AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
TV9 Web
| Edited By: |

Updated on: Aug 26, 2021 | 8:50 PM

Share

‘ಬಿಗ್​ ಬಾಸ್​ ಒಟಿಟಿ’ ಸ್ಪರ್ಧಿಗಳು ವೀಕ್ಷಕರನ್ನು ಸೆಳೆಯೋಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮನೆಯಲ್ಲಿ ಕಿಸ್​ ಮಾಡಿದ ಘಟನೆ ಕೂಡ ನಡೆದಿದೆ. ಆದರೆ, ಈಗ ಬಿಗ್​ ಬಾಸ್​ ಸ್ಪರ್ಧಿ ಜೀಶನ್​ ಖಾನ್​ ಅವರು ಸಹ ಸ್ಪರ್ಧಿ ಪ್ರತೀಕ್​ ಸೆಹಜ್​ಪಾಲ್​ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮೂಲಕ ಅವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿದ್ದಾರೆ.

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದ್ದಾರೆ. ಈ ವೇಳೆ ಪ್ರತೀಕ್​ ಅವರನ್ನು ಜೀಶನ್​ ತಳ್ಳಿ ಹಲ್ಲೆ ನಡೆಸಿದ್ದಾರೆ.

ಜೀಶನ್​ ಮತ್ತು ದಿವ್ಯಾ ‘ ಬಿಗ್​ ಬಾಸ್​ ಮ್ಯಾನ್​ ಹಾಗೂ ಬಿಗ್​ ಬಾಸ್​ ಲೇಡಿ’ ಆಗಿದ್ದರು. ಇವರು ಆಟದ ನಿಯಮ ಮುರಿದವರಿಗೆ ರೆಡ್​ ಫ್ಲಾಗ್​ ನೀಡಬೆಕಿತ್ತು. ಆದರೆ, ಇಬ್ಬರೂ ತಮ್ಮದೇ ನಿಯಮಗಳನ್ನು ಸೃಷ್ಟಿ ಮಾಡಿಕೊಂಡಿದ್ದರಿಂದ ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಉದ್ಭವ ಆದವು. ಜೀಶನ್​ ಅವರು ಪ್ರತೀಕ್​ ಮೇಲೆ ಹಲ್ಲೆ ಮಾಡಿ ಬಿಗ್​ ಬಾಸ್​ ನಿಯಮ ಮುರಿದರು. ಈ ಮೂಲಕ ಮನೆಯಿಂದ ಔಟ್​ ಆದರು.

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಮೂಲಕ ನಟ ಜೀಶನ್ ಖಾನ್ ಗುರುತಿಸಿಕೊಂಡರು. ಅವರು ಇತ್ತೀಚೆಗೆ ಗೋವಾ ವಿಮಾನ ನಿಲ್ದಾಣದಿಂದ ಮುಂಬೈಗೆ ಬರುವವರಿದ್ದರು. ಈ ವೇಳೆ ಸ್ನಾನ ಮಾಡಲು ತೆರಳುವಾಗ ತೊಡುವ ಬಟ್ಟೆಯನ್ನು ಹಾಕಿಕೊಂಡಿದ್ದರು. ಆದರೆ, ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸೋಕೆ ಅಲ್ಲಿನ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಈ ರೀತಿಯ ಉಡುಗೆಗೆ ಅನುಮತಿ ಇಲ್ಲ ಎಂದು ಅಧಿಕಾರಿಗಳು ಕಡ್ಡಿಮುರಿದಂತೆ ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

ಇದನ್ನೂ ಓದಿ: ‘ಶುಗರ್ ಡ್ಯಾಡಿ, ಡ್ರಗ್ ಇನ್ ಸ್ಯಾಂಡಲ್​ವುಡ್’; ಬಿಗ್​ ಬಾಸ್​ನಿಂದ ಬಂದ ಬೆನ್ನಲ್ಲೇ ಪುಸ್ತಕ ಬರೆಯಲು ಮುಂದಾದ ಪ್ರಶಾಂತ್​ ಸಂಬರಗಿ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು