AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawan Kalyan: ಚಿತ್ರಮಂದಿರದಲ್ಲಿ ದಾಂಧಲೆ, ಪವನ್ ಕಲ್ಯಾಣ್ ಅಭಿಮಾನಿಗಳ ಬಂಧನ

Bro: ಪವನ್ ಕಲ್ಯಾಣ್​ರ 'ಬ್ರೋ' ಸಿನಿಮಾ ವೀಕ್ಷಣೆ ವೇಳೆ ಚಿತ್ರಮಂದಿರಕ್ಕೆ ಹಾನಿ ಮಾಡಿದ ಆರೋಪದಲ್ಲಿ ಪವನ್​ ಕಲ್ಯಾಣ್​ರ ಅಭಿಮಾನಿಗಳನ್ನು ಬಂಧಿಸಲಾಗಿದೆ.

Pawan Kalyan: ಚಿತ್ರಮಂದಿರದಲ್ಲಿ ದಾಂಧಲೆ, ಪವನ್ ಕಲ್ಯಾಣ್ ಅಭಿಮಾನಿಗಳ ಬಂಧನ
ಪವನ್ ಕಲ್ಯಾಣ್
ಮಂಜುನಾಥ ಸಿ.
|

Updated on: Jul 30, 2023 | 4:41 PM

Share

ನಟ ಪವನ್ ಕಲ್ಯಾಣ್ (Pawan Kalyan) ತೆಲುಗು ಚಿತ್ರರಂಗದಲ್ಲಿ (Tollywood) ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಅಗ್ರಗಣ್ಯರು. ಪವನ್ ರೀತಿಯಲ್ಲಿಯೇ ಅವರ ಅಭಿಮಾನಿಗಳು ಸಹ ತುಸು ಕ್ರೇಜಿ. ಪವನ್ ಕಲ್ಯಾಣ್ ರಾಜಕೀಯಕ್ಕೆ ಬಂದ ಬಳಿಕವಂತೂ ಪವನ್​ರ ಅಭಿಮಾನಿಗಳು ಮನೊರಂಜನೆ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಮೆಚ್ಚಿನ ನಟನನ್ನು ಬೆಂಬಲಿಸುತ್ತಿದ್ದಾರೆ. ಇದೀಗ ಪವನ್ ಕಲ್ಯಾಣ್​ರ ‘ಬ್ರೋ‘ (BRO) ಸಿನಿಮಾ ಬಿಡುಗಡೆ ಆಗಿದ್ದು, ಯಥಾವತ್ತು ಪವನ್​ರ ಅಭಿಮಾನಿಗಳು ಚಿತ್ರಮಂದಿರದಲ್ಲಿ ಹುಚ್ಚು ಅಭಿಮಾನ ಪ್ರದರ್ಶಿಸಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಆಂಧ್ರ ಪ್ರದೇಶದ ಪಾರ್ವತಿಪುರಂನ ಸಂಧ್ಯಾ ಚಿತ್ರಮಂದಿರದಲ್ಲಿ ಪವನ್ ಕಲ್ಯಾಣ್​ರ ಅಭಿಮಾನಿಗಳು ‘ಬ್ರೋ’ ಸಿನಿಮಾ ಪ್ರದರ್ಶನದ ವೇಳೆ ಸಿನಿಮಾದ ಸ್ಕ್ರೀನ್​ಗೆ ಹಾಲಿನ ಅಭಿಷೇಕ ಮಾಡಿ ಸ್ಕ್ರೀನ್ ಅನ್ನು ಹಾಳುಗೆಡವಿದ್ದಾರೆ. ಚಿತ್ರಮಂದಿರದ ಸ್ಕ್ರೀನ್ ಅನ್ನು ಹಾಳು ಮಾಡಿದ ಕಾರಣ ಚಿತ್ರಮಂದಿರದ ಮಾಲೀಕ ಪೊಲೀಸರಿಗೆ ದೂರು ನೀಡಿದ್ದು, ಪವನ್ ಕಲ್ಯಾಣ್​ರ ಕೆಲವು ಕಿಡಿಗೇಡಿ ಅಭಿಮಾನಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪವನ್ ಕಲ್ಯಾಣ್ ಅಭಿಮಾನಿಗಳಿಂದ ಚಿತ್ರಮಂದಿರಗಳಿಗೆ ಹಾನಿ ಆಗುತ್ತಿರುವುದು ಇದು ಮೊದಲೇನೂ ಅಲ್ಲ. ವರ್ಷದ ಹಿಂದೆ ಪವನ್​ರ ಕಮ್​ಬ್ಯಾಕ್ ಸಿನಿಮಾ ‘ವಕೀಲ್ ಸಾಬ್’ ಬಿಡುಗಡೆ ಆದಾಗಲೂ ಆಂಧ್ರ ಹಾಗೂ ತೆಲಂಗಾಣದಲ್ಲಿ ಪವನ್ ಅಭಿಮಾನಿಗಳು ಅಬ್ಬರ ಎಬ್ಬಿಸಿದ್ದರು. ಆಂಧ್ರದಲ್ಲಿ ಸಿನಿಮಾದ ಬಿಡುಗಡೆಗೆ ಸರ್ಕಾರ ಸಮಸ್ಯೆಗಳನ್ನು ಮಾಡಿದಾಗಲಂತೂ ಹಲವು ಚಿತ್ರಮಂದಿರಗಳನ್ನು ಪವನ್ ಅಭಿಮಾನಿಗಳು ಜಖಂ ಮಾಡಿದ್ದರು.

ಇದನ್ನೂ ಓದಿ:ಮೊದಲ ದಿನವೇ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿದ ‘ಬ್ರೋ’: ಪವನ್ ಕ್ರೇಜ್ ತಗ್ಗಿಲ್ಲ

ಕೆಲವು ದಿನಗಳ ಹಿಂದೆ ಪವನ್​ರ ಸೂಪರ್ ಹಿಟ್ ಸಿನಿಮಾ ‘ಖುಷಿ’ ಮರು ಬಿಡುಗಡೆ ಆದಾಗಲೂ ಸಹ ಹಲವು ಚಿತ್ರಮಂದಿರಗಳಲ್ಲಿ ಪವನ್ ಅಭಿಮಾನಿಗಳು ದಾಂಧಲೆ ಮಾಡಿದ್ದರು. ಚಿತ್ರಮಂದಿರದಲ್ಲಿ ಬೆಂಕಿ ಹಚ್ಚಿ, ಸೀಟುಗಳನ್ನು ಕಿತ್ತು, ಸ್ಕ್ರೀನ್​ಗೆ ಹಾಲಿನ ಅಭಿಷೇಕಗಳನ್ನು ಮಾಡಿದ್ದರು. ಆ ಸಮಯದಲ್ಲಿ ಸಹ ಚಿರಾಲದ ಶಾಂತಿ ಚಿತ್ರಮಂದಿರದಲ್ಲಿ ಪವನ್​ ಕಲ್ಯಾಣ್​ರ ಎಂಟು ಮಂದಿ ಅಭಿಮಾನಿಗಳನ್ನು ಪೊಲೀಸರು ಬಂಧಿಸಿದ್ದರು.

ಪವನ್​ ಕಲ್ಯಾಣ್​ಗೆ ಆಂಧ್ರ ಹಾಗೂ ತೆಲಂಗಾಣದಲ್ಲಿ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅವರ ಸಿನಿಮಾ ಬಿಡುಗಡೆ ಆದಾಗಲೆಲ್ಲ ಅಭಿಮಾನಿಗಳು ಹೀಗೆ ದಾಂಧಲೆ ಮಾಡುವುದು ಸಾಮಾನ್ಯ ಎನ್ನುವಂತಾಗಿದೆ. ಇದೀಗ ಪವನ್ ಕಲ್ಯಾಣ್​ರ ‘ಬ್ರೋ’ ಸಿನಿಮಾ ಬಿಡುಗಡೆ ಆಗಿದೆ. ಬಿಡುಗಡೆ ಆದ ಮೊದಲ ದಿನವೇ ಸುಮಾರು 37 ಕೋಟಿ ರೂಪಾಯಿಗಳನ್ನು ‘ಬ್ರೋ’ ಸಿನಿಮಾ ಬಾಚಿಕೊಂಡಿದೆ. ಆದಷ್ಟು ಬೇಗ 100 ಕೋಟಿ ಹಣವನ್ನು ಈ ಸಿನಿಮಾ ಬಾಚುವ ನಿರೀಕ್ಷೆ ಇದೆ.

‘ಬ್ರೋ’ ಸಿನಿಮಾದಲ್ಲಿ ಪವನ್ ಕಲ್ಯಾಣ್​ ಹಾಗೂ ಸಾಯಿ ಧರಮ್ ತೇಜ್ ಒಟ್ಟಿಗೆ ನಟಿಸಿದ್ದಾರೆ. ಸಿನಿಮಾವು ತಮಿಳು ಸಿನಿಮಾದ ರೀಮೇಕ್ ಆಗಿದೆ. ಮೂಲ ಸಿನಿಮಾವನ್ನು ನಿರ್ದೇಶಿಸಿದ್ದ ಸಮುದ್ರಕಿಣಿ ಈ ಸಿನಿಮಾವನ್ನೂ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ ಸಹ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ ಯಶಸ್ವಿಯಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು