AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ಜಗತ್ತಿಗೆ ತಿಳಿಯಲೇ ಇಲ್ಲ ಮೋಹನ್​ಲಾಲ್​-ಪವನ್​ ಕಲ್ಯಾಣ್​ ಭೇಟಿ; ಏನಿದರ ಉದ್ದೇಶ?

ಹೈದರಾಬಾದ್​ ಸಿನಿಮಾ ಶೂಟಿಂಗ್​ ಹಾಟ್​ಸ್ಪಾಟ್​. ನಿತ್ಯ ಸಾಕಷ್ಟು ಸಿನಿಮಾಗಳ ಶೂಟಿಂಗ್​ ಇಲ್ಲಿ ನಡೆಯುತ್ತಿದೆ. ಅದೇ ರೀತಿ ಮೋಹನ್​ಲಾಲ್​ ಹಾಗೂ ಪವನ್​ ಕಲ್ಯಾಣ್​ ಹೈದರಾಬಾದ್​ನ ಅಲ್ಯೂಮೀನಿಯಂ ಫ್ಯಾಕ್ಟರಿಯಲ್ಲಿ ತಮ್ಮ ಸಿನಿಮಾ ಶೂಟಿಂಗ್​ ನಡೆಸುತ್ತಿದ್ದಾರೆ.

ಹೊರ ಜಗತ್ತಿಗೆ ತಿಳಿಯಲೇ ಇಲ್ಲ ಮೋಹನ್​ಲಾಲ್​-ಪವನ್​ ಕಲ್ಯಾಣ್​ ಭೇಟಿ; ಏನಿದರ ಉದ್ದೇಶ?
ಹೊರ ಜಗತ್ತಿಗೆ ತಿಳಿಯಲೇ ಇಲ್ಲ ಮೋಹನ್​ಲಾಲ್​-ಪವನ್​ ಕಲ್ಯಾಣ್​ ಭೇಟಿ; ಏನಿದರ ಉದ್ದೇಶ?
TV9 Web
| Edited By: |

Updated on: Aug 20, 2021 | 8:35 PM

Share

ಕೊವಿಡ್​ ಎರಡನೇ ಅಲೆ ತಣ್ಣಗಾದ ಬೆನ್ನಲ್ಲೇ ಸಿನಿಮಾ ಕೆಲಸಗಳು ಜೋರಾಗಿವೆ. ನಟ-ನಟಿಯರು, ಕಲಾವಿದರು ಹಾಗೂ ತಾಂತ್ರಿಕ ವರ್ಗ ಸಿನಿಮಾ ಸೆಟ್​ಗೆ ಮರಳಿದೆ. ಈ ಮಧ್ಯೆ, ಮಲಯಾಳಂ ಖ್ಯಾತ ನಟ ಮೋಹನ್​ಲಾಲ್​ ಹಾಗೂ ಟಾಲಿವುಡ್​ ಸ್ಟಾರ್​ ನಟ, ರಾಜಕಾರಣಿ ಪವನ್​ ಕಲ್ಯಾಣ್​ ಅವರು ಹೈದರಾಬಾದ್​ನಲ್ಲಿ ಗುಪ್ತವಾಗಿ ಮೀಟ್​ ಮಾಡಿದ್ದಾರೆ ಎನ್ನುವ ಸುದ್ದಿ ಲೀಕ್​ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್​ ಅಚ್ಚರಿ ಹೊರಹಾಕಿದ್ದಾರೆ.

ಹೈದರಾಬಾದ್​ ಸಿನಿಮಾ ಶೂಟಿಂಗ್​ ಹಾಟ್​ಸ್ಪಾಟ್​. ನಿತ್ಯ ಸಾಕಷ್ಟು ಸಿನಿಮಾಗಳ ಶೂಟಿಂಗ್​ ಇಲ್ಲಿ ನಡೆಯುತ್ತಿದೆ. ಅದೇ ರೀತಿ ಮೋಹನ್​ಲಾಲ್​ ಹಾಗೂ ಪವನ್​ ಕಲ್ಯಾಣ್​ ಹೈದರಾಬಾದ್​ನ ಅಲ್ಯೂಮೀನಿಯಂ ಫ್ಯಾಕ್ಟರಿಯಲ್ಲಿ ತಮ್ಮ ಸಿನಿಮಾ ಶೂಟಿಂಗ್​ ನಡೆಸುತ್ತಿದ್ದಾರೆ. ಸಿನಿಮಾ ಶೂಟಿಂಗ್​ಗೆ ಇಬ್ಬರೂ ಒಂದೇ ಲೊಕೇಶನ್​ಲ್ಲಿರುವ ವಿಚಾರ ಗೊತ್ತಾಗಿದೆ. ಹೀಗಾಗಿ, ಮೋಹನ್​ಲಾಲ್​ ಹಾಗೂ ಪವನ್​ ಕಲ್ಯಾಣ್​ ಭೇಟಿ ಮಾಡಿದ್ದಾರೆ.

ಮಧ್ಯಾಹ್ನದ ಬಿಡುವಿನ ವೇಳೆ ಈ ಭೇಟಿ ನಡೆದಿದೆ. ಇವರಿಗೋಸ್ಕರ ನಿರ್ಮಾಪಕರು ವಿಶೇಷ ಊಟದ ವ್ಯವಸ್ಥೆ ಮಾಡಿದ್ದರು. ಊಟ ಸವಿದ ನಂತರದಲ್ಲಿ ಇಬ್ಬರೂ ರಾಜಕೀಯ ಹಾಗೂ ಸಿನಿಮಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಕೆಲ ಪ್ರಮುಖರು ಮಾತ್ರ ಅವರ ಜತೆ ಇದ್ದರು ಎಂದು ತಿಳಿದು ಬಂದಿದೆ.

ಸಾಮಾನ್ಯವಾಗಿ ಇಂಥ ಭೇಟಿ ನಡೆದರೆ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ಸುದ್ದಿಯಾಗುತ್ತದೆ. ಫೋಟೋಗಳು ವೈರಲ್​ ಆಗುತ್ತವೆ. ಆದರೆ, ಇಬ್ಬರೂ ಹೀರೋಗಳು ಇದಕ್ಕೆ ಹೈಪ್​ ಕೊಡದಂತೆ ಸೂಚನೆ ನೀಡಿದ್ದಾರಂತೆ. ಇದೊಂದು ಸಾಮಾನ್ಯ ಭೇಟಿ. ಒಂದೊಮ್ಮೆ ಭೇಟಿಯಾದ ಫೋಟೋ ವೈರಲ್​ ಆದರೆ, ಅದಕ್ಕೆ ಬೇರೆ ಅರ್ಥ ಬರಬಹುದು ಎನ್ನುವುದು ಚಿತ್ರತಂಡದ ಲೆಕ್ಕಾಚಾರ. ಈ ಕಾರಣಕ್ಕೆ ಸಿನಿಮಾ ತಂಡ ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದು ಬಂದಿದೆ.

ಹೈದರಾಬಾದ್​ನಲ್ಲಿರುವುದರಿಂದ ಮೋಹನ್​ಲಾಲ್​ ಅವರು ತೆಲುಗು ಇಂಡಸ್ಟ್ರಿಯ ಸಾಕಷ್ಟು ಗೆಳೆಯರನ್ನು ಭೇಟಿ ಮಾಡುತ್ತಿದ್ದಾರೆ. ಮೋಹನ್​ ಬಾಬು ಅವರನ್ನು ಮೋಹನ್​ಲಾಲ್​ ಭೇಟಿ ಮಾಡಿದ್ದಾರೆ. ಮೋಹನ್​ಲಾಲ್​ ಹಾಗೂ ಚಿರಂಜೀವಿ ತುಂಬಾನೇ ಕ್ಲೋಸ್​ ಫ್ರೆಂಡ್ಸ್​. ಅವರನ್ನು ಭೇಟಿ ಮಾಡುವ ಆಲೋಚನೆ ಕೂಡ ಮೋಹನ್​ಲಾಲ್ ಹೊಂದಿದ್ದಾರೆ.

ಇದನ್ನೂ ಓದಿ: KGF Chapter 2: ಕೆಜಿಎಫ್​ 2 ಚಿತ್ರಕ್ಕೂ ಮೊದಲೇ ತೆಲುಗು ಸಿನಿಮಾ ಮೂಲಕ ತೆರೆ ಮೇಲೆ ಬರಲಿದ್ದಾರಂತೆ ಯಶ್! ಏನಿದು ಸರ್​ಪ್ರೈಸ್?

ವಿಜಯ್​ ದೇವರಕೊಂಡ ಡಿಮ್ಯಾಂಡ್​ಗೆ ಬೇಸತ್ತ ನಿರ್ದೇಶಕ; ಇದು ದುರಹಂಕಾರ ಎಂದ ಫ್ಯಾನ್ಸ್​

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?