AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paul Ritter: ಹ್ಯಾರಿ ಪಾಟರ್​ ಖ್ಯಾತಿಯ ನಟ ಪೌಲ್​ ರಿಟರ್ ಬ್ರೇನ್​ ಟ್ಯೂಮರ್​ನಿಂದ ನಿಧನ!

1992ರಿಂದ ಸಿನಿಮಾದಲ್ಲಿ ನಟನೆ ಆರಂಭಿಸಿದ ಪೌಲ್​ ರಿಟರ್​ ಅವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಹಾಲಿವುಡ್​ನ ಜನಪ್ರಿಯ ‘ಹ್ಯಾರಿ ಪಾಟರ್​’ ಸಿನಿಮಾದಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದರು.

Paul Ritter: ಹ್ಯಾರಿ ಪಾಟರ್​ ಖ್ಯಾತಿಯ ನಟ ಪೌಲ್​ ರಿಟರ್ ಬ್ರೇನ್​ ಟ್ಯೂಮರ್​ನಿಂದ ನಿಧನ!
ಪೌಲ್​ ರಿಟರ್​
ಮದನ್​ ಕುಮಾರ್​
|

Updated on: Apr 07, 2021 | 12:21 PM

Share

ಹಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಕಲಾವಿದ ಪೌಲ್​ ರಿಟರ್​ ಅವರು ಸೋಮವಾರ (ಏ.5) ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು. ಬಹಳ ಕಾಲದಿಂದ ಅವರು ಬ್ರೇನ್​ ಟ್ಯೂಮರ್​ನಿಂದ ಬಳಲುತ್ತಿದ್ದರು. ಕಡೆಗೂ ಚಿಕಿತ್ಸೆ ಫಲಕಾರಿಯಾಗದೇ ಏ.5ರ ರಾತ್ರಿ ನಿಧನರಾದರು ಎಂದು ಪೌಲ್​ ರಿಟರ್​ ಪರ ವಕ್ತಾರರು ತಿಳಿಸಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

1992ರಿಂದ ಸಿನಿಮಾದಲ್ಲಿ ನಟನೆ ಆರಂಭಿಸಿದ ಪೌಲ್​ ರಿಟರ್​ ಅವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಹಾಲಿವುಡ್​ನ ಜನಪ್ರಿಯ ‘ಹ್ಯಾರಿ ಪಾಟರ್​’ ಸಿನಿಮಾದಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದರು. ಬ್ರಿಟಿಷ್​ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಫೇಮಸ್​ ಆಗಿದ್ದ ಪೌಲ್​ ರಿಟರ್​ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

ಫ್ರೈಡೇ ನೈಟ್​ ಡಿನ್ನರ್​, ಚೆರ್ನೋಬಿಲ್​ ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು. ಹ್ಯಾರಿ ಪಾಟರ್ ಮಾತ್ರವಲ್ಲದೆ, ಜೇಮ್ಸ್​ ಬಾಂಡ್​ ಸರಣಿಯ ‘ಕ್ವಾಂಟಮ್​ ಆಫ್​ ಸೊನೇಸ್​’ ಸಿನಿಮಾ ಮೂಲಕವೂ ಪೌಲ್​ ರಿಟರ್​ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ಸಿನಿಮಾ, ಧಾರಾವಾಹಿ ಮತ್ತು ರಂಗಭೂಮಿಯಲ್ಲಿ ಹಲವು ಬಗೆಯ ಪಾತ್ರಗಳನ್ನು ನಿಭಾಯಿಸಿದ ಅವರ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

‘ಪೌಲ್​ ರಿಟಿರ್​ ನಿಧನರಾದರು ಎಂಬುದನ್ನು ತೀವ್ರ ವಿಷಾದದೊಂದಿಗೆ ತಿಳಿಸುತ್ತಿದ್ದೇವೆ. ಅವರು ಕೊನೆಯುಸಿರೆಳೆದ ವೇಳೆ ಮನೆಯಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳು ಜೊತೆಯಲ್ಲಿ ಇದ್ದರು. 54 ವರ್ಷದ ಪೌಲ್​ ರಿಟರ್​ ಅವರು ಬ್ರೇನ್​ ಟ್ಯೂಮರ್​ನಿಂದ ಬಳಲುತ್ತಿದ್ದರು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ

(Paul Ritter Death: Harry Potter actor Paul Ritter dies due to Brain Tumour at 54)

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?