AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ.

Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್
ಬ್ರೋ ಸಿನಿಮಾ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on: Jul 20, 2023 | 9:06 AM

Share

ಸ್ಟಾರ್ ಹೀರೋಗಳ ಸಿನಿಮಾ ರಿಲೀಸ್ ಆಗುತ್ತದೆ ಎಂದರೆ ಟಿಕೆಟ್ ದರ ಹೆಚ್ಚಿಸಲಾಗುತ್ತದೆ. ಮೊದಲ ದಿನವಂತೂ ಟಿಕೆಟ್ ದರ ಮಿತಿ ಮೀರುತ್ತದೆ. ಈ ಕಾರಣಕ್ಕೆ ಅನೇಕ ಅಭಿಮಾನಿಗಳಿಗೆ ಸಿನಿಮಾ ನೋಡೋಕೆ ಸಾಧ್ಯವಾಗುವುದೇ ಇಲ್ಲ. ಆದರೆ, ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್ (Pawan Kalyan) ಅಭಿನಯದ ‘ಬ್ರೋ’ ಸಿನಿಮಾ (Bro Movie) ವಿಚಾರದಲ್ಲಿ ಹಾಗಾಗುವುದಿಲ್ಲ. ಈ ಬಗ್ಗೆ ನಿರ್ಮಾಪಕರ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ. ಈ ಮೊದಲು ತೆರೆಗೆ ಬಂದ ತಮಿಳಿನ ‘ವಿನೋಧ್ಯ ಸೀತಂ​’ ಚಿತ್ರದ ತೆಲುಗು ರಿಮೇಕ್ ‘ಬ್ರೋ’. ಮೂಲ ಚಿತ್ರದಲ್ಲಿ ತಂಬಿ ರಾಮಯ್ಯ ಹಾಗೂ ಸಮುದ್ರಖಣಿ ನಟಿಸಿದ್ದರು. ಇದರ ರಿಮೇಕ್​ನಲ್ಲಿ ಪವನ್​ ಕಲ್ಯಾಣ್​ ಹಾಗೂ ಸಾಯಿ ಧರಮ್​ ತೇಜ್​ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಇದರ ಜೊತೆಗೆ ಸಿನಿಮಾ ಟಿಕೆಟ್ ದರ ಹೆಚ್ಚಬಹುದು ಎಂದು ಅನೇಕರು ಊಹಿಸಿದ್ದರು. ಆದರೆ, ಹಾಗಾಗುವುದಿಲ್ಲ.

‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಹಾಗೂ ‘ಜೀ ಸ್ಟುಡಿಯೋ’ ಬ್ಯಾನರ್ ಅಡಿಯಲ್ಲಿ ಟಿಜಿ ವಿಶ್ವಪ್ರಸಾದ್ ಹಾಗೂ ವಿವೇಕ್ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ವಿಶ್ವಪ್ರಸಾದ್ ಅವರು ಸಿನಿಪ್ರೇಮಿಗಳಿಗೆ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ. ‘ಬ್ರೋ ಚಿತ್ರದ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ. ಸೀಮಿತ ಬಜೆಟ್‌ನಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಪವನ್ ಕಲ್ಯಾಣ್, ತೇಜ್ ಸಿನಿಮಾದ ಟಿಕೆಟ್ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ’ ಎಂದು ವಿಶ್ವಪ್ರಸಾದ್ ತಿಳಿಸಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಸಾಯಿ ಧರಮ್ ತೇಜ್​ಗೆ ಮತ್ತೆ ಸಂಕಷ್ಟ; ಹೈದರಾಬಾದ್​ ಪೊಲೀಸರಿಂದ ಬಂತು ನೋಟಿಸ್​

‘ಬ್ರೋ’ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಜುಲೈ 21ರಂದು ಟ್ರೇಲರ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ವಿಶೇಷ ಎಂದರೆ ‘ಪ್ರಾಜೆಕ್ಟ್ ಕೆ’ ಚಿತ್ರದ ಗ್ಲಿಂಪ್ಸ್ ಕೂಡ ಜುಲೈ 21ಕ್ಕೇ ರಿಲೀಸ್ ಆಗುತ್ತಿದೆ. ಹೀಗಾಗಿ, ಸಿನಿಪ್ರಿಯರ ಪಾಲಿಗೆ ಡಬಲ್ ಧಮಾಕ ಸಿಕ್ಕಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು