AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದರೂ ಒಟಿಟಿಗೆ ಬರುತ್ತಿರುವುದೇಕೆ?

‘ಕಾಂತಾರ: ಚಾಪ್ಟರ್ 1’ ಚಿತ್ರ ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೂ ಕೇವಲ ಒಂದು ತಿಂಗಳಲ್ಲಿ ಅಕ್ಟೋಬರ್ 31ಕ್ಕೆ ಅಮೆಜಾನ್ ಪ್ರೈಮ್ ಒಟಿಟಿಗೆ ಸಿನಿಮಾ ಲಗ್ಗೆ ಇಡಲಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಚಿತ್ರವನ್ನು ಬೇಗನೆ ಒಟಿಟಿಗೆ ತರಲು ಕಾರಣ ಏನು? ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ: ಚಾಪ್ಟರ್ 1’ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದರೂ ಒಟಿಟಿಗೆ ಬರುತ್ತಿರುವುದೇಕೆ?
ರಿಷಬ್
ರಾಜೇಶ್ ದುಗ್ಗುಮನೆ
|

Updated on:Oct 28, 2025 | 10:08 AM

Share

‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾ ಕೇವಲ ಒಂದು ತಿಂಗಳಿಗೆ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಹೌದು, ಅಕ್ಟೋಬರ್ 2ರಂದು ಥಿಯೇಟರ್​ನಲ್ಲಿ ರಿಲೀಸ್ ಆದ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಚಿತ್ರ ಅಕ್ಟೋಬರ್ 31ಕ್ಕೆ ಒಟಿಟಿಗೆ ಕಾಲಿಡುತ್ತಿದೆ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವ ಮಧ್ಯೆಯೂ ಈ ನಿರ್ಧಾರ ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ನಡೆದಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾರತದ ಕಲೆಕ್ಷನ್ 592 ಕೋಟಿ ರೂಪಾಯಿ. ಅಕ್ಟೋಬರ್ 27ರಂದು (ನಾಲ್ಕನೇ ಸೋಮವಾರ) ಸಿನಿಮಾ 3.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಂದರೆ, ವಾರದ ದಿನವೂ ಸಿನಿಮಾ ಉತ್ತಮವಾಗಿಯೇ ಗಳಿಕೆ ಮಾಡುತ್ತಿದೆ. ಮುಂಬರೋ ವೀಕೆಂಡ್​ನಲ್ಲಿ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇತ್ತು. ಆದಾಗ್ಯೂ ಸಿನಿಮಾನ ಒಟಿಟಿಗೆ ತರುವ ನಿರ್ಧಾರ ಮಾಡಲಾಗಿದೆ. ಇದಕ್ಕೆ ಅಸಲಿ ಕಾರಣ ಏನು ಎಂಬುದು ರಿವೀಲ್ ಆಗಿದೆ.

ಇದನ್ನೂ ಓದಿ
Image
ಸಾವಿರ ಕೋಟಿ ತಲುಪಲ್ಲ ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್; ದೊಡ್ಡ ಕನಸು ಭಗ್ನ
Image
‘ಮಿಸ್ ಮಾಡಿಕೊಳ್ತೀನಿ’; ಮನೆಯಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್
Image
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಬದಲಾದ ಅಶ್ವಿನಿ ಗೌಡ
Image
‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ ಮಾಯಕಾರನಾಗಲು ಬೇಕಾಯ್ತು 6 ಗಂಟೆ

‘ಕಾಂತಾರ’ ಚಿತ್ರವನ್ನು ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿತ್ತು. ಅದೇ ರೀತಿ ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಇದೇ ಒಟಿಟಿ ಸಂಸ್ಥೆ ಖರೀದಿಸಿದೆ. ಅಕ್ಟೋಬರ್ 31ರಂದು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಈ ಚಿತ್ರ ಬಿಡುಗಡೆ ಕಾಣಲಿದೆ. ಕೇವಲ ಒಂದು ತಿಂಗಳಿಗೆ ಒಟಿಟಿಗೆ ಬರಲು ಕಾರಣ ಪ್ರೈಮ್ ವಿಡಿಯೋ ಹಾಗೂ ಹೊಂಬಾಳೆ ಮಧ್ಯೆ ಆದ ಒಪ್ಪಂದ.

ಅಮೇಜಾನ್ ಪ್ರೈಮ್ ಪೋಸ್ಟ್

ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಈ ಕಾರಣದಿಂದಲೇ ಅಮೇಜಾನ್ ಪ್ರೈಮ್ ವಿಡಿಯೋದವರು 125 ಕೋಟಿ ರೂಪಾಯಿ ನೀಡಿ ಸಿನಿಮಾನ ಖರೀದಿ ಮಾಡಿದೆ ಎನ್ನಲಾಗಿದೆ. ಇಷ್ಟು ದೊಡ್ಡ ಮೊತ್ತ ನೀಡಿದ್ದರಿಂದ ಒಂದೇ ತಿಂಗಳಿಗೆ ಚಿತ್ರವನ್ನು ಒಟಿಟಿಗೆ ತರಲು ಒಪ್ಪಿಗೆ ನೀಡಬೇಕು ಎಂಬ ಷರತ್ತು ಇತ್ತು. ಈ ಷರತ್ತಿಗೆ ಹೊಂಬಾಳೆ ಒಪ್ಪಿಗೆ ಸೂಚಿಸಿತ್ತು ಎನ್ನಲಾಗಿದೆ. ಹೀಗಾಗಿಯೇ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಬರುತ್ತಿದೆ. ಈಗಾಗಲೇ ಚಿತ್ರ ಥಿಯೇಟರ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಅಂದುಕೊಂಡತೆ ಸಿನಿಮಾ ಒಟಿಟಿಯಲ್ಲಿ ಬಂದಿದ್ದಕ್ಕೆ ಅವರ ಕಡೆಯಿಂದಲೂ ದೊಡ್ಡ ಮೊತ್ತದ ಹಣ ಸಿಗಲಿದೆ.

ಇದನ್ನೂ ಓದಿ: ಸಾವಿರ ಕೋಟಿ ತಲುಪಲ್ಲ ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್; ದೊಡ್ಡ ಕನಸು ಭಗ್ನ

‘ಕಾಂತಾರ’ ಸಿನಿಮಾ ಮಾಡುವಾಗ ಅಷ್ಟು ಒಳ್ಳೆಯ ರೆಸ್ಪಾನ್ಸ್ ಪಡೆಯುತ್ತದೆ ಎಂಬ ಕಲ್ಪನೆ ತಂಡದವರಿಗೂ ಇರಲಿಲ್ಲ. ಹೀಗಾಗಿ ಅಮೇಜಾನ್ ಜೊತೆ ಒಪ್ಪಂದ ಮಾಡಿಕೊಂಡು, ಬೇಗನೆ ಸಿನಿಮಾನ ಒಟಿಟಿಗೆ ತರಲು ಒಪ್ಪಂದ ಆಗಿತ್ತು. ನಂತರ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ಪರಭಾಷೆಯಲ್ಲೂ ಬಿಡುಗಡೆ ಮಾಡಲಾಯಿತು. ಹೀಗಾಗಿ, ಒಟಿಟಿ ರಿಲೀಸ್ ದಿನಾಂಕವನ್ನು ಪ್ರೈಮ್ ವಿಡಿಯೋ ಮುಂದಕ್ಕೆ ಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Tue, 28 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್