AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಹಾಗೂ ಅಲಿ ಗೆಳೆತನ ಸರಿ ಇಲ್ಲ ಎಂದವರಿಗೆ ಇಲ್ಲಿದೆ ಉತ್ತರ

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಲಿ ಅವರು ಪವನ್ ಕಲ್ಯಾಣ್ ಅವರನ್ನು ಟೀಕಿಸಿದ್ದರು. ಪವನ್ ಕಲ್ಯಾಣ್ ಹಾಗೂ ಅಲಿ ಮಧ್ಯೆ ಸಾಕಷ್ಟು ರಾಜಕೀಯ ಭಿನ್ನಾಭಿಪ್ರಾಯಗಳು ಇವೆ. ಆದಾಗ್ಯೂ ಅಲಿ ಅವರು ಪವನ್ ಕಲ್ಯಾಣ್ ಅವರನ್ನು ತಮ್ಮ ಮಗಳ ಮದುವೆಗೆ ಆಮಂತ್ರಿಸಿದ್ದರು.

ಪವನ್ ಕಲ್ಯಾಣ್ ಹಾಗೂ ಅಲಿ ಗೆಳೆತನ ಸರಿ ಇಲ್ಲ ಎಂದವರಿಗೆ ಇಲ್ಲಿದೆ ಉತ್ತರ
ಪವನ್ ಕಲ್ಯಾಣ್ ಹಾಗೂ ಅಲಿ ಗೆಳೆತನ ಸರಿ ಇಲ್ಲ ಎಂದವರಿಗೆ ಇಲ್ಲಿದೆ ಉತ್ತರ
ರಾಜೇಶ್ ದುಗ್ಗುಮನೆ
|

Updated on: Sep 20, 2024 | 6:55 AM

Share

ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಸಿನಿಮಾ ಜೊತೆ ರಾಜಕೀಯದಲ್ಲೂ ತೊಡಗಿಕೊಂಡಿದ್ದಾರೆ. ಅವರು ಕಾಮಿಡಿಯನ್ ಅಲಿ ಜೊತೆಗೆ ಒಳ್ಳೆಯ ಸಂಬಂಧ ಹೊಂದಿದ್ದರು. ಆದರೆ, ಇದು ಸಾಕಷ್ಟು ಏರಿಳಿತ ಕಂಡಿದೆ. ಅಲಿ ಅವರು ವೈಎಸ್​ಆರ್​ಸಿಪಿ ಪಕ್ಷ ಸೇರಿದ ಸಂದರ್ಭದಲ್ಲಿ ಪವನ್ ಕಲ್ಯಾಣ್ ಜನಸೇನಾ ಪಕ್ಷ ಸ್ಥಾಪಿಸಿದರು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಲಿ ಅವರು ಪವನ್ ಕಲ್ಯಾಣ್ ಅವರನ್ನು ಟೀಕಿಸಿದರು. ಈಗ ಇವರ ಸಂಬಂಧದ ಬಗ್ಗೆ ಅಲಿ ಮಾತನಾಡಿದ್ದಾರೆ.

ಅಲಿ ಹಾಗೂ ಪವನ್ ಕಲ್ಯಾಣ್ ಮಧ್ಯೆ ಸಾಕಷ್ಟು ರಾಜಕೀಯ ಭಿನ್ನಾಭಿಪ್ರಾಯಗಳು ಇವೆ. ಆದಾಗ್ಯೂ ಅಲಿ ಅವರು ಪವನ್ ಕಲ್ಯಾಣ್ ಅವರನ್ನು ತಮ್ಮ ಮಗಳ ಮದುವೆಗೆ ಆಮಂತ್ರಿಸಿದ್ದರು. ಆದರೆ, ಪವನ್ ಕಲ್ಯಾಣ್ ಈ ಮದುವೆಗೆ ಹೋಗಲು ಸಾಧ್ಯವಾಗಿಲ್ಲ. ಹೀಗಾಗಿ, ಇವರ ಸಂಬಂಧ ಸರಿ ಆಗಿಲ್ಲ ಎಂದೇ ಹೇಳಲಾಗಿತ್ತು.

ಇತ್ತೀಚೆಗೆ ಅಲಿ ಅವರು ಒಂದು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ‘ಒಜಿ’ ಸಿನಿಮಾದಲ್ಲಿ ನಟಿಸೋಕೆ ಪವನ್ ಕಲ್ಯಾಣ್ ಅವರು ಅಲಿಗೆ ಆಫರ್ ನೀಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ.  ‘ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾನು ಅವರ ಜೊತೆ ಸಿನಿಮಾ ಮಾಡೋಕೆ ಆಸಕ್ತಿ ಹೊಂದಿದ್ದೇನೆ. ನಮ್ಮ ಮಧ್ಯೆ ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಪರಸ್ಪರ ಗೌರವ ಇದೆ’ ಎಂದು ಅಲಿ ಅವರು ಹೇಳಿದ್ದಾರೆ.

ಪವನ್ ಕಲ್ಯಾಣ್ ಅವರ ಸಿನಿಮಾಗಳಲ್ಲಿ ಅಲಿ ಕಾಮಿಡಿಯನ್ ಆಗಿ ನಟಿಸಿದ್ದಾರೆ. ಇವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಸಖತ್ ಇಷ್ಟ ಆಗುತ್ತದೆ. ಇವರು ಮತ್ತೆ ಒಂದಾದರೆ ಫ್ಯಾನ್ಸ್​ಗೆ ಸಖತ್ ಖುಷಿ ಸಿಗೋದು ಗ್ಯಾರಂಟಿ. ಸದ್ಯ ಬ್ರಹ್ಮಾನಂದಂ ಅವರು ಅಷ್ಟಾಗಿ ಸಿನಿಮಾಗಳನ್ನು ಮಾಡುತ್ತಿಲ್ಲ. ಈ ಸಂದರ್ಭದಲ್ಲಿ ಅಲಿ ಹಾಗೂ ಪವನ್ ಕಲ್ಯಾಣ್ ಒಟ್ಟಾಗಿ ನಟಿಸಿದರೆ ಅಭಿಮಾನಿಗಳಿಗೆ ಖುಷಿ ಆಗಲಿದೆ.

ಇದನ್ನೂ ಓದಿ: ಆಪ್ತ ಎನಿಸಿಕೊಂಡ ಜಾನಿ ಮಾಸ್ಟರ್ ವಿರುದ್ಧವೇ ಕಿರುಕುಳ ಆರೋಪ; ಕ್ರಮ ಕೈಗೊಳ್ತಾರಾ ಪವನ್ ಕಲ್ಯಾಣ್?

ಸದ್ಯ ಪವನ್ ಕಲ್ಯಾಣ್ ಅವರು ‘ಹರಿಹರ ವೀರ ಮಲ್ಲು’, ‘ಉಸ್ತಾದ್ ಭಗತ್ ಸಿಂಗ್’ ಹಾಗೂ ‘ಒಜಿ’ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಅವರು ಈಗ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಕೂಡ ಹೌದು. ಸಿನಿಮಾ ಕೆಲಸಗಳ ಜೊತೆ ಅವರು ರಾಜಕೀಯದಲ್ಲೂ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಆಂಧ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಆಗ ಅವರು ಸಹಾಯಕ್ಕೆ ಇಳಿದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!