Alina Khan: ಕಾನ್​ ಚಿತ್ರೋತ್ಸವದ ರೆಡ್ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿದ ಪಾಕಿಸ್ತಾನದ ತೃತೀಯ ಲಿಂಗಿ ಕಲಾವಿದೆ

Cannes Film Festival 2022: ಕಾನ್ ಚಿತ್ರೋತ್ಸವದಲ್ಲಿ ಪಾಕಿಸ್ತಾನಿ ಮೂಲದ ತೃತೀಯ ಲಿಂಗಿ ನಟಿ ಅಲಿನಾ ಖಾನ್​ ಭಾಗಿಯಾಗಿದ್ದಾರೆ. ಅವರು ನಟಿಸಿರುವ ‘ಜಾಯ್​ಲ್ಯಾಂಡ್’ ಪ್ರದರ್ಶನಗೊಂಡಿದ್ದು ಮೆಚ್ಚುಗೆ ಗಳಿಸಿದೆ. ಜತೆಗೆ ಅಲಿನಾ ಮೊದಲ ಬಾರಿಗೆ ರೆಡ್ ಕಾರ್ಪೆಟ್​​ನಲ್ಲಿ ಹೆಜ್ಜೆ ಹಾಕಿದ್ದಾರೆ.

Alina Khan: ಕಾನ್​ ಚಿತ್ರೋತ್ಸವದ ರೆಡ್ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿದ ಪಾಕಿಸ್ತಾನದ ತೃತೀಯ ಲಿಂಗಿ ಕಲಾವಿದೆ
ಪಾಕಿಸ್ತಾನ ಮೂಲದ ಅಲಿನಾ ಖಾನ್​Image Credit source: Getty Images
Follow us
| Updated By: shivaprasad.hs

Updated on: May 25, 2022 | 1:13 PM

2022ರ ಕಾನ್ ಚಲನಚಿತ್ರೋತ್ಸವ (Cannes Film Festival 2022) ಈ ಬಾರಿ ದೊಡ್ಡ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಹಾಲಿವುಡ್, ಭಾರತೀಯ ಚಿತ್ರರಂಗ ಸೇರಿದಂತೆ ವಿಶ್ವದ ಪ್ರಖ್ಯಾತ ತಾರೆಯರು ರೆಡ್​ ಕಾರ್ಪೆಟ್​ನಲ್ಲಿ ವಿಶೇಷ ಉಡುಗೆಗಳನ್ನು ತೊಟ್ಟು ಹೆಜ್ಜೆಹಾಕಿದ್ದಾರೆ. ಭಾರತ ಈ ಬಾರಿ ‘country of honour’ ವಿಭಾಗದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದೆ. ಅಚ್ಚರಿಯೆಂದರೆ ಈ ಚಿತ್ರೋತ್ಸವದಲ್ಲಿ ಪಾಕಿಸ್ತಾನದ ಚಿತ್ರವೊಂದಕ್ಕೆ ಅವಕಾಶ ಸಿಕ್ಕಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಚಿತ್ರವೊಂದು ಈ ಅವಕಾಶ ಪಡೆದಿದೆ ಎಂದು ವರದಿಗಳು ಹೇಳಿವೆ. ಪಾಕಿಸ್ತಾನವನ್ನು ಪ್ರತಿನಿಧಿಸುತ್ತಿರುವ ‘ಜಾಯ್‌ಲ್ಯಾಂಡ್’ ಚಿತ್ರದಲ್ಲಿ ತೃತೀಯ ಲಿಂಗಿ ನಟಿ ಅಲಿನಾ ಖಾನ್ (Alina Khan) ಕೂಡ ಇದ್ದಾರೆ. ಮೊದಲ ಬಾರಿಗೆ ಅಲಿನಾ ಖಾನ್ ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದು, ಇದೀಗ ವಿಶ್ವಾದ್ಯಂತ ಸಖತ್ ಸುದ್ದಿಯಾಗಿದೆ.​

ಸೈಮ್ ಸಾದಿಕ್ ನಿರ್ದೇಶನದ ‘ಜಾಯ್​ಲ್ಯಾಂಡ್’ ಚಲನಚಿತ್ರದಲ್ಲಿ ಅಲಿನಾ ಖಾನ್ ಬಣ್ಣಹಚ್ಚಿದ್ದಾರೆ. ಪ್ರಸ್ತುತ ಕಾನ್ ಚಿತ್ರೋತ್ಸವದಲ್ಲಿ ಅವರು ಧರಿಸಿದ್ದ ದಿರಿಸು ಗಮನ ಸೆಳೆದಿದೆ. ಹಳದಿ- ಗುಲಾಬಿ ಬಣ್ಣದ ಲೆಹಂಗಾದಲ್ಲಿ ಮಿಂಚಿದ ಅವರು ದೊಡ್ಡ ಕಿವಿಯೋಲೆಗಳನ್ನು ಧರಿಸಿದ್ದರು. ಅಲಿನಾ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆಹಾಕುವಾಗ ಮರೂನ್ ಬಣ್ಣದ ಸೀರೆ ಧರಿಸಿ ಕಾಣಿಸಿಕೊಂಡಿದ್ದರು. ಅವರ ಸ್ಟೈಲಿಶ್ ಲುಕ್ ಎಲ್ಲರ ಗಮನಸೆಳೆದಿದೆ.

Alina Khan

ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆಹಾಕಿದ ‘ಜಾಯ್​ಲ್ಯಾಂಡ್​’ ಚಿತ್ರತಂಡ

ಇದನ್ನೂ ಓದಿ: Hina Khan Cannes Look : ಕಾನ್ ಚಿತ್ರೋತ್ಸವ; ಬೋಲ್ಡ್​​ ಅವತಾರದಲ್ಲಿ ಕಾಣಿಸಿಕೊಂಡ ಹಿನಾ ಖಾನ್​

ಇದನ್ನೂ ಓದಿ
Image
Ram Gopal Varma: ರಾಮ್​ ಗೋಪಾಲ್ ವರ್ಮಾ ವಿರುದ್ಧ ವಂಚನೆ ಪ್ರಕರಣ ದಾಖಲು; ಚಿತ್ರ ನಿರ್ಮಿಸುತ್ತಿದ್ದೇನೆಂದು ಹೇಳಿ ಮೋಸ ಮಾಡಿದ್ರಾ ನಿರ್ದೇಶಕ?
Image
Prithviraj Movie: ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್’ ಚಿತ್ರವನ್ನು ವೀಕ್ಷಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
Image
Love Birds Movie: ‘ಲವ್ ಬರ್ಡ್ಸ್​’ನಲ್ಲಿ ತೆರೆ ಹಂಚಿಕೊಳ್ಳಲಿರುವ ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್
Image
Karan Johar: 50ನೇ ವಸಂತಕ್ಕೆ ಕಾಲಿಟ್ಟ ಕರಣ್ ಜೋಹರ್; ಸ್ಟಾರ್ ನಿರ್ಮಾಪಕನ ಪಾರ್ಟಿಯಲ್ಲಿ ಯಶ್?

ಪಾಕಿಸ್ತಾನದ ತೃತೀಯ ಲಿಂಗಿ ಸಂಸ್ಕೃತಿ ಸೇರಿದಂತೆ ಹಲವು ವಿಚಾರಗಳನ್ನು ‘ಜಾಯ್​ಲ್ಯಾಂಡ್’ ಚಿತ್ರದ ಮೂಲಕ ಪ್ರಸ್ತುತಪಡಿಸಲಾಗಿದೆ. ಕಾನ್​ ಚಿತ್ರೋತ್ಸವದ ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿ ಈ ಸಿನಿಮಾ ಮೊದಲ ಪ್ರದರ್ಶನ ಕಂಡಿತು. ಚಿತ್ರದಲ್ಲಿ ಅಲಿನಾ ಖಾನ್ ಜತೆಗೆ ಅಲಿ ಜುನೇಜೊ, ರಸ್ತಿ ಫಾರೂಕ್, ಸರ್ವತ್ ಗಿಲಾನಿ, ಸೊಹೈಲ್ ಸಮೀರ್, ಸಲ್ಮಾನ್ ಪೀರ್ಜಾದಾ ಮತ್ತು ಸಾನಿಯಾ ಸಯೀದ್ ಮೊದಲಾದವರು ನಟಿಸಿದ್ದಾರೆ. ಚಿತ್ರಕ್ಕೆ ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ: Cannes film Festival 2022: ಕಾನ್​ ಚಿತ್ರೋತ್ಸವಕ್ಕೆ ದೀಪಿಕಾ ಪಡುಕೋಣೆ ಜ್ಯೂರಿ; ಜಾಗತಿಕ ಮಟ್ಟದಲ್ಲಿ ಹೆಚ್ಚಿತು ಕನ್ನಡತಿಯ ಗೌರವ

ಕಾನ್ ಚಿತ್ರೋತ್ಸವವು ಮೇ 17ರಂದು ಆರಂಭವಾಗಿತ್ತು. ಮೇ 28ರ ಶನಿವಾರದಂದು ಈ ಉತ್ಸವ ಮುಕ್ತಾಯವಾಗಲಿದೆ. ಭಾರತದ ಅನೇಕ ತಾರೆಯರು ಈ ಬಾರಿ ಅಲ್ಲಿ ಹೆಜ್ಜೆಹಾಕಿದ್ಧಾರೆ. ದೀಪಿಕಾ ಪಡುಕೋಣೆ ಜ್ಯೂರಿಯಾಗಿ ಕಾಣಿಸಿಕೊಂಡಿದ್ದರು. ತಮನ್ನಾ ಭಾಟಿಯಾ, ಐಶ್ವರ್ಯಾ ರೈ, ಹಿನಾ ಖಾನ್, ಪೂಜಾ ಹೆಗ್ಡೆ ಸೇರಿದಂತೆ ಹಲವು ತಾರೆಯರು ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ