Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರದಲ್ಲಿ ಬೆಂಕಿ ಹಚ್ಚಿದ ಪವನ್ ಕಲ್ಯಾಣ್ ಅಭಿಮಾನಿಗಳು

Pawan Kalyan: ಪವನ್ ಕಲ್ಯಾಣ್​ರ ಮರು ಬಿಡುಗಡೆ ಆದ ಸಿನಿಮಾ ನೋಡುವ ವೇಳೆ ಪವನ್ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದಾರೆ.

ಚಿತ್ರಮಂದಿರದಲ್ಲಿ ಬೆಂಕಿ ಹಚ್ಚಿದ ಪವನ್ ಕಲ್ಯಾಣ್ ಅಭಿಮಾನಿಗಳು
ಪವನ್-ತೊಲಿಪ್ರೇಮ
Follow us
ಮಂಜುನಾಥ ಸಿ.
|

Updated on: Jul 01, 2023 | 6:06 PM

ತೆಲುಗು ಸಿನಿಮಾ ನಟರ ಅಭಿಮಾನಿಗಳ (Fans) ಅಭಿಮಾನ ಹುಚ್ಚಾಟಕ್ಕೆ ತಿರುಗಿದಂತಿದೆ. ಮೆಚ್ಚಿನ ನಟನ ಸಿನಿಮಾ ಬಿಡುಗಡೆ ಆದರೆ ಕಟೌಟ್ ಕಟ್ಟುವುದು, ಹಾರ ಹಾಕುವುದು, ಆಹಾರ ವಿತರಿಸುವುದು, ಇತರರಿಗೆ ಉಚಿತ ಟಿಕೆಟ್ ನೀಡುವುದು ತಮಟೆ, ಡೊಳ್ಳು ಕರೆಸಿ ಕುಣಿಯುವುದು ಸಾಮಾನ್ಯ. ಕರ್ನಾಟಕದಲ್ಲಿ ಇದೇ ನಡೆಯುತ್ತದೆ. ಆದರೆ ತೆಲುಗು ನಟರ ಅಭಿಮಾನಿಗಳು ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವ ಉದ್ಧಟತನ ಪ್ರದರ್ಶಿಸುತ್ತಿದ್ದಾರೆ. ಈ ಹಿಂದೆ ಕೆಲವು ಸ್ಟಾರ್ ನಟರ ಅಭಿಮಾನಿಗಳು ಚಿತ್ರಮಂದಿರಗಳಿಗೆ ಹಾನಿ ಮಾಡಿದ್ದರು ಈಗ ಪವನ್ ಕಲ್ಯಾಣ್ (Pawan Kalyan) ಅಭಿಮಾನಿಗಳ ಸರದಿ.

ಪವನ್ ಕಲ್ಯಾಣ್ ನಟನೆಯ ‘ತೊಲಿ ಪ್ರೇಮ’ ಸಿನಿಮಾ ಬಿಡುಗಡೆ ಆಗಿ 25 ವರ್ಷವಾದ ಬೆನ್ನಲ್ಲೆ ಸಿನಿಮಾ ತೆಲುಗು ರಾಜ್ಯಗಳಲ್ಲಿ ಮರು ಬಿಡುಗಡೆ ಆಗಿದೆ. ಪವನ್ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಆದರೆ ಕೆಲವು ಅಭಿಮಾನಿಗಳು ಇದೇ ಸಂದರ್ಭವನ್ನು ತಮ್ಮ ಹುಚ್ಚಾಟ ಪ್ರದರ್ಶಿಸಲಿಕ್ಕೆ ಬಳಸಿಕೊಂಡಿದ್ದು, ಚಿತ್ರಮಂದಿರದಲ್ಲಿ ಬೆಂಕಿ ಹಚ್ಚಿದ್ದಾರೆ.

ವಿಜಯವಾಡದ ಕಪರ್ದಿ ಎಸಿ ಚಿತ್ರಮಂದಿರದಲ್ಲಿ ಪವನ್ ಕಲ್ಯಾಣ್ ನಟನೆಯ ತೊಲಿ ಪ್ರೇಮ ಸಿನಿಮಾ ಪ್ರದರ್ಶನ ಮಾಡಲಾಗುತ್ತಿದೆ. ನಿರೀಕ್ಷೆಯಂತೆ ದೊಡ್ಡ ಸಂಖ್ಯೆಯಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳು ಸಿನಿಮಾಕ್ಕೆ ಬಂದಿದ್ದಾರೆ. ಆದರೆ ಕೆಲವು ಅಭಿಮಾನಿಗಳು ಪವನ್ ಕಲ್ಯಾಣ್ ಎಂಟ್ರಿ ಸೀನ್ ಸಮಯದಲ್ಲಿ ಚಿತ್ರಮಂದಿರದ ಒಳಗೆ ಬೆಂಕಿ ಹಚ್ಚಿದ್ದಾರೆ. ಮಾತ್ರವಲ್ಲದೆ ಚಿತ್ರಮಂದಿರದ ಸ್ಕ್ರೀನ್ ಅನ್ನು ಹರಿದಿದ್ದಾರೆ ಹಾಗೂ ಸೀಟುಗಳನ್ನು ಮುರಿದಿದ್ದಾರೆ. ಪವನ್ ಕಲ್ಯಾಣ್ ಅಭಿಮಾನಿಗಳ ಹುಚ್ಚಾಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಪವನ್ ಕಲ್ಯಾಣ್ ಸಿನಿಮಾ ನೋಡಿ ಸಿಟ್ಟಾಗಿದ್ದ ಅಮಿತಾಬ್ ಬಚ್ಚನ್: ಯಾಕೆ? ಸಿನಿಮಾ ಯಾವುದು?

ತೊಲಿಪ್ರೇಮ ಸಿನಿಮಾಕ್ಕೆ ಎರಡೂ ತೆಲುಗು ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅದೇ ಮಾದರಿಯಲ್ಲಿ ಪವನ್ ಅಭಿಮಾನಿಗಳು ಹಲವು ಚಿತ್ರಮಂದಿರಗಳಲ್ಲಿ ಅಶಿಸ್ತು ಪ್ರದರ್ಶಿಸಿರುವುದು ಸಹ ಸುದ್ದಿಯಾಗುತ್ತಿವೆ. ತೊಲಿ ಪ್ರೇಮ ಸಿನಿಮಾವು ಪವನ್​ರ ಹೊಸ ಸಿನಿಮಾ ಮಾದರಿಯಲ್ಲಿಯೇ ದೊಡ್ಡ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಆಗಿದೆ.

ತೊಲಿ ಪ್ರೇಮ ಸಿನಿಮಾವು ಮೊದಲ ಬಾರಿಗೆ 1998 ರಲ್ಲಿ ಬಿಡುಗಡೆ ಆಗಿತ್ತು. ಕೀರ್ತಿ ರೆಡ್ಡಿ ನಾಯಕಿಯಾಗಿದ್ದ ಆ ಸಿನಿಮಾದ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿತು. ಸಿನಿಮಾವನ್ನು ಕರುಣಾಕರನ್ ನಿರ್ದೇಶನ ಮಾಡಿದ್ದರು. ಇದು ಅವರ ಮೊದಲ ಸಿನಿಮಾ. ಸಿನಿಮಾ ಕಲ್ಟ್ ಕ್ಲಾಸಿಕ್ ಎಂದೆನಿಸಿಕೊಂಡಿದ್ದು ಪವನ್ ಅಭಿಮಾನಿಗಳು ಮತ್ತೆ-ಮತ್ತೆ ಚಿತ್ರಮಂದಿರಕ್ಕೆ ಬಂದು ತೊಲಿ ಪ್ರೇಮ ಸಿನಿಮಾ ನೋಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು