ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ.

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 26, 2021 | 8:50 PM

‘ಬಿಗ್​ ಬಾಸ್​ ಒಟಿಟಿ’ ಸ್ಪರ್ಧಿಗಳು ವೀಕ್ಷಕರನ್ನು ಸೆಳೆಯೋಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮನೆಯಲ್ಲಿ ಕಿಸ್​ ಮಾಡಿದ ಘಟನೆ ಕೂಡ ನಡೆದಿದೆ. ಆದರೆ, ಈಗ ಬಿಗ್​ ಬಾಸ್​ ಸ್ಪರ್ಧಿ ಜೀಶನ್​ ಖಾನ್​ ಅವರು ಸಹ ಸ್ಪರ್ಧಿ ಪ್ರತೀಕ್​ ಸೆಹಜ್​ಪಾಲ್​ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮೂಲಕ ಅವರು ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿದ್ದಾರೆ.

‘ಬಾಸ್​ ಮ್ಯಾನ್​ ಬಾಸ್​ ಲೇಡಿ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಜೀಶನ್​ ಮತ್ತು ಪ್ರತೀಕ್​ ನಡುವೆ ಕಿತ್ತಾಟ ಏರ್ಪಟ್ಟಿದೆ. ಆರಂಭದಲ್ಲಿ ಸಣ್ಣಗಿದ್ದ ಜಗಳ ನಂತರ ಮಿತಿ ಮೀರಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದ್ದಾರೆ. ಈ ವೇಳೆ ಪ್ರತೀಕ್​ ಅವರನ್ನು ಜೀಶನ್​ ತಳ್ಳಿ ಹಲ್ಲೆ ನಡೆಸಿದ್ದಾರೆ.

ಜೀಶನ್​ ಮತ್ತು ದಿವ್ಯಾ ‘ ಬಿಗ್​ ಬಾಸ್​ ಮ್ಯಾನ್​ ಹಾಗೂ ಬಿಗ್​ ಬಾಸ್​ ಲೇಡಿ’ ಆಗಿದ್ದರು. ಇವರು ಆಟದ ನಿಯಮ ಮುರಿದವರಿಗೆ ರೆಡ್​ ಫ್ಲಾಗ್​ ನೀಡಬೆಕಿತ್ತು. ಆದರೆ, ಇಬ್ಬರೂ ತಮ್ಮದೇ ನಿಯಮಗಳನ್ನು ಸೃಷ್ಟಿ ಮಾಡಿಕೊಂಡಿದ್ದರಿಂದ ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಉದ್ಭವ ಆದವು. ಜೀಶನ್​ ಅವರು ಪ್ರತೀಕ್​ ಮೇಲೆ ಹಲ್ಲೆ ಮಾಡಿ ಬಿಗ್​ ಬಾಸ್​ ನಿಯಮ ಮುರಿದರು. ಈ ಮೂಲಕ ಮನೆಯಿಂದ ಔಟ್​ ಆದರು.

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಮೂಲಕ ನಟ ಜೀಶನ್ ಖಾನ್ ಗುರುತಿಸಿಕೊಂಡರು. ಅವರು ಇತ್ತೀಚೆಗೆ ಗೋವಾ ವಿಮಾನ ನಿಲ್ದಾಣದಿಂದ ಮುಂಬೈಗೆ ಬರುವವರಿದ್ದರು. ಈ ವೇಳೆ ಸ್ನಾನ ಮಾಡಲು ತೆರಳುವಾಗ ತೊಡುವ ಬಟ್ಟೆಯನ್ನು ಹಾಕಿಕೊಂಡಿದ್ದರು. ಆದರೆ, ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸೋಕೆ ಅಲ್ಲಿನ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಈ ರೀತಿಯ ಉಡುಗೆಗೆ ಅನುಮತಿ ಇಲ್ಲ ಎಂದು ಅಧಿಕಾರಿಗಳು ಕಡ್ಡಿಮುರಿದಂತೆ ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

ಇದನ್ನೂ ಓದಿ: ‘ಶುಗರ್ ಡ್ಯಾಡಿ, ಡ್ರಗ್ ಇನ್ ಸ್ಯಾಂಡಲ್​ವುಡ್’; ಬಿಗ್​ ಬಾಸ್​ನಿಂದ ಬಂದ ಬೆನ್ನಲ್ಲೇ ಪುಸ್ತಕ ಬರೆಯಲು ಮುಂದಾದ ಪ್ರಶಾಂತ್​ ಸಂಬರಗಿ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?