AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಕೋಟಿ ರೂ. ಸಂಭಾವನೆ ಪಡೆದ ಪ್ರಭಾಸ್​; ಇಷ್ಟು ಹಣಕ್ಕೆ ಅವರು ಕೆಲಸ ಮಾಡೋದು ಎಷ್ಟು ದಿನ?

Prabhas Remuneration: ಪ್ರಭಾಸ್​ ಅವರ ಕಾಲ್​ಶೀಟ್​ಗಾಗಿ ದೊಡ್ಡ ದೊಡ್ಡ ನಿರ್ಮಾಪಕರು ಕಾಯುತ್ತಿದ್ದಾರೆ. ‘ಆದಿಪುರುಷ್​’ ಚಿತ್ರಕ್ಕಾಗಿ ಪ್ರಭಾಸ್​ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

150 ಕೋಟಿ ರೂ. ಸಂಭಾವನೆ ಪಡೆದ ಪ್ರಭಾಸ್​; ಇಷ್ಟು ಹಣಕ್ಕೆ ಅವರು ಕೆಲಸ ಮಾಡೋದು ಎಷ್ಟು ದಿನ?
ಪ್ರಭಾಸ್​
TV9 Web
| Edited By: |

Updated on:Dec 08, 2021 | 9:59 AM

Share

ನಟ ಪ್ರಭಾಸ್ (Prabhas)​ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಯಾವ ಪರಿ ಬೇಡಿಕೆ ಇದೆ ಎಂಬುದನ್ನು ಹೊಸದಾಗಿ ವಿವರಿಸಬೇಕಿಲ್ಲ. ಅವರು ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಪ್ರಸ್ತುತ ಅವರು ನಟಿಸುತ್ತಿರುವ ‘ಆದಿಪುರುಷ್​’ ಚಿತ್ರ (Adipurush Movie) ಸಖತ್​ ನಿರೀಕ್ಷೆ ಮೂಡಿಸಿದೆ. ಅಚ್ಚರಿ ಎಂದರೆ ಈ ಸಿನಿಮಾದಲ್ಲಿ ನಟಿಸಲು ಪ್ರಭಾಸ್​ ಪಡೆದಿದ್ದಾರೆ ಎನ್ನಲಾದ ಸಂಭಾವನೆ (Prabhas Remuneration) ಮೊತ್ತದ ಬಗ್ಗೆ ಒಂದು ಸುದ್ದಿ ಹರಡಿದೆ. ಈ ಚಿತ್ರಕ್ಕಾಗಿ ಅವರು ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದವರಾಗಲೀ, ಪಭಾಸ್​ ಆಗಲಿ ಎಲ್ಲಿಯೂ ಬಾಯಿ ಬಿಟ್ಟಿಲ್ಲ. ‘ಆದಿಪುರುಷ್​’ ಚಿತ್ರಕ್ಕೆ ಓಂ ರಾವುತ್​ ನಿರ್ದೇಶನ ಮಾಡುತ್ತಿದ್ದಾರೆ. ರಾಮನ ಪಾತ್ರದಲ್ಲಿ ಪ್ರಭಾಸ್​ ನಟಿಸುತ್ತಿದ್ದು, ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸುತ್ತಿದ್ದಾರೆ.

150 ಕೋಟಿ ರೂಪಾಯಿ ಸಂಭಾವನೆ ಎಂದರೆ ಸಣ್ಣ ಮೊತ್ತವಲ್ಲ. ಇಷ್ಟು ದೊಡ್ಡ ಸಂಭಾವನೆ ಪಡೆದಿರುವ ಪ್ರಭಾಸ್ ಅವರು ಈ ಚಿತ್ರಕ್ಕೆ 60 ದಿನಗಳ ಕಾಲ್​ಶೀಟ್​ ನೀಡಿದ್ದಾರೆ ಎನ್ನಲಾಗಿದೆ. ಈ ಸಮಯದೊಳಗೆ ಚಿತ್ರತಂಡದವರು ಶೂಟಿಂಗ್​ ಮತ್ತು ಡಬ್ಬಿಂಗ್​ ಕೆಲಸಗಳನ್ನು ಮುಗಿಸಬೇಕು. ‘ಬಾಹುಬಲಿ’ ಯಶಸ್ಸಿನ ನಂತರ ಪ್ರಭಾಸ್​ ನಟಿಸಿದ ‘ಸಾಹೋ’ ಚಿತ್ರ ನಿರೀಕ್ಷಿಸಿದಷ್ಟು ಕಲೆಕ್ಷನ್​ ಮಾಡಲಿಲ್ಲ. ಹಾಗಂತ ಪ್ರಭಾಸ್​ ಅವರಿಗೆ ಇದ್ದ ಬೇಡಿಕೆ ಕಮ್ಮಿ ಆಗಿಲ್ಲ. ಪ್ರಶಾಂತ್​ ನೀಲ್​ ನಿರ್ದೇಶಿಸುತ್ತಿರುವ ‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್​ ನಟಿಸುತ್ತಿದ್ದಾರೆ. ಪೂಜಾ ಹೆಗ್ಡೆ ಜೊತೆ ಅವರು ಅಭಿನಯಿಸಿರುವ ‘ರಾಧೆ ಶ್ಯಾಮ್​’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, 2022ರ ಜ.14ರಂದು ವಿಶ್ವಾದ್ಯಂತ ತೆರೆಕಾಣಲಿದೆ.

ಒಂದು ಕೋಟಿ ರೂ. ದೇಣಿಗೆ ನೀಡಿದ ಪ್ರಭಾಸ್​!

ಪ್ರವಾಹದಿಂದಾಗಿ ಆಂಧ್ರ ಪ್ರದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಅದಕ್ಕಾಗಿ ಟಾಲಿವುಡ್​ ಸ್ಟಾರ್​ ನಟರು ಮರುಕ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಮ್ಮ ಕೈಲಾಸ ಸಹಾಯ ಮಾಡುತ್ತಿದ್ದಾರೆ. ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಚಿರಂಜೀವಿ ಮುಂತಾದ ನಟರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ವಿಶೇಷ ಎಂದರೆ, ಈ ಎಲ್ಲ ಹೀರೋಗಳಿಗಿಂತಲೂ ನಟ ಪ್ರಭಾಸ್​ ಅವರು ಹೆಚ್ಚು ಹಣ ನೀಡಿದ್ದಾರೆ. ಬರೋಬ್ಬರಿ 1 ಕೋಟಿ ರೂ. ಹಣವನ್ನು ಅವರು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ​!

‘ಮೆಗಾ ಸ್ಟಾರ್​’ ಚಿರಂಜೀವಿ, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​, ರಾಮ್​ ಚರಣ್​ ಅವರು ತಲಾ 25 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಅವರೆಲ್ಲರಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಪ್ರಭಾಸ್​ ಅವರು 1 ಕೋಟಿ ರೂ. ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ:

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

‘ರಾಧೆ ಶ್ಯಾಮ್​’ ಚಿತ್ರದ ಕಥೆ ಲೀಕ್​; ಪ್ರಭಾಸ್​-ಪೂಜಾ ಹೆಗ್ಡೆ ಸಿನಿಮಾದ ಈ ಹಾಡಿನಲ್ಲಿ ಅಡಗಿದೆ ಸ್ಟೋರಿ

Published On - 9:55 am, Wed, 8 December 21

Follow Us
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ