AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮದೇ ಸಿನಿಮಾ ಹೆಸರು ಮರೆತ ಪವನ್​ ಕಲ್ಯಾಣ್​; ವೇದಿಕೆ ಮೇಲೆ ತಡಬಡಾಯಿಸಿದ ಹೀರೋ

ಮಹಾ ಮ್ಯಾಕ್ಸ್ ಎಂಟರ್​ಟೇನ್​ಮೆಂಟ್ ಚಾನೆಲ್​ನ ಲಾಂಚ್ ಮಾಡಲು ಬಂದಿದ್ದರು ಪವನ್ ಕಲ್ಯಾಣ್. ಈ ವೇಳೆ ಅವರು ತಮ್ಮ ಸಿನಿಮಾ ಹೆಸರು ಹೇಳಲು ಹೋದರು. ಆದರೆ, ಅದು ನೆನಪಿಗೆ ಬರಲೇ ಇಲ್ಲ. ಅಷ್ಟಕ್ಕೂ ಅವರು ಹೇಳಲು ಹೊರಟಿದ್ದ ಸಿನಿಮಾದ ಹೆಸರು ‘ಉಸ್ತಾದ್ ಭಗತ್ ಸಿಂಗ್’.

ತಮ್ಮದೇ ಸಿನಿಮಾ ಹೆಸರು ಮರೆತ ಪವನ್​ ಕಲ್ಯಾಣ್​; ವೇದಿಕೆ ಮೇಲೆ ತಡಬಡಾಯಿಸಿದ ಹೀರೋ
ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
| Edited By: |

Updated on:Jan 22, 2024 | 11:40 AM

Share

ಪವನ್ ಕಲ್ಯಾಣ್ (Pawan Kalyan) ಅವರಿಗೆ ಇತ್ತೀಚೆಗೆ ಸಿನಿಮಾ ಮೇಲೆ ಇರುವ ಆಸಕ್ತಿ ಕೊಂಚ ಕಡಿಮೆ ಆದಂತೆ ಇದೆ. ಅವರು ತಮ್ಮ ಗಮನವನ್ನೆಲ್ಲ ರಾಜಕೀಯದ ಮೇಲೆ ತೋರಿಸುತ್ತಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಪವನ್ ಅವರು ತಮ್ಮದೇ ಸಿನಿಮಾದ ಹೆಸರನ್ನು ಮರೆತಿದ್ದಾರೆ. ಹಾಗಂತ ಅದೆಷ್ಟೋ ವರ್ಷಗಳ ಹಿಂದೆ ಮಾಡಿದ ಸಿನಿಮಾದ ಟೈಟಲ್​ನ ಅವರು ಮರೆತಿದ್ದಲ್ಲ. ಸದ್ಯ ಕೆಲಸ ಪ್ರಗತಿಯಲ್ಲಿರುವ ಸಿನಿಮಾ ಹೆಸರೇ ನೆನಪಿಗೆ ಬಂದಿಲ್ಲ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮಹಾ ಮ್ಯಾಕ್ಸ್ ಎಂಟರ್​ಟೇನ್​ಮೆಂಟ್ ಚಾನೆಲ್​ನ ಲಾಂಚ್ ಮಾಡಲು ಬಂದಿದ್ದರು ಪವನ್ ಕಲ್ಯಾಣ್. ಈ ವೇಳೆ ಅವರು ತಮ್ಮ ಸಿನಿಮಾ ಹೆಸರು ಹೇಳಲು ಹೋದರು. ಆದರೆ, ಅದು ನೆನಪಿಗೆ ಬರಲೇ ಇಲ್ಲ. ಅಷ್ಟಕ್ಕೂ ಅವರು ಹೇಳಲು ಹೊರಟಿದ್ದ ಸಿನಿಮಾದ ಹೆಸರು ‘ಉಸ್ತಾದ್ ಭಗತ್ ಸಿಂಗ್’. ಆದರೆ, ಅವರು ಉಸ್ತಾದ್ ಎನ್ನುವ ಬದಲು ‘ಸರ್ದಾರ್ ಭಗತ್ ಸಿಂಗ್’ ಎಂದು ಹೇಳಿದರು. ಆ ಬಳಿಕ ಸರ್ದಾರ್ ಅಲ್ಲ ಅನ್ನೋದು ಅವರಿಗೂ ಗೊತ್ತಾಯಿತು. ಸಿನಿಮಾದ ನಿಜವಾದ ಟೈಟಲ್ ನೆನಪಿಸಿಕೊಳ್ಳಲು ಪ್ರಯತ್ನಿಸಿದರು. ಅಲ್ಲಿದ್ದವರು ಪವನ್​ಗೆ ಶೀರ್ಷಿಕೆ ಯಾವುದು ಎಂಬುದನ್ನು ನೆನಪಿಸಿದರು.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಚರ್ಚೆ ಆಗುತ್ತಿದೆ. ಅನೇಕರು ಇದು ಪವನ್ ಕಲ್ಯಾಣ್​ಗೆ ಆದ ಅವಮಾನ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಈ ರೀತಿಯ ತಪ್ಪುಗಳು ಎಲ್ಲರಿಂದಲೂ ಆಗುತ್ತವೆ ಎಂದಿದ್ದಾರೆ. ‘ಕೆಲವೊಮ್ಮೆ ಕೆಲವು ವಿಚಾರಗಳು ಮರೆತು ಹೋಗುತ್ತವೆ. ಅದನ್ನು ಇಷ್ಟು ದೊಡ್ಡ ವಿಚಾರವನ್ನಾಗಿ ಮಾಡುವ ಅವಶ್ಯಕತೆ ಇಲ್ಲ’ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 20 ವರ್ಷಗಳ ಬಳಿಕ ನಟನೆಗೆ ಮರಳಿದ ಪವನ್ ಕಲ್ಯಾಣ್ ಮಾಜಿ ಪತ್ನಿ

ಸದ್ಯ ಪವನ್ ಕಲ್ಯಾಣ್ ಅವರು ‘ಉಸ್ತಾದ್ ಭಗತ್ ಸಿಂಗ್’, ‘ಒಜಿ’ ಹಾಗೂ ‘ಹರಿ ಹರ ವೀರ ಮಲ್ಲು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹರೀಶ್ ಶಂಕರ್ ಅವರು ‘ಉಸ್ತಾದ್ ಭಗತ್ ಸಿಂಗ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2016ರಲ್ಲಿ ರಿಲೀಸ್ ಆದ ತಮಿಳಿನ ‘ತೇರಿ’ ಚಿತ್ರವನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ರಾಜಕೀಯದಲ್ಲಿ ಪವನ್ ಬ್ಯುಸಿ ಇರುವುದರಿಂದ ಚಿತ್ರದ ಕೆಲಸ ವಿಳಂಬ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:06 am, Wed, 25 October 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು