AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ರಾಜಕೀಯ ಯಶಸ್ಸಿನಿಂದ ಪವನ್ ಕಲ್ಯಾಣ್​ಗೆ ಅಸೂಯೆ; ಸತ್ಯ ಒಪ್ಪಿಕೊಂಡ ಡಿಸಿಎಂ

ವಿಜಯ್ ಅವರ ಯಶಸ್ಸನ್ನು ತಮಗೆ ಹೋಲಿಸುತ್ತಿರುವ ಜನರಿಗೆ ಪವನ್ ಕಲ್ಯಾಣ್ ತಿರುಗೇಟು ನೀಡಿದ್ದಾರೆ. ‘ಪಕ್ಕದ ರಾಜ್ಯದಲ್ಲಿ ನಟರೊಬ್ಬರು ಪಕ್ಷ ಕಟ್ಟಿ ಸಿಎಂ ಆದರು, ನೀವೂ ಆಂಧ್ರದಲ್ಲಿ ಹಾಗೆಯೇ ಮಾಡಬೇಕಿತ್ತು ಎಂದು ಹಲವರು ನನಗೆ ಸಂದೇಶ ಕಳುಹಿಸುತ್ತಿದ್ದಾರೆ. ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ರಾಜಕೀಯ ಪರಿಸ್ಥಿತಿಗಳು ತೀರಾ ಭಿನ್ನವಾಗಿವೆ. ಈ ಹೋಲಿಕೆ ಸರಿಯಲ್ಲ’ ಎಂದಿದ್ದಾರೆ.

ದಳಪತಿ ವಿಜಯ್ ರಾಜಕೀಯ ಯಶಸ್ಸಿನಿಂದ ಪವನ್ ಕಲ್ಯಾಣ್​ಗೆ ಅಸೂಯೆ; ಸತ್ಯ ಒಪ್ಪಿಕೊಂಡ ಡಿಸಿಎಂ
ಪವನ್-ವಿಜಯ್
ರಾಜೇಶ್ ದುಗ್ಗುಮನೆ
|

Updated on:May 27, 2026 | 7:09 AM

Share

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಇತ್ತೀಚೆಗೆ ತಮಿಳು ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ತಮಿಳುನಾಡು ಸಿಎಂ ವಿಜಯ್ ಅವರ ರಾಜಕೀಯ ಯಶಸ್ಸಿನ ಬಗ್ಗೆ ಆಸಕ್ತಿದಾಯಕ ಮಾತುಗಳನ್ನಾಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಜಯ್ ಅವರ ಗೆಲುವನ್ನು ನೋಡಿ ತಮಗೆ ಕೊಂಚ “ಅಸೂಯೆ” ಆಯಿತು ಎಂದು ತಮಾಷೆಯಾಗಿ ಹೇಳಿದ್ದಾರೆ.

‘ನಾನು ಇತ್ತೀಚೆಗೆ ತಮಿಳುನಾಡು ರಾಜಕೀಯವನ್ನು ಗಮನಿಸುತ್ತಿದ್ದೇನೆ. ಅವರು ಎಷ್ಟು ಆರಾಮವಾಗಿ ಚುನಾವಣೆ ಎದುರಿಸಿದರು ಎಂದರೆ ನನಗೆ ಸ್ವಲ್ಪ ಅಸೂಯೆ ಆಯಿತು. ಕಟೌಟ್‌ಗಳು ಮತ್ತು ಹೊಲೊಗ್ರಾಮ್‌ಗಳನ್ನು ಬಳಸಿಕೊಂಡು ಆರಾಮವಾಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೆ ನಾನು ಕಳೆದ 15 ವರ್ಷಗಳಿಂದ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇನೆ.. ಆದರೆ’ ಎಂದು ಪವನ್ ಕಲ್ಯಾಣ್ ನಕ್ಕರು. 15 ವರ್ಷ ಹೋರಾಟ ಮಾಡಿದರೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂಬುದು ಈ ಮಾತಿನ ಅರ್ಥ. ಪಕ್ಷವನ್ನು ಮುನ್ನಡೆಸಲು ಮತ್ತು ಜನರ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳಲು ಆಳವಾದ ಜ್ಞಾನ ಹಾಗೂ ತಳಮಟ್ಟದ ಶ್ರಮ ಬೇಕು ಎಂಬುದನ್ನು ಅವರು ಇದೇ ವೇಳೆ ನೆನಪಿಸಿಕೊಂಡಿದ್ದಾರೆ.

ವಿಜಯ್ ಅವರ ಯಶಸ್ಸನ್ನು ತಮಗೆ ಹೋಲಿಸುತ್ತಿರುವ ಜನರಿಗೆ ಪವನ್ ಕಲ್ಯಾಣ್ ತಿರುಗೇಟು ನೀಡಿದ್ದಾರೆ. ‘ಪಕ್ಕದ ರಾಜ್ಯದಲ್ಲಿ ನಟರೊಬ್ಬರು ಪಕ್ಷ ಕಟ್ಟಿ ಸಿಎಂ ಆದರು, ನೀವೂ ಆಂಧ್ರದಲ್ಲಿ ಹಾಗೆಯೇ ಮಾಡಬೇಕಿತ್ತು ಎಂದು ಹಲವರು ನನಗೆ ಸಂದೇಶ ಕಳುಹಿಸುತ್ತಿದ್ದಾರೆ. ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ರಾಜಕೀಯ ಪರಿಸ್ಥಿತಿಗಳು ತೀರಾ ಭಿನ್ನವಾಗಿವೆ. ಈ ಹೋಲಿಕೆ ಸರಿಯಲ್ಲ’ ಎಂದಿದ್ದಾರೆ.

ಪವನ್ ಕಲ್ಯಾಣ್ ಆಡಿದ ಮಾತು

2019ರ ಚುನಾವಣೆಯಲ್ಲಿ ತಮಗೆ ಎದುರಾದ ಕಠಿಣ ಸವಾಲುಗಳು ಮತ್ತು ಸ್ವಂತ ಸಚಿವರೇ ಸಾಥ್ ನೀಡದ ದಿನಗಳನ್ನು ನೆನಪಿಸಿಕೊಂಡ ಪವನ್, ‘ನಮ್ಮ ಹೋರಾಟದ ಹಾದಿಯೇ ಬೇರೆ, ದಯವಿಟ್ಟು ಯಾರೊಂದಿಗೂ ಹೋಲಿಸಬೇಡಿ’ ಎಂದು ತಮ್ಮ ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ರಾಜಕೀಯದಲ್ಲಿ ದಶಕಕ್ಕೂ ಹೆಚ್ಚು ಕಾಲ ಸೈಕಲ್ ಹೊಡೆದು, ಹಂತಹಂತವಾಗಿ ಬೆಳೆದು ಇಂದು ಡಿಸಿಎಂ ಆಗಿರುವ ಪವನ್ ಕಲ್ಯಾಣ್ ಅವರ ಈ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Wed, 27 May 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!
ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ