AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ.

Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್
ಬ್ರೋ ಸಿನಿಮಾ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on: Jul 20, 2023 | 9:06 AM

Share

ಸ್ಟಾರ್ ಹೀರೋಗಳ ಸಿನಿಮಾ ರಿಲೀಸ್ ಆಗುತ್ತದೆ ಎಂದರೆ ಟಿಕೆಟ್ ದರ ಹೆಚ್ಚಿಸಲಾಗುತ್ತದೆ. ಮೊದಲ ದಿನವಂತೂ ಟಿಕೆಟ್ ದರ ಮಿತಿ ಮೀರುತ್ತದೆ. ಈ ಕಾರಣಕ್ಕೆ ಅನೇಕ ಅಭಿಮಾನಿಗಳಿಗೆ ಸಿನಿಮಾ ನೋಡೋಕೆ ಸಾಧ್ಯವಾಗುವುದೇ ಇಲ್ಲ. ಆದರೆ, ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್ (Pawan Kalyan) ಅಭಿನಯದ ‘ಬ್ರೋ’ ಸಿನಿಮಾ (Bro Movie) ವಿಚಾರದಲ್ಲಿ ಹಾಗಾಗುವುದಿಲ್ಲ. ಈ ಬಗ್ಗೆ ನಿರ್ಮಾಪಕರ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ. ಈ ಮೊದಲು ತೆರೆಗೆ ಬಂದ ತಮಿಳಿನ ‘ವಿನೋಧ್ಯ ಸೀತಂ​’ ಚಿತ್ರದ ತೆಲುಗು ರಿಮೇಕ್ ‘ಬ್ರೋ’. ಮೂಲ ಚಿತ್ರದಲ್ಲಿ ತಂಬಿ ರಾಮಯ್ಯ ಹಾಗೂ ಸಮುದ್ರಖಣಿ ನಟಿಸಿದ್ದರು. ಇದರ ರಿಮೇಕ್​ನಲ್ಲಿ ಪವನ್​ ಕಲ್ಯಾಣ್​ ಹಾಗೂ ಸಾಯಿ ಧರಮ್​ ತೇಜ್​ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಇದರ ಜೊತೆಗೆ ಸಿನಿಮಾ ಟಿಕೆಟ್ ದರ ಹೆಚ್ಚಬಹುದು ಎಂದು ಅನೇಕರು ಊಹಿಸಿದ್ದರು. ಆದರೆ, ಹಾಗಾಗುವುದಿಲ್ಲ.

‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಹಾಗೂ ‘ಜೀ ಸ್ಟುಡಿಯೋ’ ಬ್ಯಾನರ್ ಅಡಿಯಲ್ಲಿ ಟಿಜಿ ವಿಶ್ವಪ್ರಸಾದ್ ಹಾಗೂ ವಿವೇಕ್ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ವಿಶ್ವಪ್ರಸಾದ್ ಅವರು ಸಿನಿಪ್ರೇಮಿಗಳಿಗೆ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ. ‘ಬ್ರೋ ಚಿತ್ರದ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ. ಸೀಮಿತ ಬಜೆಟ್‌ನಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಪವನ್ ಕಲ್ಯಾಣ್, ತೇಜ್ ಸಿನಿಮಾದ ಟಿಕೆಟ್ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ’ ಎಂದು ವಿಶ್ವಪ್ರಸಾದ್ ತಿಳಿಸಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಸಾಯಿ ಧರಮ್ ತೇಜ್​ಗೆ ಮತ್ತೆ ಸಂಕಷ್ಟ; ಹೈದರಾಬಾದ್​ ಪೊಲೀಸರಿಂದ ಬಂತು ನೋಟಿಸ್​

‘ಬ್ರೋ’ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಜುಲೈ 21ರಂದು ಟ್ರೇಲರ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ವಿಶೇಷ ಎಂದರೆ ‘ಪ್ರಾಜೆಕ್ಟ್ ಕೆ’ ಚಿತ್ರದ ಗ್ಲಿಂಪ್ಸ್ ಕೂಡ ಜುಲೈ 21ಕ್ಕೇ ರಿಲೀಸ್ ಆಗುತ್ತಿದೆ. ಹೀಗಾಗಿ, ಸಿನಿಪ್ರಿಯರ ಪಾಲಿಗೆ ಡಬಲ್ ಧಮಾಕ ಸಿಕ್ಕಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ