AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾ; ಆದರೆ..

ಯುವ ರಾಜ್​ಕುಮಾರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿರುವ ‘ಯುವ’ ಸಿನಿಮಾ ಮಾರ್ಚ್ 29ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾನ ಜನರು ಮೆಚ್ಚಿಕೊಂಡರು. ಈಗ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ .

ಒಟಿಟಿಗೆ ಬಂತು ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾ; ಆದರೆ..
ಯುವ
ರಾಜೇಶ್ ದುಗ್ಗುಮನೆ
|

Updated on:Apr 20, 2024 | 2:03 PM

Share

ಇತ್ತೀಚೆಗೆ ರಿಲೀಸ್ ಆದ ‘ಯುವ’ ಸಿನಿಮಾ (Yuva Movie) ಹಿಟ್ ಆಗಿದೆ. ಸಂತೋಷ್ ಆನಂದ್​ರಾಮ್ ನಿರ್ದೇಶನದ, ಯುವ ರಾಜ್​ಕುಮಾರ್ ನಟನೆಯ ಈ ಚಿತ್ರವನ್ನು ಜನರು ಥಿಯೇಟರ್​ನಲ್ಲಿ ಮೆಚ್ಚಿಕೊಂಡರು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಒಟಿಟಿ ಮೂಲಕ ಪ್ರಸಾರ ಕಾಣುತ್ತಿದೆ. ಆದರೆ, ಉಚಿತವಾಗಲ್ಲ. ನೀವು ಈ ಸಿನಿಮಾನ ರೆಂಟ್​ಗೆ ಪಡೆಯಬಹುದು. ಆ ಬಗ್ಗೆ ಇಲ್ಲಿದೆ ಮಾಹಿತಿ.

ಯುವ ರಾಜ್​ಕುಮಾರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿರುವ ‘ಯುವ’ ಸಿನಿಮಾ ಮಾರ್ಚ್ 29ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾನ ಜನರು ಮೆಚ್ಚಿಕೊಂಡರು. ಎಲೆಕ್ಷನ್ ಅಬ್ಬರದ ಮಧ್ಯೆಯೂ ಜನರು ಸಿನಿಮಾ ವೀಕ್ಷಿಸಿದರು. ಇತ್ತೀಚೆಗೆ ಸಿನಿಮಾ ತಂಡ ಸಕ್ಸಸ್ ಮೀಟ್ ಆಚರಿಸಿಕೊಂಡಿತ್ತು.

ಸಕಸ್ಸ್​ ಮೀಟ್​ನಲ್ಲಿ ಜನರು ಕೊಟ್ಟ ಪ್ರೀತಿ ಬಗ್ಗೆ ‘ಯುವ’ ತಂಡ ಮಾತನಾಡಿತ್ತು. ‘ಚುನಾವಣೆ ಅಬ್ಬರದ ಮಧ್ಯೆಯೂ ಜನರು ಸಿನಿಮಾನ ಇಷ್ಟಪಟ್ಟಿದ್ದಾರೆ. ಯುವಗೆ ಪ್ರೀತಿ ತೋರಿಸಿದ್ದಾರೆ’ ಎಂದು ತಂಡ ಹೇಳಿತ್ತು. ‘ಯುವ’ ಸಿನಿಮಾದಲ್ಲಿ ಯುವ ರಾಜ್​ಕುಮಾರ್ ಅವರು ಭರ್ಜರಿ ಆ್ಯಕ್ಷನ್ ಮೆರೆದಿದ್ದರು. ಈಗ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಚಿತ್ರವನ್ನು 349 ರೂಪಾಯಿಗೆ ರೆಂಟ್ ಕೊಟ್ಟು ವೀಕ್ಷಿಸಬಹುದು. 30 ದಿನಗಳವರೆಗೆ ಇದರ ವ್ಯಾಲಿಡಿಟಿ ಇರುತ್ತದೆ. ಒಮ್ಮೆ ಸಿನಿಮಾ ವೀಕ್ಷಿಸಲು ಆರಂಭಿಸಿದರೆ 48 ಗಂಟೆಗಳಲ್ಲಿ ಅದನ್ನು ಪೂರ್ಣಗೊಳಿಸಬೇಕು.

ಇದನ್ನೂ ಓದಿ: ಏಕಕಾಲಕ್ಕೆ 70 ಹೊಸ ಪ್ರಾಜೆಕ್ಟ್​ ಘೋಷಿಸಿದ ಅಮೇಜಾನ್ ಪ್ರೈಮ್ ವಿಡಿಯೋ; ಒಟಿಟಿ ಪ್ರಿಯರಿಗೆ ಹಬ್ಬ

ಇತ್ತೀಚೆಗೆ ನಡೆದ ಸಕಸ್ಸ್​ಮೀಟ್​ನಲ್ಲಿ ಒಟಿಟಿ ಪ್ರಸಾರದ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ್ದ ಸಂತೋಷ್ ಆನಂದ್​ರಾಮ್ ಅವರು, ‘ಆ ಬಗ್ಗೆ ನಮಗೆ ಗೊತ್ತಿಲ್ಲ. ನಿರ್ಮಾಣ ಸಂಸ್ಥೆಯವರು ಯಾವ ರೀತಿಯಲ್ಲಿ ಒಪ್ಪಂದ ಮಾಡಿಕೊಂಡಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ. ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸಿನಿಮಾ ಪ್ರಸಾರ ಕಾಣಲಿದೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Sat, 20 April 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ