AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ.

Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್
ಬ್ರೋ ಸಿನಿಮಾ ಪೋಸ್ಟರ್
Follow us
ರಾಜೇಶ್ ದುಗ್ಗುಮನೆ
|

Updated on: Jul 20, 2023 | 9:06 AM

ಸ್ಟಾರ್ ಹೀರೋಗಳ ಸಿನಿಮಾ ರಿಲೀಸ್ ಆಗುತ್ತದೆ ಎಂದರೆ ಟಿಕೆಟ್ ದರ ಹೆಚ್ಚಿಸಲಾಗುತ್ತದೆ. ಮೊದಲ ದಿನವಂತೂ ಟಿಕೆಟ್ ದರ ಮಿತಿ ಮೀರುತ್ತದೆ. ಈ ಕಾರಣಕ್ಕೆ ಅನೇಕ ಅಭಿಮಾನಿಗಳಿಗೆ ಸಿನಿಮಾ ನೋಡೋಕೆ ಸಾಧ್ಯವಾಗುವುದೇ ಇಲ್ಲ. ಆದರೆ, ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್ (Pawan Kalyan) ಅಭಿನಯದ ‘ಬ್ರೋ’ ಸಿನಿಮಾ (Bro Movie) ವಿಚಾರದಲ್ಲಿ ಹಾಗಾಗುವುದಿಲ್ಲ. ಈ ಬಗ್ಗೆ ನಿರ್ಮಾಪಕರ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ. ಈ ಮೊದಲು ತೆರೆಗೆ ಬಂದ ತಮಿಳಿನ ‘ವಿನೋಧ್ಯ ಸೀತಂ​’ ಚಿತ್ರದ ತೆಲುಗು ರಿಮೇಕ್ ‘ಬ್ರೋ’. ಮೂಲ ಚಿತ್ರದಲ್ಲಿ ತಂಬಿ ರಾಮಯ್ಯ ಹಾಗೂ ಸಮುದ್ರಖಣಿ ನಟಿಸಿದ್ದರು. ಇದರ ರಿಮೇಕ್​ನಲ್ಲಿ ಪವನ್​ ಕಲ್ಯಾಣ್​ ಹಾಗೂ ಸಾಯಿ ಧರಮ್​ ತೇಜ್​ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಇದರ ಜೊತೆಗೆ ಸಿನಿಮಾ ಟಿಕೆಟ್ ದರ ಹೆಚ್ಚಬಹುದು ಎಂದು ಅನೇಕರು ಊಹಿಸಿದ್ದರು. ಆದರೆ, ಹಾಗಾಗುವುದಿಲ್ಲ.

‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಹಾಗೂ ‘ಜೀ ಸ್ಟುಡಿಯೋ’ ಬ್ಯಾನರ್ ಅಡಿಯಲ್ಲಿ ಟಿಜಿ ವಿಶ್ವಪ್ರಸಾದ್ ಹಾಗೂ ವಿವೇಕ್ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ವಿಶ್ವಪ್ರಸಾದ್ ಅವರು ಸಿನಿಪ್ರೇಮಿಗಳಿಗೆ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ. ‘ಬ್ರೋ ಚಿತ್ರದ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ. ಸೀಮಿತ ಬಜೆಟ್‌ನಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಪವನ್ ಕಲ್ಯಾಣ್, ತೇಜ್ ಸಿನಿಮಾದ ಟಿಕೆಟ್ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ’ ಎಂದು ವಿಶ್ವಪ್ರಸಾದ್ ತಿಳಿಸಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಸಾಯಿ ಧರಮ್ ತೇಜ್​ಗೆ ಮತ್ತೆ ಸಂಕಷ್ಟ; ಹೈದರಾಬಾದ್​ ಪೊಲೀಸರಿಂದ ಬಂತು ನೋಟಿಸ್​

‘ಬ್ರೋ’ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಜುಲೈ 21ರಂದು ಟ್ರೇಲರ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ವಿಶೇಷ ಎಂದರೆ ‘ಪ್ರಾಜೆಕ್ಟ್ ಕೆ’ ಚಿತ್ರದ ಗ್ಲಿಂಪ್ಸ್ ಕೂಡ ಜುಲೈ 21ಕ್ಕೇ ರಿಲೀಸ್ ಆಗುತ್ತಿದೆ. ಹೀಗಾಗಿ, ಸಿನಿಪ್ರಿಯರ ಪಾಲಿಗೆ ಡಬಲ್ ಧಮಾಕ ಸಿಕ್ಕಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ