AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sehar Shinwari: ಮೋದಿ ವಿರುದ್ಧ ದೂರು ನೀಡಲು ಮುಂದಾದ ಪಾಕ್​ ನಟಿ; ಖಡಕ್​ ಪ್ರತಿಕ್ರಿಯೆ ನೀಡಿದ ದೆಹಲಿ ಪೊಲೀಸರು

PM Narendra Modi: ಪಾಕಿಸ್ತಾನದ ಗಲಭೆಗೆ ಮೋದಿ ಕಾರಣ ಎಂದು ನಟಿ ಸೆಹರ್ ಶಿನ್ವಾರಿ ಆರೋಪ ಮಾಡಿದ್ದಾರೆ. ಅವರ ಟ್ವೀಟ್​ಗೆ ದೆಹಲಿ ಪೊಲೀಸರು ಉತ್ತರ ನೀಡಿದ್ದಾರೆ.

Sehar Shinwari: ಮೋದಿ ವಿರುದ್ಧ ದೂರು ನೀಡಲು ಮುಂದಾದ ಪಾಕ್​ ನಟಿ; ಖಡಕ್​ ಪ್ರತಿಕ್ರಿಯೆ ನೀಡಿದ ದೆಹಲಿ ಪೊಲೀಸರು
ಸೆಹರ್ ಶಿನ್ವಾರಿ, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on: May 10, 2023 | 6:47 PM

Share

ಪಾಕಿಸ್ತಾನದಲ್ಲಿ ಸದ್ಯದ ಪರಿಸ್ಥಿತಿ ಉದ್ವಿಗ್ನವಾಗಿದೆ. ಅಲ್ಲಿನ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ (Imran Khan) ಬಂಧನದ ಬಳಿಕ ಹಲವು ಕಡೆಗಳಲ್ಲಿ ಗಲಭೆ ಉಂಟಾಗಿದೆ. ಒಂದು ರೀತಿಯ ನಾಗರಿಕ ಯುದ್ಧದಂತಹ ಪರಿಸ್ಥಿತಿ ಅಲ್ಲಿ ನಿರ್ಮಾಣ ಆಗಿದೆ. ಈ ಪರಿಸ್ಥಿತಿಯಲ್ಲಿ ಪಾಕ್​ ನಟಿ ಸೆಹರ್​ ಶಿನ್ವಾರಿ ಅವರು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಬಗ್ಗೆ ಟ್ವೀಟ್​ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಆಗುತ್ತಿರುವ ಸಮಸ್ಯೆಗೆ ಮೋದಿ ಕಾರಣ ಎಂದು ಸೆಹರ್​ ಶಿನ್ವಾರಿ ಆರೋಪಿಸಿದ್ದಾರೆ. ಅಲ್ಲದೇ, ಮೋದಿ ವಿರುದ್ಧ ದೂರು ನೀಡಲು ದೆಹಲಿ ಪೊಲೀಸರ ಸಹಾಯ ಕೇಳಿದ್ದಾರೆ. ನಟಿಯ ಈ ಟ್ವೀಟ್​ ನೋಡಿಕೊಂಡು ದೆಹಲಿ ಪೊಲೀಸರು ಸುಮ್ಮನೆ ಕುಳಿತಿಲ್ಲ. ಆ ನಟಿಗೆ ಖಡಕ್​ ಪ್ರತಿಕ್ರಿಯೆ ನೀಡಲಾಗಿದೆ. ಅಷ್ಟಕ್ಕೂ ಪಾಕ್​ ನಟಿ ಸೆಹರ್​ ಶಿನ್ವಾರಿ (Sehar Shinwari) ಹೇಳಿದ್ದೇನು? ಅದಕ್ಕೆ ದೆಹಲಿ ಪೋಲಿಸರ ನೀಡಿದ ಉತ್ತರ ಏನು? ಇಲ್ಲಿದೆ ವಿವರ..

ಪಾಕ್​ ನಟಿ ಸೆಹರ್​ ಶಿನ್ವಾರಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ವಿಷಯಗಳ ಬಗ್ಗೆ ಅವರು ಟ್ವೀಟ್​ ಮಾಡುತ್ತಾರೆ. ಟ್ವಿಟರ್​ನಲ್ಲಿ ಅವರನ್ನು ಲಕ್ಷಾಂತರ ಮಂದಿ ಫಾಲೋ ಮಾಡುತ್ತಿದ್ದಾರೆ. ಈಗ ಪಾಕಿಸ್ತಾನದಲ್ಲಿ ಆಗುತ್ತಿರುವ ಗಲಭೆಗೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರಣ ಎಂಬುದು ಸೆಹರ್​ ಶಿನ್ವಾರಿ ವಾದ.

ಸೆಹರ್​ ಶಿನ್ವಾರಿ ಟ್ವೀಟ್​ನಲ್ಲಿ ಏನಿದೆ?

‘ಯಾರಿಗಾದರೂ ದೆಹಲಿ ಪೊಲೀಸರ ಆನ್​ಲೈನ್​ ಸಂಪರ್ಕ ತಿಳಿದಿದೆಯೇ? ಪಾಕಿಸ್ತಾನದಲ್ಲಿ ಗಲಭೆ ಮತ್ತು ಭಯೋತ್ಪಾದನೆ ಹಬ್ಬಿಸುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಬೇಹುಗಾರಿಕಾ ಸಂಸ್ಥೆ ರಾ ವಿರುದ್ಧ ನಾನು ದೂರು ನೀಡಬೇಕು. ಭಾರತದ ಸುಪ್ರೀಂ ಕೋರ್ಟ್​ ನನಗೆ ನ್ಯಾಯ ಒದಗಿಸುತ್ತದೆ ಎಂಬ ನಂಬಿಕೆ ಇದೆ’ ಎಂದು ಸೆಹರ್​ ಶಿನ್ವಾರಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: PM Narendra Modi: ₹5,500 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

ದೆಹಲಿ ಪೊಲೀಸರ ಪ್ರತಿಕ್ರಿಯೆ ಏನು?

ಸೆಹರ್​ ಶಿನ್ವಾರಿ ಅವರು ಮಾಡಿದ ಈ ಟ್ವೀಟ್​ ದೆಹಲಿ ಪೊಲೀಸರ ಕಣ್ಣಿಗೆ ಬಿದ್ದಿದೆ. ಅದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಪಾಕಿಸ್ತಾನದಲ್ಲಿ ನಮ್ಮ ಕಾರ್ಯವಾಪ್ತಿ ಇಲ್ಲ. ನಿಮ್ಮ ದೇಶದಲ್ಲಿ ಇಂಟರ್​ನೆಟ್​ ಸೌಲಭ್ಯ ಕಡಿತಗೊಂಡಿದ್ದರೂ ಕೂಡ ನೀವು ಹೇಗೆ ಈ ಟ್ವೀಟ್​ ಮಾಡಿದ್ದೀರಿ ಎಂಬುದನ್ನು ನಾವು ತಿಳಿಯಲು ಬಯಸುತ್ತೇವೆ’ ಎಂದು ದೆಹಲಿ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ಸೆಹರ್​ ಶಿನ್ವಾರಿ ಮಾಡಿದ ಅರ್ಥವಿಲ್ಲದ ಈ ಟ್ವೀಟ್​ಗೆ ನೂರಾರು ಜನರು ಕಮೆಂಟ್​ ಮಾಡಿದ್ದಾರೆ. ‘ಕುಡಿದ ನಶೆಯಲ್ಲಿ ಈಕೆ ಈ ರೀತಿ ಟ್ವೀಟ್​ ಮಾಡಿದ್ದಾಳೆ’ ಎಂದು ನೆಟ್ಟಿಗರೊಬ್ಬರು ಟ್ರೋಲ್​ ಮಾಡಿದ್ದಾರೆ. ‘ಯಾರಾದರೂ ಇಷ್ಟು ಮೂರ್ಖರಾಗಲು ಹೇಗೆ ಸಾಧ್ಯ?’ ಎಂದು ಕೂಡ ಅನೇಕರು ಪ್ರಶ್ನೆ ಮಾಡಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ