀ ವಾರ 5ಲಕ್ಷ ಸಂಭಾವನೆ ಪಡೆಯುತ್ತಾರಂತೆ.

ಶಮಿತಾ ಶೆಟ್ಟಿ: ಬಿಗ್​ಬಾಸ್ 3ರಲ್ಲಿ ಈಗಾಗಲೇ ಕಾಣಿಸಿಕೊಂಡಿದ್ದ ನಟಿ ಶಮಿತಾ ಶೆಟ್ಟಿ ವಾರವೊಂದಕ್ಕೆ ಪಡೆಯುತ್ತಿರುವುದು 3.75ಲಕ್ಷ ರೂಗಳು.

ಉರ್ಫಿ ಜಾವೇದ್: ಬಿಗ್​ಬಾಸ್ ಮನೆಯಿಂದ ಎಲಿಮಿನೇಟ್ ಆದ ಮೊದಲ ಸ್ಪರ್ಧಿ ಉರ್ಫಿ ಜಾವೇದ್​ರ ಸಂಭಾವನೆ ಪ್ರತೀ ವಾರಕ್ಕೆ 2.75ಲಕ್ಷ.

ಜೀಶಾನ್ ಖಾನ್: ‘ಕುಂಕುಮ್ ಭಾಗ್ಯ’ ಸೀರಿಯಲ್ ಮೂಲಕ ಗಮನ ಸೆಳೆದಿದ್ದ ಜೀಶಾನ್​ರ ಸಂಬಾವನೆ ವಾರವೊಂದಕ್ಕೆ 2.5ಲಕ್ಷ.

ದಿವ್ಯಾ ಅಗರವಾಲ್, ನೇಹಾ ಭಾಸಿನ್: ಪ್ರತೀ ವಾರ ತಲಾ 2ಲಕ್ಷರೂಗಳು.

ಅಕ್ಷರಾ ಸಿಂಗ್, ಮಿಲಿಂದ್ ಗಾಬಾ, ಮೂಸೆ ಜಟ್ಟನಾ, ಕರಣ್ ನಾಥ್: ಈ ಸದಸ್ಯರು ಪ್ರತೀ ವಾರ ಪಡೆಯುತ್ತಿರುವುದು ತಲಾ 1.75ಲಕ್ಷ.

ನಿಶಾಂತ್ ಭಟ್, ರಾಕೇಶ್ ಬಾಪಟ್: ಈ ಸದಸ್ಯರು ತಲಾ 1.2ಲಕ್ಷ ಸಂಭಾವನೆಯನ್ನು ಪ್ರತೀ ವಾರ ಪಡೆಯುತ್ತಿದ್ದಾರೆ.

ಪ್ರತೀಕ್ ಸೆಹಜ್ಪಾಲ್: ಬಿಗ್​ಬಾಸ್​ನಲ್ಲಿ ಎಲ್ಲರಿಗಿಂತ ಅತೀ ಕಡಿಮೆ ಸಂಬಳ ಪಡೆಯುತ್ತಿರುವುದು ಪ್ರತೀಕ್ ಸೆಹಜ್ಪಾಲ್. ಅವರು ಪ್ರತೀ ವಾರ 1ಲಕ್ಷವನ್ನು ಜೇಬಿಗಿಳಿಸಿಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಓಟಿಟಿ ಕೇವಲ ಆರು ವಾರಗಳ ಕಾಲ ನಡೆಯಲಿದೆ. ಹಾಗಾಗಿ ಇಲ್ಲಿ ಸ್ಪರ್ಧಿಗಳಿಗೆ ಗುರುತಿಸಿಕೊಳ್ಳಲು ಹೆಚ್ಚು ಸಮಯಾವಕಾಶ ಇಲ್ಲ. ಇರುವ ಸಮಯದಲ್ಲೇ ಏನಾದರೂ ಮಾಡಿ ಎಲಿಮಿನೇಷನ್​ನಿಂದ ಸೇವ್​ ಆಗಬೇಕಿದೆ. ಇಷ್ಟು ದಿನ ವೀಕ್ಷಕರು ನೋಡಿದ ಬಿಗ್​ ಬಾಸ್​ ಒಂದು ರೀತಿ ಇತ್ತು. ಆದರೆ ಈಗ ನೋಡುತ್ತಿರುವ ಬಿಗ್​ ಬಾಸ್​ ಬೇರೆ ರೀತಿ ಇದೆ. ಅಂದರೆ, ವೂಟ್​ನಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್​ ಬಾಸ್​ ಓಟಿಟಿ’ ಕಾರ್ಯಕ್ರಮ ಸಿಕ್ಕಾಪಟ್ಟೆ ಭಿನ್ನವಾಗಿ ಮೂಡಿಬರುತ್ತಿದೆ. ಓಟಿಟಿಯಲ್ಲಿ ಪ್ರಸಾರವಾಗುತ್ತಿರುವುದರಿಂದ ಅದರಲ್ಲಿ ಸೆನ್ಸಾರ್​ನ ಹಂಗಿಲ್ಲ. ಹಾಗಾಗಿ​ ಸ್ಪರ್ಧಿಗಳು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಹಿಂದೆಂದಿಗಿಂತಲೂ ಹೆಚ್ಚು ಹಾಟ್​ ಆಗಿ ಈಗ ಬಿಗ್​ಬಾಸ್ ಶೋ ಮೂಡಿಬರುತ್ತಿದೆ.

ಇದನ್ನೂ ಓದಿ:

Nee Sigovaregu: ಶಿವಣ್ಣನ ಹೊಸ ಚಿತ್ರ ‘ನೀ ಸಿಗೋವರೆಗೂ’ ಮುಹೂರ್ತ ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ

ಬಿಗ್​ ಬಾಸ್​ ನಿರೂಪಣೆ ಬಗ್ಗೆ ಸುದೀಪ್​ ಫ್ಯಾನ್ಸ್​ಗೆ ಇದ್ದ ಅನುಮಾನಕ್ಕೆ ಪರಮ್ ಫುಲ್​ ಸ್ಟಾಪ್​

(Who is the highest paid contestant in Big Boss OTT not Shamitha Shetty)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?