ಪವನ್ ಕಲ್ಯಾಣ್ ಹಾಗೂ ಅಲಿ ಗೆಳೆತನ ಸರಿ ಇಲ್ಲ ಎಂದವರಿಗೆ ಇಲ್ಲಿದೆ ಉತ್ತರ

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಲಿ ಅವರು ಪವನ್ ಕಲ್ಯಾಣ್ ಅವರನ್ನು ಟೀಕಿಸಿದ್ದರು. ಪವನ್ ಕಲ್ಯಾಣ್ ಹಾಗೂ ಅಲಿ ಮಧ್ಯೆ ಸಾಕಷ್ಟು ರಾಜಕೀಯ ಭಿನ್ನಾಭಿಪ್ರಾಯಗಳು ಇವೆ. ಆದಾಗ್ಯೂ ಅಲಿ ಅವರು ಪವನ್ ಕಲ್ಯಾಣ್ ಅವರನ್ನು ತಮ್ಮ ಮಗಳ ಮದುವೆಗೆ ಆಮಂತ್ರಿಸಿದ್ದರು.

ಪವನ್ ಕಲ್ಯಾಣ್ ಹಾಗೂ ಅಲಿ ಗೆಳೆತನ ಸರಿ ಇಲ್ಲ ಎಂದವರಿಗೆ ಇಲ್ಲಿದೆ ಉತ್ತರ
ಪವನ್ ಕಲ್ಯಾಣ್ ಹಾಗೂ ಅಲಿ ಗೆಳೆತನ ಸರಿ ಇಲ್ಲ ಎಂದವರಿಗೆ ಇಲ್ಲಿದೆ ಉತ್ತರ
Follow us
|

Updated on: Sep 20, 2024 | 6:55 AM

ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಸಿನಿಮಾ ಜೊತೆ ರಾಜಕೀಯದಲ್ಲೂ ತೊಡಗಿಕೊಂಡಿದ್ದಾರೆ. ಅವರು ಕಾಮಿಡಿಯನ್ ಅಲಿ ಜೊತೆಗೆ ಒಳ್ಳೆಯ ಸಂಬಂಧ ಹೊಂದಿದ್ದರು. ಆದರೆ, ಇದು ಸಾಕಷ್ಟು ಏರಿಳಿತ ಕಂಡಿದೆ. ಅಲಿ ಅವರು ವೈಎಸ್​ಆರ್​ಸಿಪಿ ಪಕ್ಷ ಸೇರಿದ ಸಂದರ್ಭದಲ್ಲಿ ಪವನ್ ಕಲ್ಯಾಣ್ ಜನಸೇನಾ ಪಕ್ಷ ಸ್ಥಾಪಿಸಿದರು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಲಿ ಅವರು ಪವನ್ ಕಲ್ಯಾಣ್ ಅವರನ್ನು ಟೀಕಿಸಿದರು. ಈಗ ಇವರ ಸಂಬಂಧದ ಬಗ್ಗೆ ಅಲಿ ಮಾತನಾಡಿದ್ದಾರೆ.

ಅಲಿ ಹಾಗೂ ಪವನ್ ಕಲ್ಯಾಣ್ ಮಧ್ಯೆ ಸಾಕಷ್ಟು ರಾಜಕೀಯ ಭಿನ್ನಾಭಿಪ್ರಾಯಗಳು ಇವೆ. ಆದಾಗ್ಯೂ ಅಲಿ ಅವರು ಪವನ್ ಕಲ್ಯಾಣ್ ಅವರನ್ನು ತಮ್ಮ ಮಗಳ ಮದುವೆಗೆ ಆಮಂತ್ರಿಸಿದ್ದರು. ಆದರೆ, ಪವನ್ ಕಲ್ಯಾಣ್ ಈ ಮದುವೆಗೆ ಹೋಗಲು ಸಾಧ್ಯವಾಗಿಲ್ಲ. ಹೀಗಾಗಿ, ಇವರ ಸಂಬಂಧ ಸರಿ ಆಗಿಲ್ಲ ಎಂದೇ ಹೇಳಲಾಗಿತ್ತು.

ಇತ್ತೀಚೆಗೆ ಅಲಿ ಅವರು ಒಂದು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ‘ಒಜಿ’ ಸಿನಿಮಾದಲ್ಲಿ ನಟಿಸೋಕೆ ಪವನ್ ಕಲ್ಯಾಣ್ ಅವರು ಅಲಿಗೆ ಆಫರ್ ನೀಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ.  ‘ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾನು ಅವರ ಜೊತೆ ಸಿನಿಮಾ ಮಾಡೋಕೆ ಆಸಕ್ತಿ ಹೊಂದಿದ್ದೇನೆ. ನಮ್ಮ ಮಧ್ಯೆ ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಪರಸ್ಪರ ಗೌರವ ಇದೆ’ ಎಂದು ಅಲಿ ಅವರು ಹೇಳಿದ್ದಾರೆ.

ಪವನ್ ಕಲ್ಯಾಣ್ ಅವರ ಸಿನಿಮಾಗಳಲ್ಲಿ ಅಲಿ ಕಾಮಿಡಿಯನ್ ಆಗಿ ನಟಿಸಿದ್ದಾರೆ. ಇವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಸಖತ್ ಇಷ್ಟ ಆಗುತ್ತದೆ. ಇವರು ಮತ್ತೆ ಒಂದಾದರೆ ಫ್ಯಾನ್ಸ್​ಗೆ ಸಖತ್ ಖುಷಿ ಸಿಗೋದು ಗ್ಯಾರಂಟಿ. ಸದ್ಯ ಬ್ರಹ್ಮಾನಂದಂ ಅವರು ಅಷ್ಟಾಗಿ ಸಿನಿಮಾಗಳನ್ನು ಮಾಡುತ್ತಿಲ್ಲ. ಈ ಸಂದರ್ಭದಲ್ಲಿ ಅಲಿ ಹಾಗೂ ಪವನ್ ಕಲ್ಯಾಣ್ ಒಟ್ಟಾಗಿ ನಟಿಸಿದರೆ ಅಭಿಮಾನಿಗಳಿಗೆ ಖುಷಿ ಆಗಲಿದೆ.

ಇದನ್ನೂ ಓದಿ: ಆಪ್ತ ಎನಿಸಿಕೊಂಡ ಜಾನಿ ಮಾಸ್ಟರ್ ವಿರುದ್ಧವೇ ಕಿರುಕುಳ ಆರೋಪ; ಕ್ರಮ ಕೈಗೊಳ್ತಾರಾ ಪವನ್ ಕಲ್ಯಾಣ್?

ಸದ್ಯ ಪವನ್ ಕಲ್ಯಾಣ್ ಅವರು ‘ಹರಿಹರ ವೀರ ಮಲ್ಲು’, ‘ಉಸ್ತಾದ್ ಭಗತ್ ಸಿಂಗ್’ ಹಾಗೂ ‘ಒಜಿ’ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಅವರು ಈಗ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಕೂಡ ಹೌದು. ಸಿನಿಮಾ ಕೆಲಸಗಳ ಜೊತೆ ಅವರು ರಾಜಕೀಯದಲ್ಲೂ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಆಂಧ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಆಗ ಅವರು ಸಹಾಯಕ್ಕೆ ಇಳಿದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ