AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಸಿನಿಮಾ ‘ಮಿಲನ’ ಸುಂದರಿ ಪಾರ್ವತಿ ಮೆನನ್ ಈಗೇನು ಮಾಡುತ್ತಿದ್ದಾರೆ ಗೊತ್ತಾ?

ಪಾರ್ವತಿ ಮೆನನ್ ಅವರಿಗೆ ಇಂದು ಜನ್ಮದಿನ.‘ಮಿಲನ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಅವರು, "ಮಳೆ ಬರಲಿ ಮಂಜು ಇರಲಿ" ಮತ್ತು "ಪೃಥ್ವಿ" ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರಗಳಿಂದ ದೂರ ಉಳಿದಿರುವ ಅವರು, ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಪುನೀತ್​ ರಾಜ್​ಕುಮಾರ್​ ಸಿನಿಮಾ ‘ಮಿಲನ’ ಸುಂದರಿ ಪಾರ್ವತಿ ಮೆನನ್ ಈಗೇನು ಮಾಡುತ್ತಿದ್ದಾರೆ ಗೊತ್ತಾ?
ಪಾರ್ವತಿ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Apr 07, 2025 | 8:41 AM

Share

ಪಾರ್ವತಿ ಮೆನನ್ (Parvathy Menen) ಅವರಿಗೆ ಇಂದು (ಆಗಸ್ಟ್ 7) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಾ ಇದೆ. ಅವರು ಮೂಲತಃ ಕೇರಳದ ಕೋಳಿಕ್ಕೋಡ್​ನವರು. ಅವರು ಜನಿಸಿದ್ದು 1988ರಲ್ಲಿ. ಅಂದರೆ ಈಗ ಅವರಿಗೆ 37 ವರ್ಷ. ಪಾರ್ವತಿ ಮೆನನ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಈಗ ಕನ್ನಡದಲ್ಲಿ ಅವರು ನಟಿಸುತ್ತಾ ಇಲ್ಲ. ಅವರು ಏನು ಮಾಡುತ್ತಿದ್ದಾರೆ? ಹೇಗಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ವಿವರ.

ಪಾರ್ವತಿ ಮೆನನ್ ಅವರು 2006ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಕೆಲವು ಮಲಯಾಳಂ ಸಿನಿಮಾ ಮಾಡಿದರು. 2007ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ಮಿಲನ’ ಸಿನಿಮಾ ಅವರ ಬದುಕನ್ನೇ ಬದಾಯಿಸಿತು ಎಂದೇ ಹೇಳಬಹುದು. ಈ ಸಿನಿಮಾ ಹಿಟ್ ಆಯಿತು. ಇದರಿಂದ ಪಾರ್ವತಿ ಅವರಿಗೆ ಹೊಸ ಹೊಸ ಆಫರ್​ಗಳು ಬಂದವು.

ಪಾರ್ವತಿ ಮೆನನ್ ಆ ಬಳಿಕ ಕನ್ನಡಿಗರಿಗೆ ಸಾಕಷ್ಟು ಇಷ್ಟ ಆದರು. ‘ಮಳೆ ಬರಲಿ ಮಂಜು ಇರಲಿ’ ಹೆಸರಿನ ಸಿನಿಮಾ ಮಾಡಿದರು. ಅವರು ಹಾಗೂ ಪುನೀತ್ ನಟಿಸಿದ ಮತ್ತೊಂದು ಸಿನಿಮಾ ‘ಪೃಥ್ವಿ’ ಕೂಡ ಯಶಸ್ಸು ಕಂಡಿತು. ಗಣಿಗಾರಿಕೆಯಲ್ಲಿ ನಡೆಯವ ಅಕ್ರಮಗಳ ಬಗ್ಗೆ ಸಿನಿಮಾದಲ್ಲಿ ಹೇಳಲಾಯಿತು. 2013ರ ‘ಅಂದರ್ ಬಾಹರ್’ ಅವರು ನಟಿಸಿದ ಕೊನೆಯ ಸಿನಿಮಾ. ಆ ಬಳಿಕ ಪಾರ್ವತಿ ಅವರು ಮಲಯಾಳಂನಲ್ಲೇ ಬ್ಯುಸಿ ಆದರು. ಕಳೆದ 12 ವರ್ಷಗಳಿಂದ ಅವರು ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ.

ಇದನ್ನೂ ಓದಿ
Image
ರಿಯಾಲಿಟಿ ಶೋಗಳಲ್ಲಿ ಡಬಲ್ ಮೀನಿಂಗ್ ಡೈಲಾಗ್; ರವಿಚಂದ್ರನ್ ಬೇಸರ
Image
ಗಲ್ರಾನಿಗೆ ವಂಚನೆ ಮಾಡಿದವನಿಗೆ 61 ಲಕ್ಷ ದಂಡ, 6 ತಿಂಗಳು ಜೈಲು ಶಿಕ್ಷೆ
Image
ಫೋಟೋದಿಂದ ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು
Image
ಶ್ರೀಲೀಲಾ ಶಾಕಿಂಗ್ ವಿಡಿಯೋ; ನಟಿಯನ್ನು ಬಲವಂತವಾಗಿ ಎಳೆದಾಡಿದ ಜನ

ಇದನ್ನೂ ಓದಿ: ‘ನಮ್ಮ ಮಧ್ಯೆ ಎಲ್ಲವೂ ಸರಿ ಇದೆ’; ವದಂತಿಗಳಿಗೆ ಪಾರ್ವತಿ ಮೆನನ್ ಸ್ಪಷ್ಟನೆ

ಪಾರ್ವತಿ ಮೆನನ್ ಅವರು 2014ರ ‘ಬೆಂಗಳೂರು ಡೇಸ್’ ಚಿತ್ರದಲ್ಲಿ ಆರ್​ಜೆ ಸಾರಾ ಆಗಿ ನಟಿಸಿದರು. 2015ರ ‘ಚಾರ್ಲಿ’ ಚಿತ್ರ ಕೂಡ ಸೂಪರ್ ಹಿಟ್ ಆಯಿತು. 2014ರಲ್ಲಿ ರಿಲೀಸ್ ಆದ ‘ಹರ್’ ಅವರ ನಟನೆಯ ಕೊನೆಯ ಸಿನಿಮಾ. ಇದಾದ ಬಳಿಕ ಅವರ ನಟನೆಯ ಯಾವುದೇ ಚಿತ್ರವೂ ತೆರೆಗೆ ಬಂದಿಲ್ಲ. ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಮದುವೆ ಬಗ್ಗೆಯೂ ಅವರು ಅಷ್ಟು ಆಸಕ್ತಿ ಹೊಂದಿದಂತೆ ಕಾಣುತ್ತಾ ಇಲ್ಲ.

ಮಿಲನಾ ಸಿನಿಮಾ ಬಗ್ಗೆ

ಮಿಲನಾ ಚಿತ್ರಕ್ಕೆ ಪ್ರಕಾಶ್ ನಿರ್ದೇಶನ ಮಾಡಿದ್ದರು. ಪುನೀತ್ ರಾಜ್​ಕುಮಾರ್, ಪಾರ್ವತಿ ಮೆನನ್ ಮೊದಲಾದವರು ನಟಿಸಿದ್ದರು. 2007ರ ಸೆಪ್ಟೆಂಬರ್ 14ರಂದು ಚಿತ್ರ ರಿಲೀಸ್ ಆಯಿತು. ನಿರ್ದೇಶಕ ಪ್ರಕಾಶ್ ಅವರಿಗೆ ಈ ಸಿನಿಮಾ ಸಾಕಷ್ಟು ಜನಪ್ರಿಯತೆ ತಂದು ಕೊಟ್ಟಿತು. ಈಗ ಅವರು ‘ಡೆವಿಲ್’ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ದರ್ಶನ್ ಹೀರೋ. ದರ್ಶನ್ ಬಂಧನ ಕಾರಣಕ್ಕೆ ಈ ಸಿನಿಮಾ ವಿಳಂಬ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:50 am, Mon, 7 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ