Paul Ritter: ಹ್ಯಾರಿ ಪಾಟರ್​ ಖ್ಯಾತಿಯ ನಟ ಪೌಲ್​ ರಿಟರ್ ಬ್ರೇನ್​ ಟ್ಯೂಮರ್​ನಿಂದ ನಿಧನ!

1992ರಿಂದ ಸಿನಿಮಾದಲ್ಲಿ ನಟನೆ ಆರಂಭಿಸಿದ ಪೌಲ್​ ರಿಟರ್​ ಅವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಹಾಲಿವುಡ್​ನ ಜನಪ್ರಿಯ ‘ಹ್ಯಾರಿ ಪಾಟರ್​’ ಸಿನಿಮಾದಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದರು.

Paul Ritter: ಹ್ಯಾರಿ ಪಾಟರ್​ ಖ್ಯಾತಿಯ ನಟ ಪೌಲ್​ ರಿಟರ್ ಬ್ರೇನ್​ ಟ್ಯೂಮರ್​ನಿಂದ ನಿಧನ!
ಪೌಲ್​ ರಿಟರ್​
Follow us
|

Updated on: Apr 07, 2021 | 12:21 PM

ಹಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಕಲಾವಿದ ಪೌಲ್​ ರಿಟರ್​ ಅವರು ಸೋಮವಾರ (ಏ.5) ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು. ಬಹಳ ಕಾಲದಿಂದ ಅವರು ಬ್ರೇನ್​ ಟ್ಯೂಮರ್​ನಿಂದ ಬಳಲುತ್ತಿದ್ದರು. ಕಡೆಗೂ ಚಿಕಿತ್ಸೆ ಫಲಕಾರಿಯಾಗದೇ ಏ.5ರ ರಾತ್ರಿ ನಿಧನರಾದರು ಎಂದು ಪೌಲ್​ ರಿಟರ್​ ಪರ ವಕ್ತಾರರು ತಿಳಿಸಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

1992ರಿಂದ ಸಿನಿಮಾದಲ್ಲಿ ನಟನೆ ಆರಂಭಿಸಿದ ಪೌಲ್​ ರಿಟರ್​ ಅವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಹಾಲಿವುಡ್​ನ ಜನಪ್ರಿಯ ‘ಹ್ಯಾರಿ ಪಾಟರ್​’ ಸಿನಿಮಾದಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದರು. ಬ್ರಿಟಿಷ್​ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಫೇಮಸ್​ ಆಗಿದ್ದ ಪೌಲ್​ ರಿಟರ್​ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

ಫ್ರೈಡೇ ನೈಟ್​ ಡಿನ್ನರ್​, ಚೆರ್ನೋಬಿಲ್​ ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು. ಹ್ಯಾರಿ ಪಾಟರ್ ಮಾತ್ರವಲ್ಲದೆ, ಜೇಮ್ಸ್​ ಬಾಂಡ್​ ಸರಣಿಯ ‘ಕ್ವಾಂಟಮ್​ ಆಫ್​ ಸೊನೇಸ್​’ ಸಿನಿಮಾ ಮೂಲಕವೂ ಪೌಲ್​ ರಿಟರ್​ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ಸಿನಿಮಾ, ಧಾರಾವಾಹಿ ಮತ್ತು ರಂಗಭೂಮಿಯಲ್ಲಿ ಹಲವು ಬಗೆಯ ಪಾತ್ರಗಳನ್ನು ನಿಭಾಯಿಸಿದ ಅವರ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

‘ಪೌಲ್​ ರಿಟಿರ್​ ನಿಧನರಾದರು ಎಂಬುದನ್ನು ತೀವ್ರ ವಿಷಾದದೊಂದಿಗೆ ತಿಳಿಸುತ್ತಿದ್ದೇವೆ. ಅವರು ಕೊನೆಯುಸಿರೆಳೆದ ವೇಳೆ ಮನೆಯಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳು ಜೊತೆಯಲ್ಲಿ ಇದ್ದರು. 54 ವರ್ಷದ ಪೌಲ್​ ರಿಟರ್​ ಅವರು ಬ್ರೇನ್​ ಟ್ಯೂಮರ್​ನಿಂದ ಬಳಲುತ್ತಿದ್ದರು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ

(Paul Ritter Death: Harry Potter actor Paul Ritter dies due to Brain Tumour at 54)

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ