AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಮನೆ ಊಟಕ್ಕೆ ಬ್ರೇಕ್: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್

Renuka Swamy case: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳಿಗೆ ಮನೆ ಊಟ ಪಡೆಯಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿತ್ತು. ಅದರಂತೆ ಜೈಲಲ್ಲಿದ್ದರೂ ಮನೆ ಊಟವನ್ನು ಈ ಆರೋಪಿಗಳು ಸವಿಯುತ್ತಿದ್ದರು, ಆದರೆ ಇದೀಗ ಹೈಕೋರ್ಟ್ ಈ ಆದೇಶಕ್ಕೆ ತಡೆ ನೀಡಿದೆ.

ಪವಿತ್ರಾ ಮನೆ ಊಟಕ್ಕೆ ಬ್ರೇಕ್: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್
Pavithra Gowda
ಮಂಜುನಾಥ ಸಿ.
|

Updated on:Jan 20, 2026 | 2:26 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳು ನ್ಯಾಯಾಂಗ ಬಂಧನದಲ್ಲಿದ್ದು ಅವರಿಗೆ ವಾರಕ್ಕೊಮ್ಮೆ ಮನೆ ಊಟ ಲಭಿಸುತ್ತಿತ್ತು. ಟ್ರಯಲ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿ ಈ ಮೂವರು ಜೈಲಿನಲ್ಲೇ ಮನೆ ಊಟ ಸಿಗುವಂತೆ ವ್ಯವಸ್ಥೆ ಮಾಡಿಕೊಂಡಿದ್ದರು. ಪೊಲೀಸರ ಮೇಲ್ಮನವಿಯ ಬಳಿಕ ಪ್ರತಿದಿನ ಅಲ್ಲ ಬದಲಿಗೆ ವಾರಕ್ಕೆ ಒಮ್ಮೆ ಮನೆ ಊಟ ಕೊಡಬಹುದು, ವೈದ್ಯರು ಸಲಹೆ ಕೊಟ್ಟರೆ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳಿಗೂ ಮನೆ ಊಟ ಕೊಡಬಹುದು ಎಂದಿದ್ದರು. ಆದರೆ ಇದೀಗ ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಪವಿತ್ರಾ ಗೌಡ ಮತ್ತು ಇತರೆ ಇಬ್ಬರು ಆರೋಪಿಗಳಿಗೆ ಮನೆ ಊಟ ಕೊಡುವಂತೆ 57ನೇ ಸಿಸಿಎಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಜೈಲಧಿಕಾರಿಗಳು ಹೈಕೋರ್ಟ್​​ ಮೊರೆ ಹೋಗಿದ್ದರು. ಇದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೈಲಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಆರೋಪಿಗೆ ವಿಶೇಷ ಸವಲತ್ತು ನೀಡಬಾರದು ಎಂದು ಸೂಚಿಸಿದೆ, ವಿಶೇಷ ಸವಲತ್ತು ನೀಡಿದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ. ಅಲ್ಲದೆ, ಪವಿತ್ರಾ ಗೌಡ ಮತ್ತು ಇರೆ ಇಬಬರು ಆರೋಪಿಗಳಿಗೆ ಮನೆ ಊಟಕ್ಕೆ ಅವಕಾಶ ನೀಡಿದರೆ ಜೈಲಿನ ಇತರೆ ಕೈದಿಗಳೂ ಸಹ ಮನೆ ಊಟಕ್ಕೆ ಬೇಡಿಕೆ ಇಡುತ್ತಾರೆ, ಜೈಲಿನ ಶಿಸ್ತು ಸಡಿಲವಾಗುತ್ತದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಅಲ್ಲದೆ, ಜೈಲಿನಲ್ಲಿ ಈಗಾಗಲೇ ಎಫ್​​ಎಸ್​​ಎಸ್​​ಎಐ ಸೂಚನೆಯಂತೆ ಫೋರ್ ಸ್ಟಾರ್ ಆಹಾರವನ್ನೇ ಎಲ್ಲ ಕೈದಿಗಳಿಗೂ ನೀಡಲಾಗುತ್ತಿದೆ. ಜೈಲಿನ ಆಹಾರ ಶುಚಿಯಾಗಿಯೂ, ರುಚಿಯಾಗಿಯೂ, ಆರೋಗ್ಯಕರವಾಗಿಯೂ ಇದೆ ಹೀಗಿರುವಾಗ ಮನೆಯಿಂದ ಊಟ ನೀಡುವ ಔಚಿತ್ಯ ಏನಿದೆ? ಎಂದು ಸರ್ಕಾರಿ ವಕೀಲರು ಹೈಕೋರ್ಟ್​​ನಲ್ಲಿ ವಾದ ಮಂಡಿಸಿದ್ದರು.

ಇದನ್ನೂ ಓದಿ:ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆ

ವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, 57ನೇ ಸಿಸಿಎಚ್ ನ್ಯಾಯಾಲಯ ನಿಡಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಕಾನೂನಿಗೆ ಎಲ್ಲರೂ ಒಂದೇ ಎಂದಿರುವ ನ್ಯಾಯಾಲಯವು, ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿರುವಂತೆ ಯಾರಿಗೂ ಸಹ ವಿಶೇಷ ಸವಲತ್ತು ನೀಡುವಂತಿಲ್ಲ ಎಂದಿದೆ. ಅಲ್ಲದೆ, ಜೈಲು ಕೈಪಿಡಿಯಲ್ಲಿ ಮನೆ ಊಟವನ್ನು ಕೇವಲ ಬಹಳ ವಿಶೇಷ ಸಂದರ್ಭದಲ್ಲಿ ಐಜಿಪಿ ಅವರ ಒಪ್ಪಿಗೆ ಮೇರೆಗೆ ಮಾತ್ರವೇ ನೀಡಬೇಕು, ಅದೂ ಆ ಕಾರಣ ವೈದ್ಯಕೀಯ ಕಾರಣ ಆಗಿರಬೇಕು ಎಂಬುದನ್ನು ಸಹ ಹೈಕೋರ್ಟ್ ಉಲ್ಲೇಖಿಸಿದೆ.

ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳು ಜೈಲಿನಲ್ಲಿ ಇದ್ದಾಗಿಯೂ ವಾರಕ್ಕೊಮ್ಮೆ ಮನೆ ಊಟ ಸವಿಯುತ್ತ ವಿಶೇಷ ಸವಲತ್ತನ್ನು ಅನುಭವಿಸುತ್ತಿದ್ದರು ಆದರೆ ನ್ಯಾಯಾಲಯದ ಆದೇಶದಿಂದ ವಿಶೇಷ ಸವಲತ್ತಿಗೆ ಕತ್ತರಿ ಬಿದ್ದಿದ್ದು, ಸಂಪೂರ್ಣವಾಗಿ ಜೈಲೂಟವೇ ಗತಿ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Tue, 20 January 26

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ