AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಧಾನ ಸಭೆ ಬಳಿಕವೂ ತೆಲುಗು ಚಿತ್ರರಂಗಕ್ಕೆ ಖಡಕ್ ಸಂದೇಶ ನೀಡಿದ ರೇವಂತ್ ರೆಡ್ಡಿ

ತೆಲುಗು ಚಿತ್ರರಂಗ ಮತ್ತು ತೆಲಂಗಾಣ ಸರ್ಕಾರದ ನಡುವೆ ಜಟಾಪಟಿ ಶುರುವಾಗಿದೆ. ಅಲ್ಲು ಅರ್ಜುನ್ ಬಂಧನದ ಬಳಿಕ ವಿವಾದ ಉಂಟಾಗಿದ್ದು, ಸರ್ಕಾರವನ್ನು ಅನೇಕರು ಟೀಕಿಸಿದ್ದಾರೆ. ಇಂದು (ಡಿಸೆಂಬರ್​ 26) ಟಾಲಿವುಡ್​ನ ಪ್ರಮುಖರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಭೆಯಲ್ಲಿ ತೆಲುಗು ಚಿತ್ರರಂಗಕ್ಕೆ ರೇವಂತ್ ರೆಡ್ಡಿ ಕೆಲವು ಖಡಕ್ ಸಂದೇಶ ನೀಡಿದ್ದಾರೆ.

ಸಂಧಾನ ಸಭೆ ಬಳಿಕವೂ ತೆಲುಗು ಚಿತ್ರರಂಗಕ್ಕೆ ಖಡಕ್ ಸಂದೇಶ ನೀಡಿದ ರೇವಂತ್ ರೆಡ್ಡಿ
Allu Arjun, Revanth Reddy
ಮದನ್​ ಕುಮಾರ್​
|

Updated on: Dec 26, 2024 | 4:36 PM

Share

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ ಮೀಟಿಂಗ್​ನಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಚಿತ್ರರಂಗಕ್ಕೆ ಒಂದಷ್ಟು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಜನರನ್ನು ನಿಯಂತ್ರಿಸುವ ಜವಾಬ್ದಾರಿ ಪೊಲೀಸರಷ್ಟೇ ಸೆಲೆಬ್ರಿಟಿಗಳಿಗೂ ಇರಬೇಕು. ಅಲ್ಲು ಅರ್ಜುನ್ ಅವರು ‘ಸಂಧ್ಯಾ’ ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ ರೇವತಿ ಎಂಬ ಅಭಿಮಾನಿಯು ಕಾಲ್ತುಳಿತದಿಂದ ಮೃತರಾದರು. ಇಂಥ ಸಂದರ್ಭಗಳಲ್ಲಿ ಶಾಂತಿ ಕಾಪಾಡಲು ಸೆಲೆಬ್ರಿಟಿಗಳು ಪೊಲೀಸರಿಗೆ ನೆರವು ನೀಡಬೇಕು ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ಸಿನಿಮಾಗಳ ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಿದಾಗ ಇಂಥ ದುರ್ಘಟನೆಗಳು ನಡೆಯುತ್ತವೆ. ಹಾಗಾಗಿ ಸದ್ಯಕ್ಕೆ ಎಲ್ಲ ರೀತಿಯ ಸ್ಪೆಷಲ್ ಶೋಗಳನ್ನು ನಿಷೇಧಿಸಲಾಗಿದೆ. ಅಲ್ಲದೇ, ಸೆಲೆಬ್ರಿಟಿಗಳು ತಮ್ಮ ಸ್ವಂತ ಬೌನ್ಸರ್​ಗಳನ್ನು ನೇಮಿಸಿಕೊಂಡಾಗ ಬೌನ್ಸರ್​ಗಳು ಜನರೊಂದಿಗೆ ಅಪಾಯಕಾರಿಯಾಗಿ ನಡೆದುಕೊಳ್ಳುವಂತಿಲ್ಲ ಎಂದು ಕೂಡ ರೇವಂತ್ ರೆಡ್ಡಿ ಅವರು ಎಚ್ಚರಿಗೆ ನೀಡಿದ್ದಾರೆ.

ಇದನ್ನೂ ಓದಿ: ಸಂಧ್ಯಾ ಥಿಯೇಟರ್ ಕಾಲ್ತುಳಿತ: ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ಕೊಟ್ಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ‘ಸಂಧ್ಯಾ’ ಚಿತ್ರಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಬೌನ್ಸರ್​ಗಳು ಜನರ ಜೊತೆ ನಡೆದುಕೊಂಡ ರೀತಿಯನ್ನು ಪೊಲೀಸರು ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಅವರು ಎಲ್ಲ ಬೌನ್ಸರ್​ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್, ನಿರ್ಮಾಪಕ ದಿಲ್ ರಾಜು, ನಟ ಅಕ್ಕಿನೇನಿ ನಾಗಾರ್ಜುನ, ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಮುಂತಾದವರು ಇಂದಿನ ಸಂಭೆಯಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ: ಪೊಲೀಸ್ ವಿಚಾರಣೆ ವೇಳೆ ಅಲ್ಲು ಅರ್ಜುನ್​ಗೆ ಕೇಳಿದ ಪ್ರಶ್ನೆಗಳಿವು

ಮೃತ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 2 ಕೋಟಿ ರೂಪಾಯಿ ಪರಿಹಾರ ನೀಡಿದ್ದಾರೆ. ಅಭಿಮಾನಿಯ ಸಾವಿನ ಬಳಿಕ ಅವರು ಮಂಕಾಗಿದ್ದಾರೆ. ‘ಪುಷ್ಪ 2’ ಸಿನಿಮಾದ ಅಭೂತಪೂರ್ವ ಯಶಸ್ಸನ್ನು ಸಂಭ್ರಮಿಸಲು ಕೂಡ ಅವರಿಗೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಲ್ಲು ಅರವಿಂದ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ