AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ5 ಒಟಿಟಿಯಲ್ಲಿ ಏ.24ರಿಂದ ಪ್ರಸಾರ ಆಗಲಿದೆ ‘ಜೆರಾಕ್ಸ್’ ವೆಬ್ ಸರಣಿ; ಏನಿದರ ಕಥೆ?

ಜೀ5 ಒಟಿಟಿಯಲ್ಲಿ ‘ಅಯ್ಯನ‌ ಮನೆ’, ‘ಮಾರಿಗಲ್ಲು’, ‘ಶೋಧ’, ‘ರಾಕ್ಷಸ’ ಬಳಿಕ ‘ಜೆರಾಕ್ಸ್’ ವೆಬ್ ಸರಣಿ ಬರುತ್ತಿದೆ. ನಾಗಭೂಷಣ, ಪಾಯಲ್ ಚಂಗಪ್ಪ, ತುಕಾಲಿ ಸಂತು, ಮಂಜು ಪಾವಗಡ, ಓಂ ಪ್ರಕಾಶ್ ರಾವ್ ಸೇರಿದಂತೆ ಹಲವು ಜನಪ್ರಿಯ ಕಲಾವಿದರು ಇದರಲ್ಲಿ ಅಭಿನಯಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಜೀ5 ಒಟಿಟಿಯಲ್ಲಿ ಏ.24ರಿಂದ ಪ್ರಸಾರ ಆಗಲಿದೆ ‘ಜೆರಾಕ್ಸ್’ ವೆಬ್ ಸರಣಿ; ಏನಿದರ ಕಥೆ?
Jerox Web Series Team
ಮದನ್​ ಕುಮಾರ್​
|

Updated on: Apr 22, 2026 | 6:09 PM

Share

‘ಬ್ಲಿಂಕ್‌’ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು ಅವರು ‘ಜೆರಾಕ್ಸ್‌’ (Jerox) ವೆಬ್ ಸರಣಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇದರಲ್ಲಿ ನಾಗಭೂಷಣ (Nagabhushana), ಪಾಯಲ್‌ ಚೆಂಗಪ್ಪ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಮಂಜು ಪಾವಗಡ, ಓಂ ಪ್ರಕಾಶ್‌ ರಾವ್‌, ಯಶವಂತ್‌ ಶೆಟ್ಟಿ, ಶ್ರೀವತ್ಸ, ವಿಜಯ್‌ ಪ್ರಸಾದ್‌, ಜಗ್ಗಪ್ಪ, ತುಕಾಲಿ ಸಂತು, ಸಿದ್ದು ಮಂಡ್ಯ, ಸುಧಾಕರ್‌ ಗೌಡ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಜೀ5 (zee5) ಒಟಿಟಿ ಮೂಲಕ ಏಪ್ರಿಲ್‌ 24ರಿಂದ ಈ ವೆಬ್‌ ಸರಣಿಯು ವೀಕ್ಷಣೆಗೆ ಲಭ್ಯವಾಗಲಿದೆ.

ಒಂದುವೇಳೆ ಜೆರಾಕ್ಸ್ ಕಾಪಿಗಳಿಗೆ ಜೀವ ಬಂದುಬಿಟ್ಟರೆ ಏನಾಗುತ್ತೆ? ಇಂಥ ಒಂದು ಕಥೆಯ ಎಳೆಯನ್ನೇ ಇಟ್ಟುಕೊಂಡು ‘ಜೆರಾಕ್ಸ್’ ವೆಬ್ ಸರಣಿ ಸಿದ್ಧವಾಗಿದೆ. ಇದರಲ್ಲಿ ಹಾಸ್ಯಭರಿತ ಕಹಾನಿ ಇದೆ. ಡಾರ್ಕ್ ಕಾಮಿಡಿ, ಥ್ರಿಲ್ಲರ್ ಮತ್ತು ಫ್ಯಾಂಟಸಿ ಅಂಶಗಳು ಇದರಲ್ಲಿ ಇವೆ. ‘ಡಾಲಿ ಪಿಕ್ಚರ್ಸ್‌’ ಮೂಲಕ ಈ ವೆಬ್ ಸಿರೀಸ್ ಮೂಡಿಬಂದಿದೆ. ಇತ್ತೀಚೆಗೆ ತಂಡದವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡರು. ಕಥೆಯ ಬಗ್ಗೆ ಟ್ರೇಲರ್ ಸುಳಿವು ನೀಡಿದೆ.

‘ಜೆರಾಕ್ಸ್ ವೆಬ್ ಸಿರೀಸ್ ಟ್ರೇಲರ್:

ನಿರ್ಮಾಪಕ ಡಾಲಿ ಧನಂಜಯ್ ಮಾತನಾಡಿ, ‘ಜೆರಾಕ್ಸ್ ವೆಬ್ ಸಿರೀಸ್ ಭಾಗವಾಗಿರುವುದು ನನಗೆ ಖುಷಿ ಕೊಟ್ಟಿದೆ. ಇದರಲ್ಲಿ ಒಳ್ಳೊಳ್ಳೆ‌ಯ ಕಲಾವಿದರು ಕೆಲಸ ಮಾಡಿದ್ದಾರೆ. ಹೊಸ ಪ್ರತಿಭೆಗಳ ಜೊತೆ ಅನುಭವಿ ಪ್ರತಿಭೆಗಳು ಇದ್ದಾರೆ. ಇದರ ಬರವಣಿಗೆ ಹಾಗೂ ಎಕ್ಸಿಕ್ಯೂಷನ್ ಚೆನ್ನಾಗಿದೆ. ಬಹಳ ಖುಷಿಯಿಂದ ಇದನ್ನು ಪ್ರೆಸೆಂಟ್ ಮಾಡುತ್ತಿದ್ದೇವೆ. ಜೀ5 ಮೂಲಕ ಒಳ್ಳೊಳ್ಳೆಯ ಪ್ರತಿಭೆಗಳಿಗೆ ವೇದಿಕೆ ಸಿಗುತ್ತಿದೆ. ಇದು ಮತ್ತಷ್ಟು ದೊಡ್ಡದಾಗಲಿ’ ಎಂದು ಶುಭ ಕೋರಿದರು.

ಇದೇ ವೇಳೆ ಜೀ5 ಕನ್ನಡದ ಬಿಸ್ನೆಸ್ ಹೆಡ್ ದೀಪಕ್ ಶ್ರೀರಾಮುಲು ಮಾತನಾಡಿದರು. ‘ಜೀ5 ಕನ್ನಡದಲ್ಲಿ ವೆಬ್ ಸರಣಿಯನ್ನು ಆರಂಭಿಸಿ 1 ವರ್ಷವಾಗಿದೆ. ಇದೊಂದು ಮಹತ್ವದ ಮೈಲಿಗಲ್ಲಾಗಿದೆ. ಕಳೆದ ವರ್ಷ ಇದೇ ಸಮಯದಲ್ಲಿ ನಾವು ‘ಅಯ್ಯನ ಮನೆ’ ಪ್ರಾರಂಭಿಸಿದ್ದೆವು. ಈ ಒಂದು ವರ್ಷದ ಮೈಲಿಗಲ್ಲಿಗೆ ಸರಿಯಾಗಿ, ನಾವು ಈಗ ಏಪ್ರಿಲ್ 24ರಂದು ಜೆರಾಕ್ಸ್ ವೆಬ್ ಸರಣಿಯನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಿನಿಮಾಗೆ ಮಾತ್ರವಲ್ಲ, ನನ್ನ ಜೀವನಕ್ಕೂ ಡಾಲಿ ಕೊಡುಗೆ ಜಾಸ್ತಿ ಇದೆ: ನಾಗಭೂಷಣ

ಸುದ್ದಿಗೋಷ್ಠಿಯಲ್ಲಿ ನಟ ನಾಗಭೂಷಣ ಮಾತನಾಡಿದರು. ‘ವೆಬ್ ಸಿರೀಸ್ ನನಗೆ ಹೊಸದೇನೂ ಅಲ್ಲ. ಹನಿಮೂನ್ ವೆಬ್ ಸರಣಿಯಲ್ಲಿ ನಟಿಸಿದ್ದೆ. ಅದರ ನಿರ್ಮಾತೃ ಆರ್ ಜೆ ಪ್ರದೀಪ್. ಇಷ್ಟು ವರ್ಷದ ಬಳಿಕ ಮತ್ತೆ ವೆಬ್ ಸಿರೀಸ್​ನಲ್ಲಿ ನಟಿಸುತ್ತಿದ್ದೇನೆ. ಕನ್ನಡದ ಸಿನಿಮಾಗಳನ್ನು ತೆಗೆದುಕೊಳ್ಳಲು ಬಹಳಷ್ಟು ಒಟಿಟಿಗಳು ಹಿಂದೇಟು ಹಾಕುತ್ತಿವೆ. ಕನ್ನಡದಲ್ಲಿ ವೀಕ್ಷಕರ ಸಂಖ್ಯೆ ಕಡಿಮೆ ಎಂದು ನೆಪ ಹೇಳುತ್ತಾರೆ. ಆದರೆ ಇಂತಹ ಸಮಯದಲ್ಲಿ ಕನ್ನಡದಲ್ಲಿ ವೀಕ್ಷಕರು ಇದ್ದಾರೆ ಎಂಬುದನ್ನು ಜೀ5 ತೋರಿಸಿಕೊಟ್ಟಿದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ