AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paul Ritter: ಹ್ಯಾರಿ ಪಾಟರ್​ ಖ್ಯಾತಿಯ ನಟ ಪೌಲ್​ ರಿಟರ್ ಬ್ರೇನ್​ ಟ್ಯೂಮರ್​ನಿಂದ ನಿಧನ!

1992ರಿಂದ ಸಿನಿಮಾದಲ್ಲಿ ನಟನೆ ಆರಂಭಿಸಿದ ಪೌಲ್​ ರಿಟರ್​ ಅವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಹಾಲಿವುಡ್​ನ ಜನಪ್ರಿಯ ‘ಹ್ಯಾರಿ ಪಾಟರ್​’ ಸಿನಿಮಾದಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದರು.

Paul Ritter: ಹ್ಯಾರಿ ಪಾಟರ್​ ಖ್ಯಾತಿಯ ನಟ ಪೌಲ್​ ರಿಟರ್ ಬ್ರೇನ್​ ಟ್ಯೂಮರ್​ನಿಂದ ನಿಧನ!
ಪೌಲ್​ ರಿಟರ್​
ಮದನ್​ ಕುಮಾರ್​
|

Updated on: Apr 07, 2021 | 12:21 PM

Share

ಹಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಕಲಾವಿದ ಪೌಲ್​ ರಿಟರ್​ ಅವರು ಸೋಮವಾರ (ಏ.5) ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು. ಬಹಳ ಕಾಲದಿಂದ ಅವರು ಬ್ರೇನ್​ ಟ್ಯೂಮರ್​ನಿಂದ ಬಳಲುತ್ತಿದ್ದರು. ಕಡೆಗೂ ಚಿಕಿತ್ಸೆ ಫಲಕಾರಿಯಾಗದೇ ಏ.5ರ ರಾತ್ರಿ ನಿಧನರಾದರು ಎಂದು ಪೌಲ್​ ರಿಟರ್​ ಪರ ವಕ್ತಾರರು ತಿಳಿಸಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

1992ರಿಂದ ಸಿನಿಮಾದಲ್ಲಿ ನಟನೆ ಆರಂಭಿಸಿದ ಪೌಲ್​ ರಿಟರ್​ ಅವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಹಾಲಿವುಡ್​ನ ಜನಪ್ರಿಯ ‘ಹ್ಯಾರಿ ಪಾಟರ್​’ ಸಿನಿಮಾದಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದರು. ಬ್ರಿಟಿಷ್​ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಫೇಮಸ್​ ಆಗಿದ್ದ ಪೌಲ್​ ರಿಟರ್​ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

ಫ್ರೈಡೇ ನೈಟ್​ ಡಿನ್ನರ್​, ಚೆರ್ನೋಬಿಲ್​ ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು. ಹ್ಯಾರಿ ಪಾಟರ್ ಮಾತ್ರವಲ್ಲದೆ, ಜೇಮ್ಸ್​ ಬಾಂಡ್​ ಸರಣಿಯ ‘ಕ್ವಾಂಟಮ್​ ಆಫ್​ ಸೊನೇಸ್​’ ಸಿನಿಮಾ ಮೂಲಕವೂ ಪೌಲ್​ ರಿಟರ್​ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ಸಿನಿಮಾ, ಧಾರಾವಾಹಿ ಮತ್ತು ರಂಗಭೂಮಿಯಲ್ಲಿ ಹಲವು ಬಗೆಯ ಪಾತ್ರಗಳನ್ನು ನಿಭಾಯಿಸಿದ ಅವರ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

‘ಪೌಲ್​ ರಿಟಿರ್​ ನಿಧನರಾದರು ಎಂಬುದನ್ನು ತೀವ್ರ ವಿಷಾದದೊಂದಿಗೆ ತಿಳಿಸುತ್ತಿದ್ದೇವೆ. ಅವರು ಕೊನೆಯುಸಿರೆಳೆದ ವೇಳೆ ಮನೆಯಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳು ಜೊತೆಯಲ್ಲಿ ಇದ್ದರು. 54 ವರ್ಷದ ಪೌಲ್​ ರಿಟರ್​ ಅವರು ಬ್ರೇನ್​ ಟ್ಯೂಮರ್​ನಿಂದ ಬಳಲುತ್ತಿದ್ದರು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ

(Paul Ritter Death: Harry Potter actor Paul Ritter dies due to Brain Tumour at 54)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!