AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್’ ಗೆದ್ದರೂ ಸೀಕ್ವೆಲ್​ನಲ್ಲಿ ನಿರ್ದೇಶಕನಿಗೆ ಗೇಟ್ ಪಾಸ್ ಕೊಟ್ಟ ನಿರ್ಮಾಪಕ

‘ವಾರ್’ ಹಾಗೂ ‘ಪಠಾಣ್’ ಮೂಲಕ ಸಿದ್ದಾರ್ಥ್ ಆನಂದ್ ದೊಡ್ಡ ಗೆಲುವು ಕಂಡರು. ಇತ್ತೀಚೆಗೆ ಮೂಡಿ ಬಂದ ಅವರ ನಿರ್ದೇಶನದ ‘ಫೈಟರ್’ ಚಿತ್ರ ಫ್ಯಾನ್ಸ್​ಗೆ ಅಷ್ಟು ಇಷ್ಟ ಆಗಿಲ್ಲ. ಈ ಸಿನಿಮಾ ದೊಡ್ಡ ಪಾತ್ರವರ್ಗ ಇದ್ದ ಹೊರತಾಗಿಯೂ ಸಾಧಾರಣ ಬಿಸ್ನೆಸ್ ಮಾಡಿದೆ. ಹೀಗಾಗಿ ಆದಿತ್ಯ ಚೋಪ್ರಾ ಅವರು ಆತಂಕಕ್ಕೆ ಒಳಾಗಿದ್ದಾರೆ.

‘ಪಠಾಣ್’ ಗೆದ್ದರೂ ಸೀಕ್ವೆಲ್​ನಲ್ಲಿ ನಿರ್ದೇಶಕನಿಗೆ ಗೇಟ್ ಪಾಸ್ ಕೊಟ್ಟ ನಿರ್ಮಾಪಕ
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: Mar 30, 2024 | 2:31 PM

Share

‘ಪಠಾಣ್’ ಸಿನಿಮಾ (Pathaan Movie) ಸೂಪರ್ ಹಿಟ್ ಆಗಿದೆ. ಶಾರುಖ್ ಖಾನ್ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ. ಈ ಚಿತ್ರ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಸಿದ್ದಾರ್ಥ್ ಆನಂದ್. ಅವರು ‘ಪಠಾಣ್’ ಚಿತ್ರದ ಸೀಕ್ವೆಲ್​ನ ಶೂಟ್ ಮಾಡುವುದಿಲ್ಲ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಬೇಸರಗೊಂಡಿದ್ದಾರೆ. ನಿರ್ಮಾಪಕ ಆದಿತ್ಯ ಚೋಪ್ರಾ ಅವರು ಈ ರೀತಿ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಒಂದು ಕಾರಣ ಇದೆ.

‘ವಾರ್’ ಹಾಗೂ ‘ಪಠಾಣ್’ ಮೂಲಕ ಸಿದ್ದಾರ್ಥ್ ಆನಂದ್ ದೊಡ್ಡ ಗೆಲುವು ಕಂಡರು. ಇತ್ತೀಚೆಗೆ ಮೂಡಿ ಬಂದ ಅವರ ನಿರ್ದೇಶನದ ‘ಫೈಟರ್’ ಚಿತ್ರ ಫ್ಯಾನ್ಸ್​ಗೆ ಅಷ್ಟು ಇಷ್ಟ ಆಗಿಲ್ಲ. ಈ ಸಿನಿಮಾ ದೊಡ್ಡ ಪಾತ್ರವರ್ಗ ಇದ್ದ ಹೊರತಾಗಿಯೂ ಸಾಧಾರಣ ಬಿಸ್ನೆಸ್ ಮಾಡಿದೆ. ಹೀಗಾಗಿ ಆದಿತ್ಯ ಚೋಪ್ರಾ ಅವರು ಆತಂಕಕ್ಕೆ ಒಳಾಗಿದ್ದಾರೆ. ಸಿದ್ದಾರ್ಥ್ ಆನಂದ್ ಬದಲು ಹೊಸ ನಿರ್ದೇಶಕರ ಹುಡುಕಾಟದಲ್ಲಿ ಅವರಿದ್ದಾರೆ.

ಬಾಲಿವುಡ್​ನಲ್ಲಿ ಆ್ಯಕ್ಷನ್ ಸಿನಿಮಾಗಳನ್ನು ನಿರ್ದೇಶನ ಮಾಡುವ ಹಲವು ನಿರ್ದೇಶಕರು ಇದ್ದಾರೆ. ಆ ಸಾಲಿನಲ್ಲಿ ಇರುವ ನಿರ್ದೇಶಕರ ಜೊತೆ ಆದಿತ್ಯ ಚೋಪ್ರಾ ಮಾತುಕತೆಯಲ್ಲಿ ತೊಡಗಿಕೊಂಡಿದ್ದಾರೆ. ಮುಂದಿನದ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಆಗೋ ಸಾಧ್ಯತೆ ಇದೆ. ಇದರಿಂದ ಹೊಸ ರೀತಿಯ ಸಿನಿಮಾಗಳು ಮೂಡಿಬರಲು ಸಹಕಾರಿ ಆಗಲಿದೆ.

ಆದಿತ್ಯ ಚೋಪ್ರಾ ಅವರು ಈ ಮೊದಲು ಕೂಡ ಹಾಗೆಯೇ ಮಾಡಿದ್ದಾರೆ. ಒಂದು ಸಿನಿಮಾ ಹಿಟ್ ಆದರೆ ಅದರ ಸೀಕ್ವೆಲ್​ಗೆ ಅವರು ಬೇರೆಯದೇ ನಿರ್ದೇಶಕರ ಆಯ್ಕೆ ಮಾಡುತ್ತಾರೆ. ‘ಟೈಗರ್’, ‘ವಾರ್’ ಸಿನಿಮಾಗಳ ಸೀಕ್ವೆಲ್ ಇದಕ್ಕೆ ಉತ್ತಮ ಉದಾಹರಣೆ. ಸದ್ಯ ‘ಪಠಾಣ್ 2’ಗೆ ಯಾವುದೇ ನಿರ್ದೇಶಕರು ಫೈನಲ್ ಆಗಿಲ್ಲ.

ಇದನ್ನೂ ಓದಿ: ‘ಪಠಾಣ್’ ಬಳಿಕ ‘ಫೈಟರ್’ಗೂ ಸಿಬಿಎಫ್​ಸಿ ಅವಕೃಪೆ, ಎಲ್ಲದಕ್ಕೂ ಕಾರಣ ದೀಪಿಕಾ ಬಿಕಿನಿ

2012ರಲ್ಲಿ ‘ಏಕ್ ಥಾ ಟೈಗರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಯಶ್ ರಾಜ್ ಫಿಲ್ಮ್ಸ್​ ಯೂನಿವರ್ಸ್​ ಆರಂಭ ಆಯಿತು. ‘ಟೈಗರ್ ಜಿಂದಾ ಹೈ’, ‘ಟೈಗರ್ 3’ ಕೂಡ ರಿಲೀಸ್ ಆಗಿದೆ. ಈ ಯೂನಿವರ್ಸ್​ನ ಅಡಿಯಲ್ಲಿ ‘ಪಠಾಣ್’, ‘ವಾರ್’ ಕೂಡ ಮೂಡಿ ಬಂದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ