AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಕೋಟಿ ರೂ. ಸಂಭಾವನೆ ಪಡೆದ ಪ್ರಭಾಸ್​; ಇಷ್ಟು ಹಣಕ್ಕೆ ಅವರು ಕೆಲಸ ಮಾಡೋದು ಎಷ್ಟು ದಿನ?

Prabhas Remuneration: ಪ್ರಭಾಸ್​ ಅವರ ಕಾಲ್​ಶೀಟ್​ಗಾಗಿ ದೊಡ್ಡ ದೊಡ್ಡ ನಿರ್ಮಾಪಕರು ಕಾಯುತ್ತಿದ್ದಾರೆ. ‘ಆದಿಪುರುಷ್​’ ಚಿತ್ರಕ್ಕಾಗಿ ಪ್ರಭಾಸ್​ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

150 ಕೋಟಿ ರೂ. ಸಂಭಾವನೆ ಪಡೆದ ಪ್ರಭಾಸ್​; ಇಷ್ಟು ಹಣಕ್ಕೆ ಅವರು ಕೆಲಸ ಮಾಡೋದು ಎಷ್ಟು ದಿನ?
ಪ್ರಭಾಸ್​
TV9 Web
| Edited By: |

Updated on:Dec 08, 2021 | 9:59 AM

Share

ನಟ ಪ್ರಭಾಸ್ (Prabhas)​ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಯಾವ ಪರಿ ಬೇಡಿಕೆ ಇದೆ ಎಂಬುದನ್ನು ಹೊಸದಾಗಿ ವಿವರಿಸಬೇಕಿಲ್ಲ. ಅವರು ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಪ್ರಸ್ತುತ ಅವರು ನಟಿಸುತ್ತಿರುವ ‘ಆದಿಪುರುಷ್​’ ಚಿತ್ರ (Adipurush Movie) ಸಖತ್​ ನಿರೀಕ್ಷೆ ಮೂಡಿಸಿದೆ. ಅಚ್ಚರಿ ಎಂದರೆ ಈ ಸಿನಿಮಾದಲ್ಲಿ ನಟಿಸಲು ಪ್ರಭಾಸ್​ ಪಡೆದಿದ್ದಾರೆ ಎನ್ನಲಾದ ಸಂಭಾವನೆ (Prabhas Remuneration) ಮೊತ್ತದ ಬಗ್ಗೆ ಒಂದು ಸುದ್ದಿ ಹರಡಿದೆ. ಈ ಚಿತ್ರಕ್ಕಾಗಿ ಅವರು ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದವರಾಗಲೀ, ಪಭಾಸ್​ ಆಗಲಿ ಎಲ್ಲಿಯೂ ಬಾಯಿ ಬಿಟ್ಟಿಲ್ಲ. ‘ಆದಿಪುರುಷ್​’ ಚಿತ್ರಕ್ಕೆ ಓಂ ರಾವುತ್​ ನಿರ್ದೇಶನ ಮಾಡುತ್ತಿದ್ದಾರೆ. ರಾಮನ ಪಾತ್ರದಲ್ಲಿ ಪ್ರಭಾಸ್​ ನಟಿಸುತ್ತಿದ್ದು, ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸುತ್ತಿದ್ದಾರೆ.

150 ಕೋಟಿ ರೂಪಾಯಿ ಸಂಭಾವನೆ ಎಂದರೆ ಸಣ್ಣ ಮೊತ್ತವಲ್ಲ. ಇಷ್ಟು ದೊಡ್ಡ ಸಂಭಾವನೆ ಪಡೆದಿರುವ ಪ್ರಭಾಸ್ ಅವರು ಈ ಚಿತ್ರಕ್ಕೆ 60 ದಿನಗಳ ಕಾಲ್​ಶೀಟ್​ ನೀಡಿದ್ದಾರೆ ಎನ್ನಲಾಗಿದೆ. ಈ ಸಮಯದೊಳಗೆ ಚಿತ್ರತಂಡದವರು ಶೂಟಿಂಗ್​ ಮತ್ತು ಡಬ್ಬಿಂಗ್​ ಕೆಲಸಗಳನ್ನು ಮುಗಿಸಬೇಕು. ‘ಬಾಹುಬಲಿ’ ಯಶಸ್ಸಿನ ನಂತರ ಪ್ರಭಾಸ್​ ನಟಿಸಿದ ‘ಸಾಹೋ’ ಚಿತ್ರ ನಿರೀಕ್ಷಿಸಿದಷ್ಟು ಕಲೆಕ್ಷನ್​ ಮಾಡಲಿಲ್ಲ. ಹಾಗಂತ ಪ್ರಭಾಸ್​ ಅವರಿಗೆ ಇದ್ದ ಬೇಡಿಕೆ ಕಮ್ಮಿ ಆಗಿಲ್ಲ. ಪ್ರಶಾಂತ್​ ನೀಲ್​ ನಿರ್ದೇಶಿಸುತ್ತಿರುವ ‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್​ ನಟಿಸುತ್ತಿದ್ದಾರೆ. ಪೂಜಾ ಹೆಗ್ಡೆ ಜೊತೆ ಅವರು ಅಭಿನಯಿಸಿರುವ ‘ರಾಧೆ ಶ್ಯಾಮ್​’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, 2022ರ ಜ.14ರಂದು ವಿಶ್ವಾದ್ಯಂತ ತೆರೆಕಾಣಲಿದೆ.

ಒಂದು ಕೋಟಿ ರೂ. ದೇಣಿಗೆ ನೀಡಿದ ಪ್ರಭಾಸ್​!

ಪ್ರವಾಹದಿಂದಾಗಿ ಆಂಧ್ರ ಪ್ರದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಅದಕ್ಕಾಗಿ ಟಾಲಿವುಡ್​ ಸ್ಟಾರ್​ ನಟರು ಮರುಕ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಮ್ಮ ಕೈಲಾಸ ಸಹಾಯ ಮಾಡುತ್ತಿದ್ದಾರೆ. ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಚಿರಂಜೀವಿ ಮುಂತಾದ ನಟರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ವಿಶೇಷ ಎಂದರೆ, ಈ ಎಲ್ಲ ಹೀರೋಗಳಿಗಿಂತಲೂ ನಟ ಪ್ರಭಾಸ್​ ಅವರು ಹೆಚ್ಚು ಹಣ ನೀಡಿದ್ದಾರೆ. ಬರೋಬ್ಬರಿ 1 ಕೋಟಿ ರೂ. ಹಣವನ್ನು ಅವರು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ​!

‘ಮೆಗಾ ಸ್ಟಾರ್​’ ಚಿರಂಜೀವಿ, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​, ರಾಮ್​ ಚರಣ್​ ಅವರು ತಲಾ 25 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಅವರೆಲ್ಲರಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಪ್ರಭಾಸ್​ ಅವರು 1 ಕೋಟಿ ರೂ. ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ:

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

‘ರಾಧೆ ಶ್ಯಾಮ್​’ ಚಿತ್ರದ ಕಥೆ ಲೀಕ್​; ಪ್ರಭಾಸ್​-ಪೂಜಾ ಹೆಗ್ಡೆ ಸಿನಿಮಾದ ಈ ಹಾಡಿನಲ್ಲಿ ಅಡಗಿದೆ ಸ್ಟೋರಿ

Published On - 9:55 am, Wed, 8 December 21

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ