AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾರೆ ಕೆಲಸದ ಮೊರೆಹೋದ ಆರ್ಟಿಸ್ಟ್; ಪದ್ಮಶ್ರೀ ಪಡೆದ ಕಲಾವಿದನಿಗೆ ಇದೆಂಥ ಸ್ಥಿತಿ

ದರ್ಶನಮ್ ಅವರು ಕಿನ್ನೇರ ಮೊಗಲಯ್ಯ ಎಂದು ಕೂಡ ಫೇಮಸ್. ಕಿನ್ನೇರ ಎಂಬ ಹೆಸರಿನಿಂದ ಕರೆಯಲ್ಪಡುವ ಬುಡಕಟ್ಟು ಸಂಗೀತ ವಾದ್ಯ ನುಡಿಸುವ ಕೆಲವೇ ಕೆಲವು ಕಲಾವಿದರಲ್ಲಿ ಅವರು ಕೂಡ ಒಬ್ಬರು. ಕಿನ್ನೇರ ವೀಣೆ ತಂತಿ ವಾದ್ಯವಾಗಿದ್ದು, ಇದರ ಮೂಲ ತುಂಬಾನೇ ಹಳೆಯದು. ಇದನ್ನು ದರ್ಶನಮ್ ಅವರು ನುಡಿಸುತ್ತಾರೆ .

ಗಾರೆ ಕೆಲಸದ ಮೊರೆಹೋದ ಆರ್ಟಿಸ್ಟ್; ಪದ್ಮಶ್ರೀ ಪಡೆದ ಕಲಾವಿದನಿಗೆ ಇದೆಂಥ ಸ್ಥಿತಿ
ದರ್ಶನಮ್
ರಾಜೇಶ್ ದುಗ್ಗುಮನೆ
|

Updated on: May 04, 2024 | 3:27 PM

Share

ಚಿತ್ರರಂಗದಲ್ಲಿ ಯಾರ ಬದುಕು ಯಾವ ರೀತಿಯಲ್ಲಿ ಬದಲಾಗುತ್ತದೆ ಎಂದು ಹೇಳೋಕೆ ಸಾಧ್ಯವಿಲ್ಲ. ಕೆಲವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದರೆ ಇನ್ನೂ ಕೆಲವರು ಸಂಕಷ್ಟ ಅನುಭವಿಸುತ್ತಾರೆ. ಇದಕ್ಕೆ ತೆಲುಗು ಆರ್ಟಿಸ್ಟ್ ದರ್ಶನಮ್ ಮೊಗಲಯ್ಯಾ (Darshanam Mogilaiah) ಉತ್ತಮ ಉದಾಹರಣೆ. ಪದ್ಮಶ್ರೀ ಪ್ರಶಸ್ತಿ ಪಡೆದ ಇವರು ಈಗ ಹೈದರಾಬಾದ್​ನಲ್ಲಿ ದಿನಗೂಲಿ ಮಾಡುತ್ತಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ದರ್ಶನಮ್ ಅವರು ಕಿನ್ನೇರ ಮೊಗಲಯ್ಯ ಎಂದು ಕೂಡ ಫೇಮಸ್. ಕಿನ್ನೇರ ಎಂಬ ಹೆಸರಿನಿಂದ ಕರೆಯಲ್ಪಡುವ ಬುಡಕಟ್ಟು ಸಂಗೀತ ವಾದ್ಯ ನುಡಿಸುವ ಕೆಲವೇ ಕೆಲವು ಕಲಾವಿದರಲ್ಲಿ ಅವರು ಕೂಡ ಒಬ್ಬರು. ಕಿನ್ನೇರ ವೀಣೆ ತಂತಿ ವಾದ್ಯವಾಗಿದ್ದು, ಇದರ ಮೂಲ ತುಂಬಾನೇ ಹಳೆಯದು. ಇದನ್ನು ದರ್ಶನಮ್ ಅವರು ನುಡಿಸುತ್ತಾರೆ . 2022ರಲ್ಲಿ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಕಲಾ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ.

ಸದ್ಯ ಈಗ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಲ್ಲಿ ಅವರು ಗಾರೆ ಕೆಲಸ ಮಾಡುತ್ತಿರುವುದು ಇದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರ ಕಷ್ಟಕ್ಕೆ ಸರ್ಕಾರ ಕಿವಿ ಆಗಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ

‘ಭೀಮ್ಲಾ ನಾಯಕ್’ ಸಿನಿಮಾದ ಟೈಟಲ್ ಸಾಂಗ್​​ಗೆ ದರ್ಶನಮ್ ಅವರು ಕಿನ್ನೇರ ನುಡಿಸಿದ್ದರು. ರಾಜ್ಯ ಸರ್ಕಾರದಿಂದ ಅವರಿಗೆ ಪ್ರತಿ ತಿಂಗಳು 10 ಸಾವಿರ ರೂಪಾಯಿ ನೀಡೋ ಬಗ್ಗೆ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಇತ್ತೀಚೆಗೆ ಅದನ್ನು ಅವರು ನಿಲ್ಲಿಸಿದ್ದರು. ಇದಾದ ಬಳಿಕ ದರ್ಶನಮ್ ಅವರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು