AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 26, 2021 | 8:50 PM

‘ಬಿಗ್​ ಬಾಸ್​ ಒಟಿಟಿ’ ಸ್ಪರ್ಧಿಗಳು ವೀಕ್ಷಕರನ್ನು ಸೆಳೆಯೋಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮನೆಯಲ್ಲಿ ಕಿಸ್​ ಮಾಡಿದ ಘಟನೆ ಕೂಡ ನಡೆದಿದೆ. ಆದರೆ, ಈಗ ಬಿಗ್​ ಬಾಸ್​ ಸ್ಪರ್ಧಿ ಜೀಶನ್​ ಖಾನ್​ ಅವರು ಸಹ ಸ್ಪರ್ಧಿ ಪ್ರತೀಕ್​ ಸೆಹಜ್​ಪಾಲ್​ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮೂಲಕ ಅವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿದ್ದಾರೆ.

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದ್ದಾರೆ. ಈ ವೇಳೆ ಪ್ರತೀಕ್​ ಅವರನ್ನು ಜೀಶನ್​ ತಳ್ಳಿ ಹಲ್ಲೆ ನಡೆಸಿದ್ದಾರೆ.

ಜೀಶನ್​ ಮತ್ತು ದಿವ್ಯಾ ‘ ಬಿಗ್​ ಬಾಸ್​ ಮ್ಯಾನ್​ ಹಾಗೂ ಬಿಗ್​ ಬಾಸ್​ ಲೇಡಿ’ ಆಗಿದ್ದರು. ಇವರು ಆಟದ ನಿಯಮ ಮುರಿದವರಿಗೆ ರೆಡ್​ ಫ್ಲಾಗ್​ ನೀಡಬೆಕಿತ್ತು. ಆದರೆ, ಇಬ್ಬರೂ ತಮ್ಮದೇ ನಿಯಮಗಳನ್ನು ಸೃಷ್ಟಿ ಮಾಡಿಕೊಂಡಿದ್ದರಿಂದ ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಉದ್ಭವ ಆದವು. ಜೀಶನ್​ ಅವರು ಪ್ರತೀಕ್​ ಮೇಲೆ ಹಲ್ಲೆ ಮಾಡಿ ಬಿಗ್​ ಬಾಸ್​ ನಿಯಮ ಮುರಿದರು. ಈ ಮೂಲಕ ಮನೆಯಿಂದ ಔಟ್​ ಆದರು.

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಮೂಲಕ ನಟ ಜೀಶನ್ ಖಾನ್ ಗುರುತಿಸಿಕೊಂಡರು. ಅವರು ಇತ್ತೀಚೆಗೆ ಗೋವಾ ವಿಮಾನ ನಿಲ್ದಾಣದಿಂದ ಮುಂಬೈಗೆ ಬರುವವರಿದ್ದರು. ಈ ವೇಳೆ ಸ್ನಾನ ಮಾಡಲು ತೆರಳುವಾಗ ತೊಡುವ ಬಟ್ಟೆಯನ್ನು ಹಾಕಿಕೊಂಡಿದ್ದರು. ಆದರೆ, ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸೋಕೆ ಅಲ್ಲಿನ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಈ ರೀತಿಯ ಉಡುಗೆಗೆ ಅನುಮತಿ ಇಲ್ಲ ಎಂದು ಅಧಿಕಾರಿಗಳು ಕಡ್ಡಿಮುರಿದಂತೆ ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

ಇದನ್ನೂ ಓದಿ: ‘ಶುಗರ್ ಡ್ಯಾಡಿ, ಡ್ರಗ್ ಇನ್ ಸ್ಯಾಂಡಲ್​ವುಡ್’; ಬಿಗ್​ ಬಾಸ್​ನಿಂದ ಬಂದ ಬೆನ್ನಲ್ಲೇ ಪುಸ್ತಕ ಬರೆಯಲು ಮುಂದಾದ ಪ್ರಶಾಂತ್​ ಸಂಬರಗಿ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ