AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
TV9 Web
| Edited By: |

Updated on: Aug 26, 2021 | 8:50 PM

Share

‘ಬಿಗ್​ ಬಾಸ್​ ಒಟಿಟಿ’ ಸ್ಪರ್ಧಿಗಳು ವೀಕ್ಷಕರನ್ನು ಸೆಳೆಯೋಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮನೆಯಲ್ಲಿ ಕಿಸ್​ ಮಾಡಿದ ಘಟನೆ ಕೂಡ ನಡೆದಿದೆ. ಆದರೆ, ಈಗ ಬಿಗ್​ ಬಾಸ್​ ಸ್ಪರ್ಧಿ ಜೀಶನ್​ ಖಾನ್​ ಅವರು ಸಹ ಸ್ಪರ್ಧಿ ಪ್ರತೀಕ್​ ಸೆಹಜ್​ಪಾಲ್​ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮೂಲಕ ಅವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿದ್ದಾರೆ.

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದ್ದಾರೆ. ಈ ವೇಳೆ ಪ್ರತೀಕ್​ ಅವರನ್ನು ಜೀಶನ್​ ತಳ್ಳಿ ಹಲ್ಲೆ ನಡೆಸಿದ್ದಾರೆ.

ಜೀಶನ್​ ಮತ್ತು ದಿವ್ಯಾ ‘ ಬಿಗ್​ ಬಾಸ್​ ಮ್ಯಾನ್​ ಹಾಗೂ ಬಿಗ್​ ಬಾಸ್​ ಲೇಡಿ’ ಆಗಿದ್ದರು. ಇವರು ಆಟದ ನಿಯಮ ಮುರಿದವರಿಗೆ ರೆಡ್​ ಫ್ಲಾಗ್​ ನೀಡಬೆಕಿತ್ತು. ಆದರೆ, ಇಬ್ಬರೂ ತಮ್ಮದೇ ನಿಯಮಗಳನ್ನು ಸೃಷ್ಟಿ ಮಾಡಿಕೊಂಡಿದ್ದರಿಂದ ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಉದ್ಭವ ಆದವು. ಜೀಶನ್​ ಅವರು ಪ್ರತೀಕ್​ ಮೇಲೆ ಹಲ್ಲೆ ಮಾಡಿ ಬಿಗ್​ ಬಾಸ್​ ನಿಯಮ ಮುರಿದರು. ಈ ಮೂಲಕ ಮನೆಯಿಂದ ಔಟ್​ ಆದರು.

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಮೂಲಕ ನಟ ಜೀಶನ್ ಖಾನ್ ಗುರುತಿಸಿಕೊಂಡರು. ಅವರು ಇತ್ತೀಚೆಗೆ ಗೋವಾ ವಿಮಾನ ನಿಲ್ದಾಣದಿಂದ ಮುಂಬೈಗೆ ಬರುವವರಿದ್ದರು. ಈ ವೇಳೆ ಸ್ನಾನ ಮಾಡಲು ತೆರಳುವಾಗ ತೊಡುವ ಬಟ್ಟೆಯನ್ನು ಹಾಕಿಕೊಂಡಿದ್ದರು. ಆದರೆ, ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸೋಕೆ ಅಲ್ಲಿನ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಈ ರೀತಿಯ ಉಡುಗೆಗೆ ಅನುಮತಿ ಇಲ್ಲ ಎಂದು ಅಧಿಕಾರಿಗಳು ಕಡ್ಡಿಮುರಿದಂತೆ ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

ಇದನ್ನೂ ಓದಿ: ‘ಶುಗರ್ ಡ್ಯಾಡಿ, ಡ್ರಗ್ ಇನ್ ಸ್ಯಾಂಡಲ್​ವುಡ್’; ಬಿಗ್​ ಬಾಸ್​ನಿಂದ ಬಂದ ಬೆನ್ನಲ್ಲೇ ಪುಸ್ತಕ ಬರೆಯಲು ಮುಂದಾದ ಪ್ರಶಾಂತ್​ ಸಂಬರಗಿ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ