AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
TV9 Web
| Edited By: |

Updated on: Aug 26, 2021 | 8:50 PM

Share

‘ಬಿಗ್​ ಬಾಸ್​ ಒಟಿಟಿ’ ಸ್ಪರ್ಧಿಗಳು ವೀಕ್ಷಕರನ್ನು ಸೆಳೆಯೋಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮನೆಯಲ್ಲಿ ಕಿಸ್​ ಮಾಡಿದ ಘಟನೆ ಕೂಡ ನಡೆದಿದೆ. ಆದರೆ, ಈಗ ಬಿಗ್​ ಬಾಸ್​ ಸ್ಪರ್ಧಿ ಜೀಶನ್​ ಖಾನ್​ ಅವರು ಸಹ ಸ್ಪರ್ಧಿ ಪ್ರತೀಕ್​ ಸೆಹಜ್​ಪಾಲ್​ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮೂಲಕ ಅವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿದ್ದಾರೆ.

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದ್ದಾರೆ. ಈ ವೇಳೆ ಪ್ರತೀಕ್​ ಅವರನ್ನು ಜೀಶನ್​ ತಳ್ಳಿ ಹಲ್ಲೆ ನಡೆಸಿದ್ದಾರೆ.

ಜೀಶನ್​ ಮತ್ತು ದಿವ್ಯಾ ‘ ಬಿಗ್​ ಬಾಸ್​ ಮ್ಯಾನ್​ ಹಾಗೂ ಬಿಗ್​ ಬಾಸ್​ ಲೇಡಿ’ ಆಗಿದ್ದರು. ಇವರು ಆಟದ ನಿಯಮ ಮುರಿದವರಿಗೆ ರೆಡ್​ ಫ್ಲಾಗ್​ ನೀಡಬೆಕಿತ್ತು. ಆದರೆ, ಇಬ್ಬರೂ ತಮ್ಮದೇ ನಿಯಮಗಳನ್ನು ಸೃಷ್ಟಿ ಮಾಡಿಕೊಂಡಿದ್ದರಿಂದ ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಉದ್ಭವ ಆದವು. ಜೀಶನ್​ ಅವರು ಪ್ರತೀಕ್​ ಮೇಲೆ ಹಲ್ಲೆ ಮಾಡಿ ಬಿಗ್​ ಬಾಸ್​ ನಿಯಮ ಮುರಿದರು. ಈ ಮೂಲಕ ಮನೆಯಿಂದ ಔಟ್​ ಆದರು.

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಮೂಲಕ ನಟ ಜೀಶನ್ ಖಾನ್ ಗುರುತಿಸಿಕೊಂಡರು. ಅವರು ಇತ್ತೀಚೆಗೆ ಗೋವಾ ವಿಮಾನ ನಿಲ್ದಾಣದಿಂದ ಮುಂಬೈಗೆ ಬರುವವರಿದ್ದರು. ಈ ವೇಳೆ ಸ್ನಾನ ಮಾಡಲು ತೆರಳುವಾಗ ತೊಡುವ ಬಟ್ಟೆಯನ್ನು ಹಾಕಿಕೊಂಡಿದ್ದರು. ಆದರೆ, ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸೋಕೆ ಅಲ್ಲಿನ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಈ ರೀತಿಯ ಉಡುಗೆಗೆ ಅನುಮತಿ ಇಲ್ಲ ಎಂದು ಅಧಿಕಾರಿಗಳು ಕಡ್ಡಿಮುರಿದಂತೆ ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

ಇದನ್ನೂ ಓದಿ: ‘ಶುಗರ್ ಡ್ಯಾಡಿ, ಡ್ರಗ್ ಇನ್ ಸ್ಯಾಂಡಲ್​ವುಡ್’; ಬಿಗ್​ ಬಾಸ್​ನಿಂದ ಬಂದ ಬೆನ್ನಲ್ಲೇ ಪುಸ್ತಕ ಬರೆಯಲು ಮುಂದಾದ ಪ್ರಶಾಂತ್​ ಸಂಬರಗಿ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ