AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್

Pawan Kalyan: ಈ ಮೂರೂ ಸಿನಿಮಾಗಳು ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುಂಚೆ ಒಪ್ಪಿಕೊಂಡ ಸಿನಿಮಾಗಳಾಗಿದ್ದವು. ಸಿನಿಮಾ ಶೂಟಿಂಗ್ ಬದಿಗಿಟ್ಟು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದರು ಪವನ್ ಕಲ್ಯಾಣ್. ಮೂರು ಸಿನಿಮಾಗಳು ಬಿಡುಗಡೆ ಆದ ಬಳಿಕ ಬೇರೆ ಹೊಸ ಸಿನಿಮಾ ಒಪ್ಪಿಕೊಳ್ಳುವುದಿಲ್ಲ ಎಂದಿದ್ದರು. ಆದರೆ ಇದೀಗ ತಾವೇ ಹಾಕಿಕೊಂಡ ನಿಯಮವನ್ನು ತಾವೇ ಮುರಿದಿದ್ದಾರೆ.

ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್
Og 2
ಮಂಜುನಾಥ ಸಿ.
|

Updated on: Jun 25, 2026 | 10:23 PM

Share

ನಟ ಪವನ್ ಕಲ್ಯಾಣ್ (Pawan Kalyan) ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆದ ಬಳಿಕ ಅವರ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿವೆ. ‘ಹರಿಹರ ವೀರ ಮಲ್ಲು’, ‘ಓಜಿ’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಬಿಡುಗಡೆ ಆಗಿವೆ. ಆದರೆ ಈ ಮೂರೂ ಸಿನಿಮಾಗಳು ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುಂಚೆ ಒಪ್ಪಿಕೊಂಡ ಸಿನಿಮಾಗಳಾಗಿದ್ದವು. ಸಿನಿಮಾ ಶೂಟಿಂಗ್ ಬದಿಗಿಟ್ಟು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದರು ಪವನ್ ಕಲ್ಯಾಣ್. ಮೂರು ಸಿನಿಮಾಗಳು ಬಿಡುಗಡೆ ಆದ ಬಳಿಕ ಬೇರೆ ಹೊಸ ಸಿನಿಮಾ ಒಪ್ಪಿಕೊಳ್ಳುವುದಿಲ್ಲ ಎಂದಿದ್ದರು. ಆದರೆ ಇದೀಗ ತಾವೇ ಹಾಕಿಕೊಂಡ ನಿಯಮವನ್ನು ತಾವೇ ಮುರಿದಿದ್ದಾರೆ.

ಪವನ್ ಕಲ್ಯಾಣ್ ಅವರು ಇದೀಗ ಹೊಸ ಸಿನಿಮಾನಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆ ಆಗಿದ್ದ ಅವರ ನಟನೆಯ ‘ಓಜಿ’ ಸಿನಿಮಾದ ಎರಡನೇ ಭಾಗದಲ್ಲಿ ನಟಿಸಲು ಪವನ್ ಕಲ್ಯಾಣ್ ಒಪ್ಪಿಗೆ ಸೂಚಿಸಿದ್ದಾರೆ. ಮಾತ್ರವಲ್ಲದೆ ‘ಓಜಿ 2’ ಸಿನಿಮಾವನ್ನು ಖುದ್ದು ಪವನ್ ಕಲ್ಯಾಣ್ ಅವರೇ ನಿರ್ಮಾಣ ಸಹ ಮಾಡಲಿದ್ದಾರೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಓಜಿ’ ಸಿನಿಮಾವನ್ನು ಡಿವಿವಿ ಎಂಟರ್ಟೈನ್​​ಮೆಂಟ್ ನಿರ್ಮಾಣ ಮಾಡಿತ್ತು, ಈಗ ‘ಓಜಿ 2’ ಸಿನಿಮಾವನ್ನು ಖುದ್ದು ಪವನ್ ಕಲ್ಯಾಣ್ ನಿರ್ಮಿಸುತ್ತಿದ್ದಾರೆ.

‘ಓಜಿ’ ಸಿನಿಮಾನಲ್ಲಿ ನಾಯಕನಿಗೆ ಜಪಾನಿನ ಸಂಪರ್ಕ ಇರುವ ಬಗ್ಗೆ ಸಣ್ಣ ಹಿಂಟ್ ಕೊಡಲಾಗಿತ್ತು. ಈಗ ‘ಓಜಿ 2’ ಸಿನಿಮಾನಲ್ಲಿ ನಾಯಕನ ಹಿನ್ನೆಲೆಯದ್ದೇ ಮುಖ್ಯ ಕತೆ ಆಗಿರಲಿದೆ. ಅದರಲ್ಲೂ ವಿಶೇಷವಾಗಿ ನಾಯಕನಿಗೂ ಜಪಾನಿಗೂ ಇರುವ ನಂಟನ್ನು ಬಿಚ್ಚಿಡುವ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ.

ಇದನ್ನೂ ಓದಿ:ಡಿಸಿಎಂ ಪವನ್ ಕಲ್ಯಾಣ್​​ರ ಭೇಟಿಯಾದ ನಟ ಅಲ್ಲು ಅರ್ಜುನ್: ಕಾರಣ?

‘ಓಜಿ’ ಸಿನಿಮಾ ನಿರ್ದೇಶಿಸಿದ್ದ ಸುಜಿತ್ ಅವರೇ ಈಗ ‘ಓಜಿ 2’ ಸಿನಿಮಾ ನಿರ್ದೇಶಿಸಲಿದ್ದಾರೆ. ಸುಜೀತ್ ಹಾಗೂ ಪವನ್ ಕಲ್ಯಾಣ್ ಈಗಾಗಲೇ ಭೇಟಿಯಾಗಿ ಕತೆಯ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದಾರೆ. ಸುಜಿತ್, ‘ಓಜಿ 2’ ಸಿನಿಮಾದ ಸೀನ್​​ಗಳ ಸ್ಟೋರಿ ಬೋರ್ಡ್ ಮಾಡಿಕೊಂಡಿದ್ದು, ಆ ಸ್ಟೋರಿ ಬೋರ್ಡ್ ಅನ್ನು ಪುಸ್ತಕ ರೂಪದಲ್ಲಿ ಪವನ್ ಕಲ್ಯಾಣ್​​ಗೆ ನೀಡಿದ್ದಾರೆ. ಸುಜೀತ್ ಅವರ ತಯಾರಿ ನೋಡಿ ಖುಷಿ ಆಗಿರುವ ಪವನ್ ಕಲ್ಯಾಣ್, ಸಿನಿಮಾನಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಶೀಘ್ರವೇ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.

ಡಿಸಿಎಂ ಆಗಿದ್ದಾಗಲೇ ಪವನ್ ಕಲ್ಯಾಣ್ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮ್ಮ ಬಿಡುವಿಲ್ಲದ ಆಡಳಿತ ಮತ್ತು ರಾಜಕಾರಣದ ಕೆಲಸದ ನಡುವೆ ಬಿಡುವು ಮಾಡಿಕೊಂಡು ಚಿತ್ರೀಕರಣಗಳನ್ನು ಪವನ್ ಕಲ್ಯಾಣ್ ಮುಗಿಸಿದ್ದಾರೆ. ಪವನ್ ಅವರಿಗೆ ಸಹಾಯ ಆಗಲೆಂದು ಅವರ ಕ್ಷೇತ್ರದ ಹತ್ತಿರದಲ್ಲೇ ಸಿನಿಮಾ ಸೆಟ್​​ಗಳನ್ನು ಹಾಕಲಾಗಿತ್ತು. ಈಗ ‘ಓಜಿ 2’ ಸಿನಿಮಾಕ್ಕೂ ಇದೇ ಮಾದರಿಯನ್ನು ಅನುಸರಿಸುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್