AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಶೂಟಿಂಗ್​​ಗೆ ಬರಲು ಎರಡು ಷರತ್ತು ಹಾಕಿದ ಪವನ್ ಕಲ್ಯಾಣ್

Pawan Kalyan: ಚುನಾವಣೆ ಗೆದ್ದು ಉಪಮುಖ್ಯ ಮಂತ್ರಿ ಆದ ಬಳಿಕ ಚಿತ್ರರಂಗದಿಂದ ದೂರಾಗಿದ್ದಾರೆ ಪವನ್ ಕಲ್ಯಾಣ್. ಅವರ ಹೊಸ ಸಿನಿಮಾಗಳ ಚಿತ್ರೀಕರಣ ನಿಂತು ವರ್ಷವೇ ಆಗಿದೆ. ಇದೀಗ ಸಿನಿಮಾ ಶೂಟಿಂಗ್ ಪ್ರಾರಂಭ ಮಾಡುವ ಸೂಚನೆ ನೀಡಿದ್ದು, ಎರಡು ಷರತ್ತುಗಳನ್ನು ಪವನ್ ಹಾಕಿದ್ದಾರೆ.

ಸಿನಿಮಾ ಶೂಟಿಂಗ್​​ಗೆ ಬರಲು ಎರಡು ಷರತ್ತು ಹಾಕಿದ ಪವನ್ ಕಲ್ಯಾಣ್
Pawan Kalyan
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 03, 2024 | 2:28 PM

Share

ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶ ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಆಂಧ್ರದ ಉಪಮುಖ್ಯಮಂತ್ರಿ ಆಗಿದ್ದಾರೆ. ಹೀಗಾಗಿ, ಸಿನಿಮಾಗಳ ಕಡೆಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಯಾವುದೇ ಪ್ರಕೃತಿ ವಿಕೋಪ ಆದರೆ ಅವರು ಅಲ್ಲಿಗೆ ತೆರಳಿ ಪರಿಹಾರ ನೀಡುವ ಕೆಲಸ ಮಾಡಬೇಕಿದೆ. ಈ ಮಧ್ಯೆ ಪವನ್ ಕಲ್ಯಾಣ್ ಅವರು ಸಿನಿಮಾ ಶೂಟಿಂಗ್ಗೆ ಒಪ್ಪಿದ್ದು, ಎರಡು ಷರತ್ತುಗಳನ್ನು ಹಾಕಿದ್ದಾಗಿ ವರದಿ ಆಗಿದೆ.

‘ಹರಿ ಹರ ವೀರಮಲ್ಲು’, ‘ಒಜಿ’ ಹಾಗೂ ‘ಉಸ್ತಾದ್’ ಸಿನಿಮಾಗಳಲ್ಲಿ ಪವನ್ ಕಲ್ಯಾಣ್ ತೊಡಗಿಕೊಂಡಿದ್ದಾರೆ. ಯಾವುದಾದರೂ ಚಿತ್ರವನ್ನು ಅರ್ಧಕ್ಕೆ ನಿಲ್ಲಿಸೋಣ ಎಂದರೆ ಈಗಾಗಲೇ ಒಂದಷ್ಟು ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಈ ಕಾರಣದಿಂದ ಅವರು ಈ ಚಿತ್ರದ ಶೂಟ್ನ ಮಾಡಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ, ನಿರ್ಮಾಪಕರಿಗೆ ಅವರು ಕೆಲ ಷರತ್ತು ಹಾಕಿದ್ದಾರೆ.

ತೆಲುಗು ಸಿನಿಮಾಗಳಿಗೆ ಬಹುತೇಕ ಹೈದರಾಬಾದ್ನಲ್ಲಿ ಸೆಟ್ ಹಾಕಲಾಗುತ್ತದೆ. ಆದರೆ, ಆಂಧ್ರದಿಂದ ಹೈದರಾಬಾದ್ಗೆ ನಿತ್ಯ ತೆರಳೋದು ಪವನ್ ಕಲ್ಯಾಣ್ಗೆ ಕಷ್ಟ ಆಗುತ್ತದೆ. ಹೀಗಾಗಿ, ಆಂಧ್ರದ ಮಂಗಲಗಿರಿಯಲ್ಲೇ ಸೆಟ್ ಹಾಕಲು ಪವನ್ ಸೂಚಿಸಿದ್ದಾರೆ. ಅಂದರೆ ಮಾತ್ರ ಅವರು ಶೂಟ್ನಲ್ಲಿ ಭಾಗಿ ಆಗಲಿದ್ದಾರೆ. ಮತ್ತೊಂದು ಷರತ್ತು ಸಿನಿಮಾ ತಂಡದವರ ಚಿಂತೆಗೆ ಕಾರಣ ಆಗಿದೆ.

ಒಂದು ಸಿನಿಮಾದ ಶೂಟಿಂಗ್ ಬೇಗ ಪೂರ್ಣಗೊಳ್ಳಬೇಕು ಎಂದರೆ ಪ್ರಮುಖ ಪಾತ್ರಧಾರಿಗಳು ಕನಿಷ್ಠ 9-10 ಗಂಟೆ ಶೂಟ್ ಮಾಡಬೇಕು. ಆದರೆ, ಪವನ್ ಕಲ್ಯಾಣ್ ಅವರು ನಿತ್ಯ ಎರಡರಿಂದ ಮೂರು ಗಂಟೆ ಮಾತ್ರ ನೀಡೋದಾಗಿ ಹೇಳಿದ್ದಾರೆ. ಉಳಿದ ಸಮಯದಲ್ಲಿ ಅವರು ರಾಜ್ಯದ ಕೆಲಸಗಳನ್ನು ನೋಡಿಕೊಳ್ಳಲಿದ್ದಾರೆ.

ಇದನ್ನೂ ಓದಿ:ಪವನ್ ಕಲ್ಯಾಣ್​​ಗೆ ಧನ್ಯವಾದ ಹೇಳಿದ ಅಲ್ಲು ಅರ್ಜುನ್; ನಡೆಯಿತು ಅಚ್ಚರಿಯ ಬೆಳವಣಿಗೆ

ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಸಿನಿಮಾ ರಂಗ ತೊರೆಯುವ ಉದ್ದೇಶ ಇದೆ. ಆದರೆ, ಒಪ್ಪಿಕೊಂಡ ಸಿನಿಮಾಗಳನ್ನು ಮಾಡಲೇಬೇಕಾದ ಅನಿವಾರ್ಯತೆ ಇದೆ. ಸದ್ಯ ಹೈದರಾಬಾದ್ನಲ್ಲಿ ಈಗಾಗಲೇ ಸಿನಿಮಾದ ಸೆಟ್ಗಳನ್ನು ಹಾಕಲಾಗಿತ್ತು ಎನ್ನಲಾಗಿದೆ. ಆದರೆ, ಪವನ್ ಕಲ್ಯಾಣ್ ಕೋರಿಕೆಯಂತೆ ಈಗ ಈ ಭಾಗದಲ್ಲಿ ಸೆಟ್ ಹಾಕಬೇಕಿದೆ. ಇದು ನಿರ್ಮಾಪಕರಿಗೆ ಹೊರೆ ಆಗಲಿದೆ.

ಸದ್ಯ ‘ಹರಿ ಹರ ವೀರಮಲ್ಲೂ’ ಪೂರ್ಣಗೊಳ್ಳುವ ಹಂತದಲ್ಲಿ ಇದೆ. ‘ಉಸ್ತಾದ್’ ಚಿತ್ರಕ್ಕೆ ಇನ್ನೂ ಮೂರು ತಿಂಗಳು ಶೂಟಿಂಗ್ ಬಾಕಿ ಇದೆ. ಇದನ್ನು ಪವನ್ ಕಲ್ಯಾಣ್ ಹೇಗೆ ಪೂರ್ಣಗೊಳಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Tue, 3 December 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ