AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ರಾಜಕೀಯ ಯಶಸ್ಸಿನಿಂದ ಪವನ್ ಕಲ್ಯಾಣ್​ಗೆ ಅಸೂಯೆ; ಸತ್ಯ ಒಪ್ಪಿಕೊಂಡ ಡಿಸಿಎಂ

ವಿಜಯ್ ಅವರ ಯಶಸ್ಸನ್ನು ತಮಗೆ ಹೋಲಿಸುತ್ತಿರುವ ಜನರಿಗೆ ಪವನ್ ಕಲ್ಯಾಣ್ ತಿರುಗೇಟು ನೀಡಿದ್ದಾರೆ. ‘ಪಕ್ಕದ ರಾಜ್ಯದಲ್ಲಿ ನಟರೊಬ್ಬರು ಪಕ್ಷ ಕಟ್ಟಿ ಸಿಎಂ ಆದರು, ನೀವೂ ಆಂಧ್ರದಲ್ಲಿ ಹಾಗೆಯೇ ಮಾಡಬೇಕಿತ್ತು ಎಂದು ಹಲವರು ನನಗೆ ಸಂದೇಶ ಕಳುಹಿಸುತ್ತಿದ್ದಾರೆ. ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ರಾಜಕೀಯ ಪರಿಸ್ಥಿತಿಗಳು ತೀರಾ ಭಿನ್ನವಾಗಿವೆ. ಈ ಹೋಲಿಕೆ ಸರಿಯಲ್ಲ’ ಎಂದಿದ್ದಾರೆ.

ದಳಪತಿ ವಿಜಯ್ ರಾಜಕೀಯ ಯಶಸ್ಸಿನಿಂದ ಪವನ್ ಕಲ್ಯಾಣ್​ಗೆ ಅಸೂಯೆ; ಸತ್ಯ ಒಪ್ಪಿಕೊಂಡ ಡಿಸಿಎಂ
ಪವನ್-ವಿಜಯ್
ರಾಜೇಶ್ ದುಗ್ಗುಮನೆ
|

Updated on:May 27, 2026 | 7:09 AM

Share

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಇತ್ತೀಚೆಗೆ ತಮಿಳು ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ತಮಿಳುನಾಡು ಸಿಎಂ ವಿಜಯ್ ಅವರ ರಾಜಕೀಯ ಯಶಸ್ಸಿನ ಬಗ್ಗೆ ಆಸಕ್ತಿದಾಯಕ ಮಾತುಗಳನ್ನಾಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಜಯ್ ಅವರ ಗೆಲುವನ್ನು ನೋಡಿ ತಮಗೆ ಕೊಂಚ “ಅಸೂಯೆ” ಆಯಿತು ಎಂದು ತಮಾಷೆಯಾಗಿ ಹೇಳಿದ್ದಾರೆ.

‘ನಾನು ಇತ್ತೀಚೆಗೆ ತಮಿಳುನಾಡು ರಾಜಕೀಯವನ್ನು ಗಮನಿಸುತ್ತಿದ್ದೇನೆ. ಅವರು ಎಷ್ಟು ಆರಾಮವಾಗಿ ಚುನಾವಣೆ ಎದುರಿಸಿದರು ಎಂದರೆ ನನಗೆ ಸ್ವಲ್ಪ ಅಸೂಯೆ ಆಯಿತು. ಕಟೌಟ್‌ಗಳು ಮತ್ತು ಹೊಲೊಗ್ರಾಮ್‌ಗಳನ್ನು ಬಳಸಿಕೊಂಡು ಆರಾಮವಾಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೆ ನಾನು ಕಳೆದ 15 ವರ್ಷಗಳಿಂದ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇನೆ.. ಆದರೆ’ ಎಂದು ಪವನ್ ಕಲ್ಯಾಣ್ ನಕ್ಕರು. 15 ವರ್ಷ ಹೋರಾಟ ಮಾಡಿದರೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂಬುದು ಈ ಮಾತಿನ ಅರ್ಥ. ಪಕ್ಷವನ್ನು ಮುನ್ನಡೆಸಲು ಮತ್ತು ಜನರ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳಲು ಆಳವಾದ ಜ್ಞಾನ ಹಾಗೂ ತಳಮಟ್ಟದ ಶ್ರಮ ಬೇಕು ಎಂಬುದನ್ನು ಅವರು ಇದೇ ವೇಳೆ ನೆನಪಿಸಿಕೊಂಡಿದ್ದಾರೆ.

ವಿಜಯ್ ಅವರ ಯಶಸ್ಸನ್ನು ತಮಗೆ ಹೋಲಿಸುತ್ತಿರುವ ಜನರಿಗೆ ಪವನ್ ಕಲ್ಯಾಣ್ ತಿರುಗೇಟು ನೀಡಿದ್ದಾರೆ. ‘ಪಕ್ಕದ ರಾಜ್ಯದಲ್ಲಿ ನಟರೊಬ್ಬರು ಪಕ್ಷ ಕಟ್ಟಿ ಸಿಎಂ ಆದರು, ನೀವೂ ಆಂಧ್ರದಲ್ಲಿ ಹಾಗೆಯೇ ಮಾಡಬೇಕಿತ್ತು ಎಂದು ಹಲವರು ನನಗೆ ಸಂದೇಶ ಕಳುಹಿಸುತ್ತಿದ್ದಾರೆ. ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ರಾಜಕೀಯ ಪರಿಸ್ಥಿತಿಗಳು ತೀರಾ ಭಿನ್ನವಾಗಿವೆ. ಈ ಹೋಲಿಕೆ ಸರಿಯಲ್ಲ’ ಎಂದಿದ್ದಾರೆ.

ಪವನ್ ಕಲ್ಯಾಣ್ ಆಡಿದ ಮಾತು

2019ರ ಚುನಾವಣೆಯಲ್ಲಿ ತಮಗೆ ಎದುರಾದ ಕಠಿಣ ಸವಾಲುಗಳು ಮತ್ತು ಸ್ವಂತ ಸಚಿವರೇ ಸಾಥ್ ನೀಡದ ದಿನಗಳನ್ನು ನೆನಪಿಸಿಕೊಂಡ ಪವನ್, ‘ನಮ್ಮ ಹೋರಾಟದ ಹಾದಿಯೇ ಬೇರೆ, ದಯವಿಟ್ಟು ಯಾರೊಂದಿಗೂ ಹೋಲಿಸಬೇಡಿ’ ಎಂದು ತಮ್ಮ ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ರಾಜಕೀಯದಲ್ಲಿ ದಶಕಕ್ಕೂ ಹೆಚ್ಚು ಕಾಲ ಸೈಕಲ್ ಹೊಡೆದು, ಹಂತಹಂತವಾಗಿ ಬೆಳೆದು ಇಂದು ಡಿಸಿಎಂ ಆಗಿರುವ ಪವನ್ ಕಲ್ಯಾಣ್ ಅವರ ಈ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Wed, 27 May 26

Follow Us
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು