AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ಜಗತ್ತಿಗೆ ತಿಳಿಯಲೇ ಇಲ್ಲ ಮೋಹನ್​ಲಾಲ್​-ಪವನ್​ ಕಲ್ಯಾಣ್​ ಭೇಟಿ; ಏನಿದರ ಉದ್ದೇಶ?

ಹೈದರಾಬಾದ್​ ಸಿನಿಮಾ ಶೂಟಿಂಗ್​ ಹಾಟ್​ಸ್ಪಾಟ್​. ನಿತ್ಯ ಸಾಕಷ್ಟು ಸಿನಿಮಾಗಳ ಶೂಟಿಂಗ್​ ಇಲ್ಲಿ ನಡೆಯುತ್ತಿದೆ. ಅದೇ ರೀತಿ ಮೋಹನ್​ಲಾಲ್​ ಹಾಗೂ ಪವನ್​ ಕಲ್ಯಾಣ್​ ಹೈದರಾಬಾದ್​ನ ಅಲ್ಯೂಮೀನಿಯಂ ಫ್ಯಾಕ್ಟರಿಯಲ್ಲಿ ತಮ್ಮ ಸಿನಿಮಾ ಶೂಟಿಂಗ್​ ನಡೆಸುತ್ತಿದ್ದಾರೆ.

ಹೊರ ಜಗತ್ತಿಗೆ ತಿಳಿಯಲೇ ಇಲ್ಲ ಮೋಹನ್​ಲಾಲ್​-ಪವನ್​ ಕಲ್ಯಾಣ್​ ಭೇಟಿ; ಏನಿದರ ಉದ್ದೇಶ?
ಹೊರ ಜಗತ್ತಿಗೆ ತಿಳಿಯಲೇ ಇಲ್ಲ ಮೋಹನ್​ಲಾಲ್​-ಪವನ್​ ಕಲ್ಯಾಣ್​ ಭೇಟಿ; ಏನಿದರ ಉದ್ದೇಶ?
TV9 Web
| Edited By: |

Updated on: Aug 20, 2021 | 8:35 PM

Share

ಕೊವಿಡ್​ ಎರಡನೇ ಅಲೆ ತಣ್ಣಗಾದ ಬೆನ್ನಲ್ಲೇ ಸಿನಿಮಾ ಕೆಲಸಗಳು ಜೋರಾಗಿವೆ. ನಟ-ನಟಿಯರು, ಕಲಾವಿದರು ಹಾಗೂ ತಾಂತ್ರಿಕ ವರ್ಗ ಸಿನಿಮಾ ಸೆಟ್​ಗೆ ಮರಳಿದೆ. ಈ ಮಧ್ಯೆ, ಮಲಯಾಳಂ ಖ್ಯಾತ ನಟ ಮೋಹನ್​ಲಾಲ್​ ಹಾಗೂ ಟಾಲಿವುಡ್​ ಸ್ಟಾರ್​ ನಟ, ರಾಜಕಾರಣಿ ಪವನ್​ ಕಲ್ಯಾಣ್​ ಅವರು ಹೈದರಾಬಾದ್​ನಲ್ಲಿ ಗುಪ್ತವಾಗಿ ಮೀಟ್​ ಮಾಡಿದ್ದಾರೆ ಎನ್ನುವ ಸುದ್ದಿ ಲೀಕ್​ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್​ ಅಚ್ಚರಿ ಹೊರಹಾಕಿದ್ದಾರೆ.

ಹೈದರಾಬಾದ್​ ಸಿನಿಮಾ ಶೂಟಿಂಗ್​ ಹಾಟ್​ಸ್ಪಾಟ್​. ನಿತ್ಯ ಸಾಕಷ್ಟು ಸಿನಿಮಾಗಳ ಶೂಟಿಂಗ್​ ಇಲ್ಲಿ ನಡೆಯುತ್ತಿದೆ. ಅದೇ ರೀತಿ ಮೋಹನ್​ಲಾಲ್​ ಹಾಗೂ ಪವನ್​ ಕಲ್ಯಾಣ್​ ಹೈದರಾಬಾದ್​ನ ಅಲ್ಯೂಮೀನಿಯಂ ಫ್ಯಾಕ್ಟರಿಯಲ್ಲಿ ತಮ್ಮ ಸಿನಿಮಾ ಶೂಟಿಂಗ್​ ನಡೆಸುತ್ತಿದ್ದಾರೆ. ಸಿನಿಮಾ ಶೂಟಿಂಗ್​ಗೆ ಇಬ್ಬರೂ ಒಂದೇ ಲೊಕೇಶನ್​ಲ್ಲಿರುವ ವಿಚಾರ ಗೊತ್ತಾಗಿದೆ. ಹೀಗಾಗಿ, ಮೋಹನ್​ಲಾಲ್​ ಹಾಗೂ ಪವನ್​ ಕಲ್ಯಾಣ್​ ಭೇಟಿ ಮಾಡಿದ್ದಾರೆ.

ಮಧ್ಯಾಹ್ನದ ಬಿಡುವಿನ ವೇಳೆ ಈ ಭೇಟಿ ನಡೆದಿದೆ. ಇವರಿಗೋಸ್ಕರ ನಿರ್ಮಾಪಕರು ವಿಶೇಷ ಊಟದ ವ್ಯವಸ್ಥೆ ಮಾಡಿದ್ದರು. ಊಟ ಸವಿದ ನಂತರದಲ್ಲಿ ಇಬ್ಬರೂ ರಾಜಕೀಯ ಹಾಗೂ ಸಿನಿಮಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಕೆಲ ಪ್ರಮುಖರು ಮಾತ್ರ ಅವರ ಜತೆ ಇದ್ದರು ಎಂದು ತಿಳಿದು ಬಂದಿದೆ.

ಸಾಮಾನ್ಯವಾಗಿ ಇಂಥ ಭೇಟಿ ನಡೆದರೆ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ಸುದ್ದಿಯಾಗುತ್ತದೆ. ಫೋಟೋಗಳು ವೈರಲ್​ ಆಗುತ್ತವೆ. ಆದರೆ, ಇಬ್ಬರೂ ಹೀರೋಗಳು ಇದಕ್ಕೆ ಹೈಪ್​ ಕೊಡದಂತೆ ಸೂಚನೆ ನೀಡಿದ್ದಾರಂತೆ. ಇದೊಂದು ಸಾಮಾನ್ಯ ಭೇಟಿ. ಒಂದೊಮ್ಮೆ ಭೇಟಿಯಾದ ಫೋಟೋ ವೈರಲ್​ ಆದರೆ, ಅದಕ್ಕೆ ಬೇರೆ ಅರ್ಥ ಬರಬಹುದು ಎನ್ನುವುದು ಚಿತ್ರತಂಡದ ಲೆಕ್ಕಾಚಾರ. ಈ ಕಾರಣಕ್ಕೆ ಸಿನಿಮಾ ತಂಡ ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದು ಬಂದಿದೆ.

ಹೈದರಾಬಾದ್​ನಲ್ಲಿರುವುದರಿಂದ ಮೋಹನ್​ಲಾಲ್​ ಅವರು ತೆಲುಗು ಇಂಡಸ್ಟ್ರಿಯ ಸಾಕಷ್ಟು ಗೆಳೆಯರನ್ನು ಭೇಟಿ ಮಾಡುತ್ತಿದ್ದಾರೆ. ಮೋಹನ್​ ಬಾಬು ಅವರನ್ನು ಮೋಹನ್​ಲಾಲ್​ ಭೇಟಿ ಮಾಡಿದ್ದಾರೆ. ಮೋಹನ್​ಲಾಲ್​ ಹಾಗೂ ಚಿರಂಜೀವಿ ತುಂಬಾನೇ ಕ್ಲೋಸ್​ ಫ್ರೆಂಡ್ಸ್​. ಅವರನ್ನು ಭೇಟಿ ಮಾಡುವ ಆಲೋಚನೆ ಕೂಡ ಮೋಹನ್​ಲಾಲ್ ಹೊಂದಿದ್ದಾರೆ.

ಇದನ್ನೂ ಓದಿ: KGF Chapter 2: ಕೆಜಿಎಫ್​ 2 ಚಿತ್ರಕ್ಕೂ ಮೊದಲೇ ತೆಲುಗು ಸಿನಿಮಾ ಮೂಲಕ ತೆರೆ ಮೇಲೆ ಬರಲಿದ್ದಾರಂತೆ ಯಶ್! ಏನಿದು ಸರ್​ಪ್ರೈಸ್?

ವಿಜಯ್​ ದೇವರಕೊಂಡ ಡಿಮ್ಯಾಂಡ್​ಗೆ ಬೇಸತ್ತ ನಿರ್ದೇಶಕ; ಇದು ದುರಹಂಕಾರ ಎಂದ ಫ್ಯಾನ್ಸ್​

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್