AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾ; ಆದರೆ..

ಯುವ ರಾಜ್​ಕುಮಾರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿರುವ ‘ಯುವ’ ಸಿನಿಮಾ ಮಾರ್ಚ್ 29ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾನ ಜನರು ಮೆಚ್ಚಿಕೊಂಡರು. ಈಗ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ .

ಒಟಿಟಿಗೆ ಬಂತು ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾ; ಆದರೆ..
ಯುವ
ರಾಜೇಶ್ ದುಗ್ಗುಮನೆ
|

Updated on:Apr 20, 2024 | 2:03 PM

Share

ಇತ್ತೀಚೆಗೆ ರಿಲೀಸ್ ಆದ ‘ಯುವ’ ಸಿನಿಮಾ (Yuva Movie) ಹಿಟ್ ಆಗಿದೆ. ಸಂತೋಷ್ ಆನಂದ್​ರಾಮ್ ನಿರ್ದೇಶನದ, ಯುವ ರಾಜ್​ಕುಮಾರ್ ನಟನೆಯ ಈ ಚಿತ್ರವನ್ನು ಜನರು ಥಿಯೇಟರ್​ನಲ್ಲಿ ಮೆಚ್ಚಿಕೊಂಡರು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಒಟಿಟಿ ಮೂಲಕ ಪ್ರಸಾರ ಕಾಣುತ್ತಿದೆ. ಆದರೆ, ಉಚಿತವಾಗಲ್ಲ. ನೀವು ಈ ಸಿನಿಮಾನ ರೆಂಟ್​ಗೆ ಪಡೆಯಬಹುದು. ಆ ಬಗ್ಗೆ ಇಲ್ಲಿದೆ ಮಾಹಿತಿ.

ಯುವ ರಾಜ್​ಕುಮಾರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿರುವ ‘ಯುವ’ ಸಿನಿಮಾ ಮಾರ್ಚ್ 29ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾನ ಜನರು ಮೆಚ್ಚಿಕೊಂಡರು. ಎಲೆಕ್ಷನ್ ಅಬ್ಬರದ ಮಧ್ಯೆಯೂ ಜನರು ಸಿನಿಮಾ ವೀಕ್ಷಿಸಿದರು. ಇತ್ತೀಚೆಗೆ ಸಿನಿಮಾ ತಂಡ ಸಕ್ಸಸ್ ಮೀಟ್ ಆಚರಿಸಿಕೊಂಡಿತ್ತು.

ಸಕಸ್ಸ್​ ಮೀಟ್​ನಲ್ಲಿ ಜನರು ಕೊಟ್ಟ ಪ್ರೀತಿ ಬಗ್ಗೆ ‘ಯುವ’ ತಂಡ ಮಾತನಾಡಿತ್ತು. ‘ಚುನಾವಣೆ ಅಬ್ಬರದ ಮಧ್ಯೆಯೂ ಜನರು ಸಿನಿಮಾನ ಇಷ್ಟಪಟ್ಟಿದ್ದಾರೆ. ಯುವಗೆ ಪ್ರೀತಿ ತೋರಿಸಿದ್ದಾರೆ’ ಎಂದು ತಂಡ ಹೇಳಿತ್ತು. ‘ಯುವ’ ಸಿನಿಮಾದಲ್ಲಿ ಯುವ ರಾಜ್​ಕುಮಾರ್ ಅವರು ಭರ್ಜರಿ ಆ್ಯಕ್ಷನ್ ಮೆರೆದಿದ್ದರು. ಈಗ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಚಿತ್ರವನ್ನು 349 ರೂಪಾಯಿಗೆ ರೆಂಟ್ ಕೊಟ್ಟು ವೀಕ್ಷಿಸಬಹುದು. 30 ದಿನಗಳವರೆಗೆ ಇದರ ವ್ಯಾಲಿಡಿಟಿ ಇರುತ್ತದೆ. ಒಮ್ಮೆ ಸಿನಿಮಾ ವೀಕ್ಷಿಸಲು ಆರಂಭಿಸಿದರೆ 48 ಗಂಟೆಗಳಲ್ಲಿ ಅದನ್ನು ಪೂರ್ಣಗೊಳಿಸಬೇಕು.

ಇದನ್ನೂ ಓದಿ: ಏಕಕಾಲಕ್ಕೆ 70 ಹೊಸ ಪ್ರಾಜೆಕ್ಟ್​ ಘೋಷಿಸಿದ ಅಮೇಜಾನ್ ಪ್ರೈಮ್ ವಿಡಿಯೋ; ಒಟಿಟಿ ಪ್ರಿಯರಿಗೆ ಹಬ್ಬ

ಇತ್ತೀಚೆಗೆ ನಡೆದ ಸಕಸ್ಸ್​ಮೀಟ್​ನಲ್ಲಿ ಒಟಿಟಿ ಪ್ರಸಾರದ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ್ದ ಸಂತೋಷ್ ಆನಂದ್​ರಾಮ್ ಅವರು, ‘ಆ ಬಗ್ಗೆ ನಮಗೆ ಗೊತ್ತಿಲ್ಲ. ನಿರ್ಮಾಣ ಸಂಸ್ಥೆಯವರು ಯಾವ ರೀತಿಯಲ್ಲಿ ಒಪ್ಪಂದ ಮಾಡಿಕೊಂಡಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ. ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸಿನಿಮಾ ಪ್ರಸಾರ ಕಾಣಲಿದೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Sat, 20 April 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್