AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಸಿನಿಮಾ ‘ಮಿಲನ’ ಸುಂದರಿ ಪಾರ್ವತಿ ಮೆನನ್ ಈಗೇನು ಮಾಡುತ್ತಿದ್ದಾರೆ ಗೊತ್ತಾ?

ಪಾರ್ವತಿ ಮೆನನ್ ಅವರಿಗೆ ಇಂದು ಜನ್ಮದಿನ.‘ಮಿಲನ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಅವರು, "ಮಳೆ ಬರಲಿ ಮಂಜು ಇರಲಿ" ಮತ್ತು "ಪೃಥ್ವಿ" ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರಗಳಿಂದ ದೂರ ಉಳಿದಿರುವ ಅವರು, ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಪುನೀತ್​ ರಾಜ್​ಕುಮಾರ್​ ಸಿನಿಮಾ ‘ಮಿಲನ’ ಸುಂದರಿ ಪಾರ್ವತಿ ಮೆನನ್ ಈಗೇನು ಮಾಡುತ್ತಿದ್ದಾರೆ ಗೊತ್ತಾ?
ಪಾರ್ವತಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Apr 07, 2025 | 8:41 AM

Share

ಪಾರ್ವತಿ ಮೆನನ್ (Parvathy Menen) ಅವರಿಗೆ ಇಂದು (ಆಗಸ್ಟ್ 7) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಾ ಇದೆ. ಅವರು ಮೂಲತಃ ಕೇರಳದ ಕೋಳಿಕ್ಕೋಡ್​ನವರು. ಅವರು ಜನಿಸಿದ್ದು 1988ರಲ್ಲಿ. ಅಂದರೆ ಈಗ ಅವರಿಗೆ 37 ವರ್ಷ. ಪಾರ್ವತಿ ಮೆನನ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಈಗ ಕನ್ನಡದಲ್ಲಿ ಅವರು ನಟಿಸುತ್ತಾ ಇಲ್ಲ. ಅವರು ಏನು ಮಾಡುತ್ತಿದ್ದಾರೆ? ಹೇಗಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ವಿವರ.

ಪಾರ್ವತಿ ಮೆನನ್ ಅವರು 2006ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಕೆಲವು ಮಲಯಾಳಂ ಸಿನಿಮಾ ಮಾಡಿದರು. 2007ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ಮಿಲನ’ ಸಿನಿಮಾ ಅವರ ಬದುಕನ್ನೇ ಬದಾಯಿಸಿತು ಎಂದೇ ಹೇಳಬಹುದು. ಈ ಸಿನಿಮಾ ಹಿಟ್ ಆಯಿತು. ಇದರಿಂದ ಪಾರ್ವತಿ ಅವರಿಗೆ ಹೊಸ ಹೊಸ ಆಫರ್​ಗಳು ಬಂದವು.

ಪಾರ್ವತಿ ಮೆನನ್ ಆ ಬಳಿಕ ಕನ್ನಡಿಗರಿಗೆ ಸಾಕಷ್ಟು ಇಷ್ಟ ಆದರು. ‘ಮಳೆ ಬರಲಿ ಮಂಜು ಇರಲಿ’ ಹೆಸರಿನ ಸಿನಿಮಾ ಮಾಡಿದರು. ಅವರು ಹಾಗೂ ಪುನೀತ್ ನಟಿಸಿದ ಮತ್ತೊಂದು ಸಿನಿಮಾ ‘ಪೃಥ್ವಿ’ ಕೂಡ ಯಶಸ್ಸು ಕಂಡಿತು. ಗಣಿಗಾರಿಕೆಯಲ್ಲಿ ನಡೆಯವ ಅಕ್ರಮಗಳ ಬಗ್ಗೆ ಸಿನಿಮಾದಲ್ಲಿ ಹೇಳಲಾಯಿತು. 2013ರ ‘ಅಂದರ್ ಬಾಹರ್’ ಅವರು ನಟಿಸಿದ ಕೊನೆಯ ಸಿನಿಮಾ. ಆ ಬಳಿಕ ಪಾರ್ವತಿ ಅವರು ಮಲಯಾಳಂನಲ್ಲೇ ಬ್ಯುಸಿ ಆದರು. ಕಳೆದ 12 ವರ್ಷಗಳಿಂದ ಅವರು ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ.

ಇದನ್ನೂ ಓದಿ
Image
ರಿಯಾಲಿಟಿ ಶೋಗಳಲ್ಲಿ ಡಬಲ್ ಮೀನಿಂಗ್ ಡೈಲಾಗ್; ರವಿಚಂದ್ರನ್ ಬೇಸರ
Image
ಗಲ್ರಾನಿಗೆ ವಂಚನೆ ಮಾಡಿದವನಿಗೆ 61 ಲಕ್ಷ ದಂಡ, 6 ತಿಂಗಳು ಜೈಲು ಶಿಕ್ಷೆ
Image
ಫೋಟೋದಿಂದ ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು
Image
ಶ್ರೀಲೀಲಾ ಶಾಕಿಂಗ್ ವಿಡಿಯೋ; ನಟಿಯನ್ನು ಬಲವಂತವಾಗಿ ಎಳೆದಾಡಿದ ಜನ

ಇದನ್ನೂ ಓದಿ: ‘ನಮ್ಮ ಮಧ್ಯೆ ಎಲ್ಲವೂ ಸರಿ ಇದೆ’; ವದಂತಿಗಳಿಗೆ ಪಾರ್ವತಿ ಮೆನನ್ ಸ್ಪಷ್ಟನೆ

ಪಾರ್ವತಿ ಮೆನನ್ ಅವರು 2014ರ ‘ಬೆಂಗಳೂರು ಡೇಸ್’ ಚಿತ್ರದಲ್ಲಿ ಆರ್​ಜೆ ಸಾರಾ ಆಗಿ ನಟಿಸಿದರು. 2015ರ ‘ಚಾರ್ಲಿ’ ಚಿತ್ರ ಕೂಡ ಸೂಪರ್ ಹಿಟ್ ಆಯಿತು. 2014ರಲ್ಲಿ ರಿಲೀಸ್ ಆದ ‘ಹರ್’ ಅವರ ನಟನೆಯ ಕೊನೆಯ ಸಿನಿಮಾ. ಇದಾದ ಬಳಿಕ ಅವರ ನಟನೆಯ ಯಾವುದೇ ಚಿತ್ರವೂ ತೆರೆಗೆ ಬಂದಿಲ್ಲ. ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಮದುವೆ ಬಗ್ಗೆಯೂ ಅವರು ಅಷ್ಟು ಆಸಕ್ತಿ ಹೊಂದಿದಂತೆ ಕಾಣುತ್ತಾ ಇಲ್ಲ.

ಮಿಲನಾ ಸಿನಿಮಾ ಬಗ್ಗೆ

ಮಿಲನಾ ಚಿತ್ರಕ್ಕೆ ಪ್ರಕಾಶ್ ನಿರ್ದೇಶನ ಮಾಡಿದ್ದರು. ಪುನೀತ್ ರಾಜ್​ಕುಮಾರ್, ಪಾರ್ವತಿ ಮೆನನ್ ಮೊದಲಾದವರು ನಟಿಸಿದ್ದರು. 2007ರ ಸೆಪ್ಟೆಂಬರ್ 14ರಂದು ಚಿತ್ರ ರಿಲೀಸ್ ಆಯಿತು. ನಿರ್ದೇಶಕ ಪ್ರಕಾಶ್ ಅವರಿಗೆ ಈ ಸಿನಿಮಾ ಸಾಕಷ್ಟು ಜನಪ್ರಿಯತೆ ತಂದು ಕೊಟ್ಟಿತು. ಈಗ ಅವರು ‘ಡೆವಿಲ್’ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ದರ್ಶನ್ ಹೀರೋ. ದರ್ಶನ್ ಬಂಧನ ಕಾರಣಕ್ಕೆ ಈ ಸಿನಿಮಾ ವಿಳಂಬ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:50 am, Mon, 7 April 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ