AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ 1’ ಬೇಗನೆ ಒಟಿಟಿಗೆ ಬರಲು ಕಾರಣವೇನು? ವಿವರಿಸಿದ ನಿರ್ಮಾಪಕ

Kantara Chapter 1 OTT release: ಚಿತ್ರಮಂದಿರಗಳಲ್ಲಿ ಒಳ್ಳೆಯ ಪ್ರದರ್ಶನ ಕಾಣುತ್ತಿರುವ ಸಿನಿಮಾಗಳನ್ನು ಒಟಿಟಿಗೆ ಬಿಡುಗಡೆ ಮಾಡುವುದಿಲ್ಲ, ಒಟಿಟಿಗೆ ಬಂದ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಕಲೆಕ್ಷನ್ ಮಾಡುವುದಿಲ್ಲ. ಆದರೆ ಇದೀಗ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಬಲು ಶೀಘ್ರವಾಗಿ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಕಾರಣವನ್ನು ನಿರ್ಮಾಪಕರೇ ವಿವರಿಸಿದ್ದಾರೆ.

‘ಕಾಂತಾರ 1’ ಬೇಗನೆ ಒಟಿಟಿಗೆ ಬರಲು ಕಾರಣವೇನು? ವಿವರಿಸಿದ ನಿರ್ಮಾಪಕ
Kantara Hombale
ಮಂಜುನಾಥ ಸಿ.
|

Updated on: Nov 02, 2025 | 8:31 PM

Share

ಚಿತ್ರಮಂದಿರಗಳಲ್ಲಿ (Theater) ಚೆನ್ನಾಗಿ ಓಡುತ್ತಿರುವ ಸಿನಿಮಾಗಳನ್ನು ಒಟಿಟಿಗೆ ಬಿಡುಗಡೆ ಮಾಡುವುದಿಲ್ಲ. ಸಿನಿಮಾ ಬೇಗ ಒಟಿಟಿ ಬಂದರೆ ಚಿತ್ರಮಂದಿರಗಳಿಂದ ನಿರ್ಮಾಪಕರಿಗೆ ಬರುವ ಲಾಭ ನಿಂತು ಹೋಗುತ್ತದೆ. ಇದೇ ಕಾರಣಕ್ಕೆ ಚೆನ್ನಾಗಿ ಓಡುವ ಸಿನಿಮಾಗಳನ್ನು ಉದ್ದೇಶಪೂರ್ವಕವಾಗಿ ತಡವಾಗಿ ಒಟಿಟಿಗೆ ತರಲಾಗುತ್ತದೆ. ಆದರೆ ಚಿತ್ರಮಂದಿರಗಳಲ್ಲಿ ಬ್ಲಾಕ್ ಬಸ್ಟರ್ ಪ್ರದರ್ಶನ ಕಾಣುತ್ತಿದ್ದರೂ ಸಹ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಬಿಡುಗಡೆಗೆ ಒಂದು ತಿಂಗಳಾಗುವ ಮುಂಚೆಯೇ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇದು ಹಲವರಿಗೆ ಆಶ್ಚರ್ಯ ತಂದಿದೆ. ಆದರೆ ಹೀಗೆ ಮಾಡಿದ್ದೇಕೆ ಎಂಬುದನ್ನು ಸ್ವತಃ ನಿರ್ಮಾಪಕರು ಉತ್ತರಿಸಿದ್ದಾರೆ.

ಹೊಂಬಾಳೆ ನಿರ್ಮಾಣ ಸಂಸ್ಥೆಯಲ್ಲಿ ಸಹ ನಿರ್ಮಾಪಕರಾಗಿರುವ ಚೆಲುವೇ ಗೌಡ ಅವರು ಈ ಬಗ್ಗೆ ಹಿಂದಿ ಮಾಧ್ಯಮದ ಸಂದರ್ಶನದಲ್ಲಿ ಉತ್ತರ ನೀಡಿದ್ದಾರೆ. ‘ಮೂರು ವರ್ಷಗಳ ಹಿಂದೆ ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗಲೇ ನಮಗೂ ಹಾಗೂ ಅಮೆಜಾನ್ ಪ್ರೈಂಗೂ ಒಪ್ಪಂದ ಆಗಿತ್ತು, ನಾಲ್ಕು ವಾರಗಳಲ್ಲಿ ಸಿನಿಮಾ ಬಿಡುಗಡೆ ಮಾಡಬೇಕು ಎಂದು, ಅದೇ ಕಾರಣಕ್ಕೆ ನಾವು ನಾಲ್ಕು ವಾರಗಳಲ್ಲಿಯೇ ಸಿನಿಮಾ ಅನ್ನು ಒಟಿಟಿಗೆ ಬಿಡುಗಡೆ ಮಾಡಿದೆವು’ ಎಂದಿದ್ದಾರೆ.

‘ಆದರೆ ಈಗ ಒಟಿಟಿಗೆ ಬಿಡುಗಡೆ ಮಾಡಿರುವುದು ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ವರ್ಷನ್​​ಗಳು ಮಾತ್ರ. ಹಿಂದಿ, ಇಂಗ್ಲೀಷ್ ಆವೃತ್ತಿಗಳ ಬಿಡುಗಡೆ ಮಾಡಲಾಗಿಲ್ಲ. ಅವುಗಳನ್ನು ಎಂಟು ವಾರದ ಬಳಿಕ ಬಿಡುಗಡೆ ಮಾಡಲಾಗುತ್ತದೆ. ನಾವು ಮುಂಚಿತವಾಗಿ ಒಪ್ಪಂದ ಮಾಡಿ ಕೊಂಡಿದ್ದವೆಂದು ಮುಂಚಿತವಾಗಿಯೇ ಬಿಡುಗಡೆ ಮಾಡಿದೆವು, ಒಪ್ಪಂದಕ್ಕೆ ನಾವು ಗೌರವ ನೀಡಿದೆವು’ ಎಂದಿದ್ದಾರೆ ಚೆಲುವೇ ಗೌಡ.

ಇದನ್ನೂ ಓದಿ:ನೂರಾರು ಕೋಟಿ ಖರ್ಚು, ಕನ್ನಡವೇ ಸರಿಯಿಲ್ಲ: ‘ಕಾಂತಾರ 1’ ಬಗ್ಗೆ ಅಸಮಾಧಾನ

ಇತ್ತೀಚೆಗೆ ದಕ್ಷಿಣ ಭಾರತದಲ್ಲಿ ದೊಡ್ಡ ಸಿನಿಮಾಗಳು ಸಹ ಕೇವಲ ನಾಲ್ಕು ವಾರಕ್ಕೆ ಒಟಿಟಿಗೆ ಬರುತ್ತಿವೆ. ‘ಕೂಲಿ’ ಸಿನಿಮಾ ಸಹ ನಾಲ್ಕು ವಾರಕ್ಕೆ ಒಟಿಟಿಗೆ ಬಂತು. ಪ್ರತಿ ಸಿನಿಮಾದೊಂದಿಗೂ ಒಟಿಟಿಯ ಒಪ್ಪಂದ ಬೇರೆ ಬೇರೆ ರೀತಿಯಾಗಿರುತ್ತದೆ. ಕೆಲ ಸಿನಿಮಾಗಳು ನಾಲ್ಕು ವಾರಕ್ಕೆ ಕೆಲ ಸಿನಿಮಾಗಳು ಆರು ಕೆಲ ಸಿನಿಮಾಗಳ ಜೊತೆಗೆ ಎಂಟು ವಾರದ ಒಪ್ಪಂದ ಮಾಡಿಕೊಳ್ಳಲಾಗುತ್ತದೆ’ ಎಂದು ಚೆಲುವೇ ಗೌಡ ವಿವರಿಸಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳಲ್ಲಿಯೇ ಸುಮಾರು 1000 ಕೋಟಿ ಗಳಿಕೆ ಮಾಡುವ ಗಡಿಯಲ್ಲಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿರುವಾಗಲೇ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಒಟಿಟಿಗೆ ಬಂದಿದೆ. ಅಕ್ಟೋಬರ್ 31 ರಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಒಟಿಟಿಗೆ ಬಂದಿದೆ. ಇದು, ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಮೇಲೆ ಪರಿಣಾಮ ಬೀರಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!