AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಟ್ರ್ಯಾಕ್​ಗೆ ಮರಳಿದ ಪವನ್ ಕಲ್ಯಾಣ್ ಸಿನಿಮಾ; ‘ಒಜಿ’ ಕಡೆಯಿಂದ ಬಿಗ್ ಅಪ್​ಡೇಟ್

ಛಾಯಾಗ್ರಾಹಕ ರವಿ ಚಂದ್ರನ್ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ‘ಒಜಿ ಸಿನಿಮಾಗೆ ಮರಳಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಅವರ ಇನ್​ಸ್ಟಾಗ್ರಾಮ್ ಸ್ಟೇಟಸ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸದ್ಯ ರಾಜಕೀಯ ಕೆಲಸಗಳ ಮಧ್ಯೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಮತ್ತೆ ಟ್ರ್ಯಾಕ್​ಗೆ ಮರಳಿದ ಪವನ್ ಕಲ್ಯಾಣ್ ಸಿನಿಮಾ; ‘ಒಜಿ’ ಕಡೆಯಿಂದ ಬಿಗ್ ಅಪ್​ಡೇಟ್
ಪವನ್
ರಾಜೇಶ್ ದುಗ್ಗುಮನೆ
|

Updated on: Oct 15, 2024 | 1:05 PM

Share

ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ರಾಜಕೀಯದ ಕಡೆ ಗಮನ ಹರಿಸಿದರು. ಅವರು ಈಗ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದಂತಿದೆ. ಹೌದು, ‘ಒಜಿ’ ಸಿನಿಮಾದ ಶೂಟಿಂಗ್ ಮತ್ತೆ ಆರಂಭ ಆಗಿದೆ. ಈ ಬಗ್ಗೆ ಸಿನಿಮಾದ ಛಾಯಾಗ್ರಾಹಕ ರವಿ ಚಂದ್ರನ್ ಹೇಳಿದ್ದಾರೆ. ಈ ವಿಚಾರ ಕೇಳಿ ಪವನ್ ಕಲ್ಯಾಣ್ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ಒಜಿ’ ಸಿನಿಮಾ ಘೋಷಣೆ ಆಗಿದ್ದು 2022ರಲ್ಲಿ. ಆ ಬಳಿಕ ಸಿನಿಮಾದ ಕೆಲಸಗಳು ನಿಧಾನವಾಗಿ ಸಾಗಿದವು. ಡಿವಿವಿ ದಾನಯ್ಯ ಅವರು ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಪವನ್ ಕಲ್ಯಾಣ್, ಇಮ್ರಾನ್ ಹಷ್ಮಿ, ಪ್ರಕಾಶ್ ರಾಜ್, ಪ್ರಿಯಾಂಕಾ ಮೋಹನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಇದ್ದ ಕಾರಣ ಅವರು ಸಿನಿಮಾ ಕಡೆ ಗಮನ ಹರಿಸಿರಲಿಲ್ಲ.

ಛಾಯಾಗ್ರಾಹಕ ರವಿ ಚಂದ್ರನ್ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ‘ಒಜಿ ಸಿನಿಮಾಗೆ ಮರಳಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಅವರ ಇನ್​ಸ್ಟಾಗ್ರಾಮ್ ಸ್ಟೇಟಸ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸದ್ಯ ರಾಜಕೀಯ ಕೆಲಸಗಳ ಮಧ್ಯೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

‘ಒಜಿ’ ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ‘ಸಾಹೋ’ ಸಿನಿಮಾ ಮಾಡಿದ್ದ ಸುಜೀತ್ ಅವರು ‘ಒಜಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಪ್ರಭಾಸ್ ನಟನೆಯ ‘ಸಾಹೋ’ ಸಿನಿಮಾ ಹೀನಾಯವಾಗಿ ಸೋತಿತ್ತು. ಈಗ ‘ಒಜಿ’ ಚಿತ್ರ 2025ರ ಮಾರ್ಚ್​​ನಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬರುತ್ತಿದೆ ಎನ್ನುವ ಅಭಿಮಾನಿಗಳಿಗೆ ಮೂಡಿದೆ.

ಇದನ್ನೂ ಓದಿ: ಪವನ್ ಕಲ್ಯಾಣ್ ಹಾಗೂ ಅಲಿ ಗೆಳೆತನ ಸರಿ ಇಲ್ಲ ಎಂದವರಿಗೆ ಇಲ್ಲಿದೆ ಉತ್ತರ

ಇತ್ತೀಚೆಗೆ ಆಂಧ್ರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿತ್ತು. ಈ ವೇಳೆ ಪವನ್ ಕಲ್ಯಾಣ್ ಅವರು ಸಹಾಯಕ್ಕೆ ಧಾವಿಸಿದ್ದರು. ಸರ್ಕಾರದಿಂದ ನೆರವು ನೀಡುವುದರ ಜೊತೆಗೆ ತಮ್ಮ ಖಾತೆಯಿಂದಲೂ ಅವರು ಹಣ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ