Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ.

Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್
ಬ್ರೋ ಸಿನಿಮಾ ಪೋಸ್ಟರ್
Follow us
|

Updated on: Jul 20, 2023 | 9:06 AM

ಸ್ಟಾರ್ ಹೀರೋಗಳ ಸಿನಿಮಾ ರಿಲೀಸ್ ಆಗುತ್ತದೆ ಎಂದರೆ ಟಿಕೆಟ್ ದರ ಹೆಚ್ಚಿಸಲಾಗುತ್ತದೆ. ಮೊದಲ ದಿನವಂತೂ ಟಿಕೆಟ್ ದರ ಮಿತಿ ಮೀರುತ್ತದೆ. ಈ ಕಾರಣಕ್ಕೆ ಅನೇಕ ಅಭಿಮಾನಿಗಳಿಗೆ ಸಿನಿಮಾ ನೋಡೋಕೆ ಸಾಧ್ಯವಾಗುವುದೇ ಇಲ್ಲ. ಆದರೆ, ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್ (Pawan Kalyan) ಅಭಿನಯದ ‘ಬ್ರೋ’ ಸಿನಿಮಾ (Bro Movie) ವಿಚಾರದಲ್ಲಿ ಹಾಗಾಗುವುದಿಲ್ಲ. ಈ ಬಗ್ಗೆ ನಿರ್ಮಾಪಕರ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ. ಈ ಮೊದಲು ತೆರೆಗೆ ಬಂದ ತಮಿಳಿನ ‘ವಿನೋಧ್ಯ ಸೀತಂ​’ ಚಿತ್ರದ ತೆಲುಗು ರಿಮೇಕ್ ‘ಬ್ರೋ’. ಮೂಲ ಚಿತ್ರದಲ್ಲಿ ತಂಬಿ ರಾಮಯ್ಯ ಹಾಗೂ ಸಮುದ್ರಖಣಿ ನಟಿಸಿದ್ದರು. ಇದರ ರಿಮೇಕ್​ನಲ್ಲಿ ಪವನ್​ ಕಲ್ಯಾಣ್​ ಹಾಗೂ ಸಾಯಿ ಧರಮ್​ ತೇಜ್​ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಇದರ ಜೊತೆಗೆ ಸಿನಿಮಾ ಟಿಕೆಟ್ ದರ ಹೆಚ್ಚಬಹುದು ಎಂದು ಅನೇಕರು ಊಹಿಸಿದ್ದರು. ಆದರೆ, ಹಾಗಾಗುವುದಿಲ್ಲ.

‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಹಾಗೂ ‘ಜೀ ಸ್ಟುಡಿಯೋ’ ಬ್ಯಾನರ್ ಅಡಿಯಲ್ಲಿ ಟಿಜಿ ವಿಶ್ವಪ್ರಸಾದ್ ಹಾಗೂ ವಿವೇಕ್ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ವಿಶ್ವಪ್ರಸಾದ್ ಅವರು ಸಿನಿಪ್ರೇಮಿಗಳಿಗೆ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ. ‘ಬ್ರೋ ಚಿತ್ರದ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ. ಸೀಮಿತ ಬಜೆಟ್‌ನಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಪವನ್ ಕಲ್ಯಾಣ್, ತೇಜ್ ಸಿನಿಮಾದ ಟಿಕೆಟ್ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ’ ಎಂದು ವಿಶ್ವಪ್ರಸಾದ್ ತಿಳಿಸಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಸಾಯಿ ಧರಮ್ ತೇಜ್​ಗೆ ಮತ್ತೆ ಸಂಕಷ್ಟ; ಹೈದರಾಬಾದ್​ ಪೊಲೀಸರಿಂದ ಬಂತು ನೋಟಿಸ್​

‘ಬ್ರೋ’ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಜುಲೈ 21ರಂದು ಟ್ರೇಲರ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ವಿಶೇಷ ಎಂದರೆ ‘ಪ್ರಾಜೆಕ್ಟ್ ಕೆ’ ಚಿತ್ರದ ಗ್ಲಿಂಪ್ಸ್ ಕೂಡ ಜುಲೈ 21ಕ್ಕೇ ರಿಲೀಸ್ ಆಗುತ್ತಿದೆ. ಹೀಗಾಗಿ, ಸಿನಿಪ್ರಿಯರ ಪಾಲಿಗೆ ಡಬಲ್ ಧಮಾಕ ಸಿಕ್ಕಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್