AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾರು’ ಧಾರಾವಾಹಿಯ ನಟ ಶರತ್​ ಮೊದಲ ಚಿತ್ರಕ್ಕೆ ‘ಅನಿಮಾ’ ಶೀರ್ಷಿಕೆ; ಇದರ ಅರ್ಥವೇನು?

‘ಅನಿಮಾ’ ಚಿತ್ರದ ಪೋಸ್ಟರ್ ಗಮನ ಸೆಳೆಯುವಂತಿದೆ. ಕಾಡಿನ ಮಧ್ಯೆ ಕಾರೊಂದು ಚಲಿಸುತ್ತಿದೆ. ರಾತ್ರಿ ಆಗಿರುವುದರಿಂದ ಸುತ್ತಲೂ ಕತ್ತಲು. ಸಾಕಷ್ಟು ಸಸ್ಪೆನ್ಸ್​ ಆಗಿ ಪೋಸ್ಟರ್ ಮೂಡಿ ಬಂದಿದೆ. ‘ಅನಿಮಾ’ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.

‘ಪಾರು’ ಧಾರಾವಾಹಿಯ ನಟ ಶರತ್​ ಮೊದಲ ಚಿತ್ರಕ್ಕೆ ‘ಅನಿಮಾ’ ಶೀರ್ಷಿಕೆ; ಇದರ ಅರ್ಥವೇನು?
ಅನಿಮಾ
ರಾಜೇಶ್ ದುಗ್ಗುಮನೆ
|

Updated on: Mar 28, 2024 | 9:59 AM

Share

ಕಿರುತೆರೆಯಲ್ಲಿ ಫೇಮಸ್ ಆದ ಬಳಿಕ ಹಿರಿತೆರೆಗೆ ಬರೋದು ಮೊದಲಿನಿಂದಲೂ ನಡೆದುಕೊಂಡು ಬಂದ ವಾಡಿಕೆ. ಅನೇಕ ಕಿರುತೆರೆ ಕಲಾವಿದರು ಹಿರಿತೆರೆಗೆ ಬಂದು ಗೆಲುವು ಕಂಡಿದ್ದಾರೆ. ಈಗ ‘ಪಾರು’ ಧಾರಾವಾಹಿಯಲ್ಲಿ ಆದಿ ಹೆಸರಿನ ಪಾತ್ರ ಮಾಡಿದ್ದ ಶರತ್ ಪದ್ಮನಾಭ್ ಹೀರೋ ಆಗಿ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ಶರತ್ ಅವರ ಮೊದಲ ಚಿತ್ರಕ್ಕೆ ‘ಅನಿಮಾ’ (Anima Movie) ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೈಟಲ್ ಪೋಸ್ಟರ್ ಗಮನ ಸೆಳೆದಿದೆ. ಈ ಸಿನಿಮಾದ ಶೀರ್ಷಿಕೆಯ ಅರ್ಥವನ್ನೂ ತಂಡ ತಿಳಿಸಿದೆ.

‘ಅನಿಮಾ’ ಚಿತ್ರದ ಪೋಸ್ಟರ್ ಗಮನ ಸೆಳೆಯುವಂತಿದೆ. ಕಾಡಿನ ಮಧ್ಯೆ ಕಾರೊಂದು ಚಲಿಸುತ್ತಿದೆ. ರಾತ್ರಿ ಆಗಿರುವುದರಿಂದ ಸುತ್ತಲೂ ಕತ್ತಲು. ಸಾಕಷ್ಟು ಸಸ್ಪೆನ್ಸ್​ ಆಗಿ ಪೋಸ್ಟರ್ ಮೂಡಿ ಬಂದಿದೆ. ‘ಅನಿಮಾ’ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ. ಶೀರ್ಷಿಕೆ ಅರ್ಥ ತಿಳಿದ ಬಳಿಕ ಫ್ಯಾನ್ಸ್ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

‘ಅನಿಮಾ’ ಚಿತ್ರಕ್ಕೆ ವರ್ಧನ್ ಎಂ.ಎಚ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ನಿರ್ದೇಶಕನಾಗಿ ಅವರಿಗೆ ಇದು ಮೊದಲ ಅನುಭವ. ಈ ಮೊದಲು ಅವರು ‘ಹೊನ್ನು ಬಿತ್ಯಾರು’ ಹೆಸರಿನ ಕಿರುಚಿತ್ರ ಮಾಡಿದ್ದರು. ಇದು ರೈತರ ಬಗ್ಗೆ ಇತ್ತು. ಈಗ ಅವರು ‘ಅನಿಮಾ’ ಸಿನಿಮಾ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಟೈಟಲ್ ಪೋಸ್ಟರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಅನಿಮಾ’ ಚಿತ್ರಕ್ಕೆ ಕೊನೆಯ ಹಂತದ ಶೂಟಿಂಗ್ ನಡೆಯುತ್ತಿದೆ. ಬೆಂಗಳೂರು, ಮಡಿಕೇರಿ, ಸಕಲೇಶಪುರ, ಹುಲಿಯೂರು ದುರ್ಗ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ.

ಇದನ್ನೂ ಓದಿ: ‘ಮ್ಯಾಟ್ನಿ’ ಸಿನಿಮಾ ನಟಿ ರಚಿತಾಗೆ ದರ್ಶನ್​ ಕಡೆಯಿಂದ ಇಂಥ ಬೆಂಬಲ ಸಿಕ್ಕಿದ್ದು ಇದೇ ಮೊದಲು

ಶರತ್ ನಟನೆಯ ಈ ಚಿತ್ರಕ್ಕೆ ಅನುಷಾ ಕೃಷ್ಣ ನಾಯಕಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ಸೂರಿ, ಸುಷ್ಮಿತಾ, ವಾಣಿ ಸೇರಿ ಅನೇಕರು ಪಾತ್ರವರ್ಗದಲ್ಲಿ ಇದ್ದಾರೆ. ಎನ್​.ಕೆ ರಾಜ್ ಛಾಯಾಗ್ರಹಣ, ರೋನಾದ ಬಕ್ಕೇಶ್ ಹಿನ್ನೆಲೆ ಸಂಗೀತ, ವಿರಾಜ್ ವಿಶ್ವ ಸಂಭಾಷಣೆ, ಉಜ್ವಲ್ ಚಂದ್ರ ಸಂಕಲನ ಅನಿಮಾನ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ