AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಊಹಿಸದ ಅಂತ್ಯ ಸಿಕ್ಕಿದೆ’; ವಿಚ್ಛೇದನದ ಬಗ್ಗೆ ಎಆರ್ ರೆಹಮಾನ್ ಮಾತು

ರೆಹಮಾನ್ ಅವರು ಖ್ಯಾತ ಸಂಗೀತ ಸಂಯೋಜಕರು. ಮೊದಲು ಹಿಂದೂ ಆಗಿದ್ದ ಅವರು ನಂತರ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡರು. ಈ ಕಾರಣಕ್ಕೆ ಮುಸ್ಲಿಂ ಹುಡುಗಿಯನ್ನೇ ಅವರು ಮದುವೆ ಆಗಿದ್ದರು. ಈಗ ಇವರ ದಾಂಪತ್ಯ ಕೊನೆ ಆಗಿದೆ.

‘ನಾವು ಊಹಿಸದ ಅಂತ್ಯ ಸಿಕ್ಕಿದೆ’; ವಿಚ್ಛೇದನದ ಬಗ್ಗೆ ಎಆರ್ ರೆಹಮಾನ್ ಮಾತು
‘ನಾವು ಊಹಿಸದ ಅಂತ್ಯ ಸಿಕ್ಕಿದೆ’; ವಿಚ್ಛೇದನದ ಬಗ್ಗೆ ಎಆರ್ ರೆಹಮಾನ್ ಮಾತು
ರಾಜೇಶ್ ದುಗ್ಗುಮನೆ
|

Updated on: Nov 20, 2024 | 10:49 AM

Share

ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ಅವರು ಪತ್ನಿ ಸೈರಾ ಬಾನು ಅವರಿಗೆ ವಿಚ್ಛೇದನ ನೀಡಿದ್ದಾರೆ. ಇದರಿಂದ ಇವರ 29 ವರ್ಷಗಳ ದಾಂಪತ್ಯ ಕೊನೆ ಆಗಿದೆ. ಇಬ್ಬರೂ ಇನ್ನೇನು ಮೂರು ದಶಕಗಳ ದಾಂಪತ್ಯ ಸಂಭ್ರಮವನ್ನು ಆಚರಿಸಬೇಕಿತ್ತು. ಆದರೆ, ಅದಕ್ಕೂ ಮೊದಲೇ ಇಬ್ಬರೂ ಬೇರೆ ಆಗುವ ನಿರ್ಧಾರ ಮಾಡಿದ್ದಾರೆ. ಈ ವಿಚಾರವನ್ನು ಸೈರಾ ಬಾನು ಅವರು ಖಚಿತಪಡಿಸಿದ್ದರು. ಈಗ ಎಆರ್​ ರೆಹಮಾನ್ ಕೂಡ ಈ ಬಗ್ಗೆ ಮೌನ ಮುರಿದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರೋ ರೆಹಮಾನ್ ಅವರು, ‘ನಾವು ಇನ್ನೇನು 30 ವರ್ಷಗಳ ದಾಂಪತ್ಯಕ್ಕೆ ಕಾಲಿಡಬೇಕಿತ್ತು. ಆದರೆ, ಯಾರೂ ಊಹಿಸದ ಅಂತ್ಯ ಸಿಕ್ಕಿದೆ. ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವೂ ನಡುಗಬಹುದು. ಆದರೂ, ಈ ಚೂರಾದ ಸಂಬಂಧದಲ್ಲೂ ನಾವು ಅರ್ಥವನ್ನು ಹುಡುಕುತ್ತೇವೆ. ಒಡೆದ ತುಣುಕುಗಳು ಮತ್ತೆ ಎಂದಿಗೂ ಒಂದಾಗಲಾರದು. ನಮ್ಮ ಖಾಸಗಿತನ ಗೌರವಿಸಿದ  ಗೆಳೆಯರಿಗೆ ಧನ್ಯವಾದ’ ಎಂದಿದ್ದಾರೆ ರೆಹಮಾನ್.

1995ರಲ್ಲಿ ಎ.ಆರ್. ರೆಹಮಾನ್ ಹಾಗೂ ಸೈರಾ ವಿವಾಹ ಆಗಿದ್ದರು. ರೆಹಮಾನ್ ಅವರು ನಾಚಿಕೆ ಸ್ವಭಾವದವರು. ಹೀಗಾಗಿ, ಅವರಿಗೆ ಯಾರನ್ನೂ ಪ್ರೀತಿ ಮಾಡುವಷ್ಟು ಧೈರ್ಯ ಇರಲಿಲ್ಲ. ಹೀಗಾಗಿ ಅರೇಂಜ್ ಮ್ಯಾರೇಜ್ ಆಗಬೇಕಾಯಿತು. ತಾಯಿ ನೋಡಿದ ಹುಡುಗಿಯನ್ನು ಅವರು ಮದುವೆ ಆದರು. ಆಗ ಅವರಿಗೆ 29 ವರ್ಷ ವಯಸ್ಸಾಗಿತ್ತು. ಈ ದಂಪತಿಗೆ ಮೂವರು ಮಕ್ಕಳು ಇದ್ದಾರೆ.

ಇದನ್ನೂ ಓದಿ: ಎಆರ್ ರೆಹಮಾನ್ ವಿಚ್ಛೇದನ: ಸೈರಾ ಬಾನು ಜೊತೆಗಿನ 29 ವರ್ಷಗಳ ದಾಂಪತ್ಯ ಅಂತ್ಯ

ರೆಹಮಾನ್ ಅವರು ಖ್ಯಾತ ಸಂಗೀತ ಸಂಯೋಜಕರು. ಮೊದಲು ಹಿಂದೂ ಆಗಿದ್ದ ಅವರು ನಂತರ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡರು. ಈ ಕಾರಣಕ್ಕೆ ಮುಸ್ಲಿಂ ಹುಡುಗಿಯನ್ನೇ ಅವರು ಮದುವೆ ಆಗಿದ್ದರು. ಈಗ ಇವರ ದಾಂಪತ್ಯ ಕೊನೆ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ