AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾರು’ ಧಾರಾವಾಹಿಯ ನಟ ಶರತ್​ ಮೊದಲ ಚಿತ್ರಕ್ಕೆ ‘ಅನಿಮಾ’ ಶೀರ್ಷಿಕೆ; ಇದರ ಅರ್ಥವೇನು?

‘ಅನಿಮಾ’ ಚಿತ್ರದ ಪೋಸ್ಟರ್ ಗಮನ ಸೆಳೆಯುವಂತಿದೆ. ಕಾಡಿನ ಮಧ್ಯೆ ಕಾರೊಂದು ಚಲಿಸುತ್ತಿದೆ. ರಾತ್ರಿ ಆಗಿರುವುದರಿಂದ ಸುತ್ತಲೂ ಕತ್ತಲು. ಸಾಕಷ್ಟು ಸಸ್ಪೆನ್ಸ್​ ಆಗಿ ಪೋಸ್ಟರ್ ಮೂಡಿ ಬಂದಿದೆ. ‘ಅನಿಮಾ’ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.

‘ಪಾರು’ ಧಾರಾವಾಹಿಯ ನಟ ಶರತ್​ ಮೊದಲ ಚಿತ್ರಕ್ಕೆ ‘ಅನಿಮಾ’ ಶೀರ್ಷಿಕೆ; ಇದರ ಅರ್ಥವೇನು?
ಅನಿಮಾ
ರಾಜೇಶ್ ದುಗ್ಗುಮನೆ
|

Updated on: Mar 28, 2024 | 9:59 AM

Share

ಕಿರುತೆರೆಯಲ್ಲಿ ಫೇಮಸ್ ಆದ ಬಳಿಕ ಹಿರಿತೆರೆಗೆ ಬರೋದು ಮೊದಲಿನಿಂದಲೂ ನಡೆದುಕೊಂಡು ಬಂದ ವಾಡಿಕೆ. ಅನೇಕ ಕಿರುತೆರೆ ಕಲಾವಿದರು ಹಿರಿತೆರೆಗೆ ಬಂದು ಗೆಲುವು ಕಂಡಿದ್ದಾರೆ. ಈಗ ‘ಪಾರು’ ಧಾರಾವಾಹಿಯಲ್ಲಿ ಆದಿ ಹೆಸರಿನ ಪಾತ್ರ ಮಾಡಿದ್ದ ಶರತ್ ಪದ್ಮನಾಭ್ ಹೀರೋ ಆಗಿ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ಶರತ್ ಅವರ ಮೊದಲ ಚಿತ್ರಕ್ಕೆ ‘ಅನಿಮಾ’ (Anima Movie) ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೈಟಲ್ ಪೋಸ್ಟರ್ ಗಮನ ಸೆಳೆದಿದೆ. ಈ ಸಿನಿಮಾದ ಶೀರ್ಷಿಕೆಯ ಅರ್ಥವನ್ನೂ ತಂಡ ತಿಳಿಸಿದೆ.

‘ಅನಿಮಾ’ ಚಿತ್ರದ ಪೋಸ್ಟರ್ ಗಮನ ಸೆಳೆಯುವಂತಿದೆ. ಕಾಡಿನ ಮಧ್ಯೆ ಕಾರೊಂದು ಚಲಿಸುತ್ತಿದೆ. ರಾತ್ರಿ ಆಗಿರುವುದರಿಂದ ಸುತ್ತಲೂ ಕತ್ತಲು. ಸಾಕಷ್ಟು ಸಸ್ಪೆನ್ಸ್​ ಆಗಿ ಪೋಸ್ಟರ್ ಮೂಡಿ ಬಂದಿದೆ. ‘ಅನಿಮಾ’ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ. ಶೀರ್ಷಿಕೆ ಅರ್ಥ ತಿಳಿದ ಬಳಿಕ ಫ್ಯಾನ್ಸ್ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

‘ಅನಿಮಾ’ ಚಿತ್ರಕ್ಕೆ ವರ್ಧನ್ ಎಂ.ಎಚ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ನಿರ್ದೇಶಕನಾಗಿ ಅವರಿಗೆ ಇದು ಮೊದಲ ಅನುಭವ. ಈ ಮೊದಲು ಅವರು ‘ಹೊನ್ನು ಬಿತ್ಯಾರು’ ಹೆಸರಿನ ಕಿರುಚಿತ್ರ ಮಾಡಿದ್ದರು. ಇದು ರೈತರ ಬಗ್ಗೆ ಇತ್ತು. ಈಗ ಅವರು ‘ಅನಿಮಾ’ ಸಿನಿಮಾ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಟೈಟಲ್ ಪೋಸ್ಟರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಅನಿಮಾ’ ಚಿತ್ರಕ್ಕೆ ಕೊನೆಯ ಹಂತದ ಶೂಟಿಂಗ್ ನಡೆಯುತ್ತಿದೆ. ಬೆಂಗಳೂರು, ಮಡಿಕೇರಿ, ಸಕಲೇಶಪುರ, ಹುಲಿಯೂರು ದುರ್ಗ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ.

ಇದನ್ನೂ ಓದಿ: ‘ಮ್ಯಾಟ್ನಿ’ ಸಿನಿಮಾ ನಟಿ ರಚಿತಾಗೆ ದರ್ಶನ್​ ಕಡೆಯಿಂದ ಇಂಥ ಬೆಂಬಲ ಸಿಕ್ಕಿದ್ದು ಇದೇ ಮೊದಲು

ಶರತ್ ನಟನೆಯ ಈ ಚಿತ್ರಕ್ಕೆ ಅನುಷಾ ಕೃಷ್ಣ ನಾಯಕಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ಸೂರಿ, ಸುಷ್ಮಿತಾ, ವಾಣಿ ಸೇರಿ ಅನೇಕರು ಪಾತ್ರವರ್ಗದಲ್ಲಿ ಇದ್ದಾರೆ. ಎನ್​.ಕೆ ರಾಜ್ ಛಾಯಾಗ್ರಹಣ, ರೋನಾದ ಬಕ್ಕೇಶ್ ಹಿನ್ನೆಲೆ ಸಂಗೀತ, ವಿರಾಜ್ ವಿಶ್ವ ಸಂಭಾಷಣೆ, ಉಜ್ವಲ್ ಚಂದ್ರ ಸಂಕಲನ ಅನಿಮಾನ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು