AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರಮಲ್ಲು’ ಚಿತ್ರಕ್ಕಾಗಿ ಮಾಸ್ ಅವತಾರ ತಾಳಿದ ಪವನ್ ಕಲ್ಯಾಣ್​; ಬರ್ತ್​ಡೇಗೆ ಟೀಸರ್ ಗಿಫ್ಟ್

ಒಂದು ನಿಮಿಷದ ಟೀಸರ್​ ಸಂಪೂರ್ಣವಾಗಿ ಮಾಸ್ ಆಗಿದೆ. ಫೈಟಿಂಗ್​​ಗೆ ನಿಂತವರನ್ನು ಪವನ್ ಕಲ್ಯಾಣ್ ಎತ್ತಿ ಬಿಸಾಡಿದ್ದಾರೆ. ಅವರು ಪೈಲ್ವಾನ್ ರೀತಿಯಲ್ಲಿ ಮಿಂಚಿದ್ದಾರೆ.

‘ಹರಿ ಹರ ವೀರಮಲ್ಲು’ ಚಿತ್ರಕ್ಕಾಗಿ ಮಾಸ್ ಅವತಾರ ತಾಳಿದ ಪವನ್ ಕಲ್ಯಾಣ್​; ಬರ್ತ್​ಡೇಗೆ ಟೀಸರ್ ಗಿಫ್ಟ್
ಪವನ್ ಕಲ್ಯಾಣ್
TV9 Web
| Edited By: |

Updated on: Sep 02, 2022 | 12:26 PM

Share

ಟಾಲಿವುಡ್​ನ ಪವರ್​ ಸ್ಟಾರ್ ಪವನ್ ಕಲ್ಯಾಣ್ (Pawan Kalyan) ಅವರಿಗೆ ಇಂದು (ಸೆಪ್ಟೆಂಬರ್ 2) ಬರ್ತ್​ಡೇ ಸಂಭ್ರಮ. ಟಾಲಿವುಡ್​ನ ಸ್ಟಾರ್​ ನಟನಿಗೆ ಮಹೇಶ್ ಬಾಬು (Mahesh Babu), ಚಿರಂಜೀವಿ ಸೇರಿ ಅನೇಕ ಸೆಲೆಬ್ರಿಟಿ​ಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಫ್ಯಾನ್ಸ್ ಸಂಭ್ರಮಾಚರಣೆ ಕೂಡ ಮುಗಿಲು ಮುಟ್ಟಿದೆ. ಈ ಮಧ್ಯೆ ಅವರ ಮುಂದಿನ ಚಿತ್ರ ‘ಹರಿ ಹರ ವೀರಮಲ್ಲು’  (Hari Hara Veera Mallu Movie)ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್​ನಲ್ಲಿ ಪವನ್ ಕಲ್ಯಾಣ್ ಅವರು ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.

ಸೆಲೆಬ್ರಿಟಿಗಳ ಬರ್ತ್​ಡೇ ಸಂದರ್ಭದಲ್ಲಿ ಹೊಸ ಚಿತ್ರದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆಗೋದು ಸಾಮಾನ್ಯ. ಅದೇ ರೀತಿ ಪವನ್ ಕಲ್ಯಾಣ್ ಜನ್ಮದಿನದ ಪ್ರಯುಕ್ತ ‘ಹರಿ ಹರ ವೀರಮಲ್ಲು’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ಮಾಸ್​ ಅಂಶಗಳಿವೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ.

ಒಂದು ನಿಮಿಷದ ಟೀಸರ್​ ಸಂಪೂರ್ಣವಾಗಿ ಮಾಸ್ ಆಗಿದೆ. ಫೈಟಿಂಗ್​​ಗೆ ನಿಂತವರನ್ನು ಪವನ್ ಕಲ್ಯಾಣ್ ಎತ್ತಿ ಬಿಸಾಡಿದ್ದಾರೆ. ಅವರು ಪೈಲ್ವಾನ್ ರೀತಿಯಲ್ಲಿ ಮಿಂಚಿದ್ದಾರೆ. ಎಂ.ಎಂ. ಕೀರವಾಣಿ ಅವರ ಹಿನ್ನೆಲೆ ಸಂಗೀತ ಟೀಸರ್​ನಲ್ಲಿ ಗಮನ ಸೆಳೆದಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ
Image
ಪವನ್​ ಕಲ್ಯಾಣ್ ನಿರ್ಧಾರಕ್ಕೆ ಬೇಸರ; ಸಿನಿಮಾದಿಂದಲೇ ಹೊರ ನಡೆದ ಪೂಜಾ ಹೆಗ್ಡೆ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ಮೊದಲ ದಿನವೇ 10 ಕೋಟಿ ರೂಪಾಯಿ ನಷ್ಟ ಅನುಭವಿಸಿದ ‘ಭೀಮ್ಲಾ ನಾಯಕ್​’

‘ಹರಿ ಹರ ವೀರಮಲ್ಲು’ ಚಿತ್ರಕ್ಕೆ ಜಾಗರಲಮುಡಿ ರಾಧಾಕೃಷ್ಣ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ ಅನುಭವ ಅವರಿಗೆ ಇದೆ. ಎ ದಯಾಕರ್ ರಾವ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರ ಯಾವಾಗ ರಿಲೀಸ್ ಆಗಲಿದೆ ಎಂದು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ಪೊಸಾನಿ ಕೃಷ್ಣ ಮುರಳಿ ಮೇಲೆ ಪವನ್ ಕಲ್ಯಾಣ್ ಅಭಿಮಾನಿಗಳಿಂದ ಹಲ್ಲೆಗೆ ಯತ್ನ, 10 ಜನರ ಬಂಧನ; ಏನಿದು ಪ್ರಕರಣ?

ಈ ವರ್ಷ ತೆರೆಗೆ ಬಂದ ‘ಭೀಮ್ಲಾ ನಾಯಕ್’ ಸಿನಿಮಾದಿಂದ ಪವನ್ ಕಲ್ಯಾಣ್ ವೃತ್ತಿ ಜೀವನದಲ್ಲಿ ಮತ್ತೊಂದು ಗೆಲುವು ಸಿಕ್ಕಿದೆ. ಆ ಗೆಲುವಿನ ಬಳಿಕ ಅವರು ಒಪ್ಪಿಕೊಂಡ ಸಿನಿಮಾ ಇದಾಗಿದೆ. ಪವನ್ ಕಲ್ಯಾಣ್ ಅವರು ರಾಜಕೀಯ ಹಾಗೂ ಸಿನಿಮಾ ಎರಡರಲ್ಲೂ ಬ್ಯುಸಿ ಇದ್ದಾರೆ. ಎರಡನ್ನೂ ಅವರು ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ.

Follow Us
Web contact
Web contact

TV9 Kannada

Read More
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ