AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
TV9 Web
| Edited By: |

Updated on: Aug 26, 2021 | 8:50 PM

Share

‘ಬಿಗ್​ ಬಾಸ್​ ಒಟಿಟಿ’ ಸ್ಪರ್ಧಿಗಳು ವೀಕ್ಷಕರನ್ನು ಸೆಳೆಯೋಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮನೆಯಲ್ಲಿ ಕಿಸ್​ ಮಾಡಿದ ಘಟನೆ ಕೂಡ ನಡೆದಿದೆ. ಆದರೆ, ಈಗ ಬಿಗ್​ ಬಾಸ್​ ಸ್ಪರ್ಧಿ ಜೀಶನ್​ ಖಾನ್​ ಅವರು ಸಹ ಸ್ಪರ್ಧಿ ಪ್ರತೀಕ್​ ಸೆಹಜ್​ಪಾಲ್​ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮೂಲಕ ಅವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿದ್ದಾರೆ.

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದ್ದಾರೆ. ಈ ವೇಳೆ ಪ್ರತೀಕ್​ ಅವರನ್ನು ಜೀಶನ್​ ತಳ್ಳಿ ಹಲ್ಲೆ ನಡೆಸಿದ್ದಾರೆ.

ಜೀಶನ್​ ಮತ್ತು ದಿವ್ಯಾ ‘ ಬಿಗ್​ ಬಾಸ್​ ಮ್ಯಾನ್​ ಹಾಗೂ ಬಿಗ್​ ಬಾಸ್​ ಲೇಡಿ’ ಆಗಿದ್ದರು. ಇವರು ಆಟದ ನಿಯಮ ಮುರಿದವರಿಗೆ ರೆಡ್​ ಫ್ಲಾಗ್​ ನೀಡಬೆಕಿತ್ತು. ಆದರೆ, ಇಬ್ಬರೂ ತಮ್ಮದೇ ನಿಯಮಗಳನ್ನು ಸೃಷ್ಟಿ ಮಾಡಿಕೊಂಡಿದ್ದರಿಂದ ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಉದ್ಭವ ಆದವು. ಜೀಶನ್​ ಅವರು ಪ್ರತೀಕ್​ ಮೇಲೆ ಹಲ್ಲೆ ಮಾಡಿ ಬಿಗ್​ ಬಾಸ್​ ನಿಯಮ ಮುರಿದರು. ಈ ಮೂಲಕ ಮನೆಯಿಂದ ಔಟ್​ ಆದರು.

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಮೂಲಕ ನಟ ಜೀಶನ್ ಖಾನ್ ಗುರುತಿಸಿಕೊಂಡರು. ಅವರು ಇತ್ತೀಚೆಗೆ ಗೋವಾ ವಿಮಾನ ನಿಲ್ದಾಣದಿಂದ ಮುಂಬೈಗೆ ಬರುವವರಿದ್ದರು. ಈ ವೇಳೆ ಸ್ನಾನ ಮಾಡಲು ತೆರಳುವಾಗ ತೊಡುವ ಬಟ್ಟೆಯನ್ನು ಹಾಕಿಕೊಂಡಿದ್ದರು. ಆದರೆ, ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸೋಕೆ ಅಲ್ಲಿನ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಈ ರೀತಿಯ ಉಡುಗೆಗೆ ಅನುಮತಿ ಇಲ್ಲ ಎಂದು ಅಧಿಕಾರಿಗಳು ಕಡ್ಡಿಮುರಿದಂತೆ ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

ಇದನ್ನೂ ಓದಿ: ‘ಶುಗರ್ ಡ್ಯಾಡಿ, ಡ್ರಗ್ ಇನ್ ಸ್ಯಾಂಡಲ್​ವುಡ್’; ಬಿಗ್​ ಬಾಸ್​ನಿಂದ ಬಂದ ಬೆನ್ನಲ್ಲೇ ಪುಸ್ತಕ ಬರೆಯಲು ಮುಂದಾದ ಪ್ರಶಾಂತ್​ ಸಂಬರಗಿ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?