AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 26, 2021 | 8:50 PM

Share

‘ಬಿಗ್​ ಬಾಸ್​ ಒಟಿಟಿ’ ಸ್ಪರ್ಧಿಗಳು ವೀಕ್ಷಕರನ್ನು ಸೆಳೆಯೋಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮನೆಯಲ್ಲಿ ಕಿಸ್​ ಮಾಡಿದ ಘಟನೆ ಕೂಡ ನಡೆದಿದೆ. ಆದರೆ, ಈಗ ಬಿಗ್​ ಬಾಸ್​ ಸ್ಪರ್ಧಿ ಜೀಶನ್​ ಖಾನ್​ ಅವರು ಸಹ ಸ್ಪರ್ಧಿ ಪ್ರತೀಕ್​ ಸೆಹಜ್​ಪಾಲ್​ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮೂಲಕ ಅವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿದ್ದಾರೆ.

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದ್ದಾರೆ. ಈ ವೇಳೆ ಪ್ರತೀಕ್​ ಅವರನ್ನು ಜೀಶನ್​ ತಳ್ಳಿ ಹಲ್ಲೆ ನಡೆಸಿದ್ದಾರೆ.

ಜೀಶನ್​ ಮತ್ತು ದಿವ್ಯಾ ‘ ಬಿಗ್​ ಬಾಸ್​ ಮ್ಯಾನ್​ ಹಾಗೂ ಬಿಗ್​ ಬಾಸ್​ ಲೇಡಿ’ ಆಗಿದ್ದರು. ಇವರು ಆಟದ ನಿಯಮ ಮುರಿದವರಿಗೆ ರೆಡ್​ ಫ್ಲಾಗ್​ ನೀಡಬೆಕಿತ್ತು. ಆದರೆ, ಇಬ್ಬರೂ ತಮ್ಮದೇ ನಿಯಮಗಳನ್ನು ಸೃಷ್ಟಿ ಮಾಡಿಕೊಂಡಿದ್ದರಿಂದ ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಉದ್ಭವ ಆದವು. ಜೀಶನ್​ ಅವರು ಪ್ರತೀಕ್​ ಮೇಲೆ ಹಲ್ಲೆ ಮಾಡಿ ಬಿಗ್​ ಬಾಸ್​ ನಿಯಮ ಮುರಿದರು. ಈ ಮೂಲಕ ಮನೆಯಿಂದ ಔಟ್​ ಆದರು.

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಮೂಲಕ ನಟ ಜೀಶನ್ ಖಾನ್ ಗುರುತಿಸಿಕೊಂಡರು. ಅವರು ಇತ್ತೀಚೆಗೆ ಗೋವಾ ವಿಮಾನ ನಿಲ್ದಾಣದಿಂದ ಮುಂಬೈಗೆ ಬರುವವರಿದ್ದರು. ಈ ವೇಳೆ ಸ್ನಾನ ಮಾಡಲು ತೆರಳುವಾಗ ತೊಡುವ ಬಟ್ಟೆಯನ್ನು ಹಾಕಿಕೊಂಡಿದ್ದರು. ಆದರೆ, ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸೋಕೆ ಅಲ್ಲಿನ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಈ ರೀತಿಯ ಉಡುಗೆಗೆ ಅನುಮತಿ ಇಲ್ಲ ಎಂದು ಅಧಿಕಾರಿಗಳು ಕಡ್ಡಿಮುರಿದಂತೆ ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

ಇದನ್ನೂ ಓದಿ: ‘ಶುಗರ್ ಡ್ಯಾಡಿ, ಡ್ರಗ್ ಇನ್ ಸ್ಯಾಂಡಲ್​ವುಡ್’; ಬಿಗ್​ ಬಾಸ್​ನಿಂದ ಬಂದ ಬೆನ್ನಲ್ಲೇ ಪುಸ್ತಕ ಬರೆಯಲು ಮುಂದಾದ ಪ್ರಶಾಂತ್​ ಸಂಬರಗಿ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!